ಪತ್ನಿಕೊಂದು ದಂತ ವೈದ್ಯ ಆತ್ಮಹತ್ಯೆ ಕೇಸ್​: ರೇವಂತ್ ಸಾವಿನ ಸುದ್ದಿ ಕೇಳಿ ಪ್ರಾಣಬಿಟ್ಟ ಪ್ರಿಯತಮೆ!

ಚಿಕ್ಕಮಗಳೂರು: ಪತ್ನಿ ಕೊಂದು ದಂತವೈದ್ಯ ಡಾ.ರೇವಂತ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ. ಮೃತ ಡಾ.ರೇವಂತ್ ಪ್ರಿಯತಮೆ ಹರ್ಷಿತಾ(32) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ರೇವಂತ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿಯುತ್ತಿದ್ದಂತೆ ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿ ಹರ್ಷಿತಾ ಪ್ಯಾನಿಗೆ ನೇಣಿ ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ತುಮಕೂರು ನಿವಾಸಿಯಾದ ಹರ್ಷಿತಾ ಆತ್ಮಹತ್ಯೆಗೆ ಮುನ್ನ ಡೆತ್‌ ನೋಟ್ ಬರೆದಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರಲ್ಲಿ ಫೆಬ್ರವರಿ 17ರಂದು ಪತ್ನಿ ಕವಿತಾಳ ಕತ್ತುಸೀಳಿ ಡಾ.ರೇವಂತ್ ಬರ್ಬರವಾಗಿ ಕೊಲೆ ಮಾಡಿದ್ದ. ನಂತರ ದರೋಡೆಕೋರರ ಕೃತ್ಯವೆಂದು ಬಿಂಬಿಸಲು […]

ಪತ್ನಿಕೊಂದು ದಂತ ವೈದ್ಯ ಆತ್ಮಹತ್ಯೆ ಕೇಸ್​: ರೇವಂತ್ ಸಾವಿನ ಸುದ್ದಿ ಕೇಳಿ ಪ್ರಾಣಬಿಟ್ಟ ಪ್ರಿಯತಮೆ!
ಸಾಧು ಶ್ರೀನಾಥ್​

Updated on: Feb 23, 2020 | 1:32 PM

ಚಿಕ್ಕಮಗಳೂರು: ಪತ್ನಿ ಕೊಂದು ದಂತವೈದ್ಯ ಡಾ.ರೇವಂತ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ. ಮೃತ ಡಾ.ರೇವಂತ್ ಪ್ರಿಯತಮೆ ಹರ್ಷಿತಾ(32) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ರೇವಂತ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿಯುತ್ತಿದ್ದಂತೆ ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿ ಹರ್ಷಿತಾ ಪ್ಯಾನಿಗೆ ನೇಣಿ ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ತುಮಕೂರು ನಿವಾಸಿಯಾದ ಹರ್ಷಿತಾ ಆತ್ಮಹತ್ಯೆಗೆ ಮುನ್ನ ಡೆತ್‌ ನೋಟ್ ಬರೆದಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರಲ್ಲಿ ಫೆಬ್ರವರಿ 17ರಂದು ಪತ್ನಿ ಕವಿತಾಳ ಕತ್ತುಸೀಳಿ ಡಾ.ರೇವಂತ್ ಬರ್ಬರವಾಗಿ ಕೊಲೆ ಮಾಡಿದ್ದ. ನಂತರ ದರೋಡೆಕೋರರ ಕೃತ್ಯವೆಂದು ಬಿಂಬಿಸಲು ಪ್ರಯತ್ನಿಸಿದ್ದ. ಆದರೆ ಪೊಲೀಸರ ತನಿಖೆ ವೇಳೆ ಸಿಕ್ಕಿ ಬೀಳುವ ಆತಂಕದಿಂದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ವಿಷಯ ತಿಳಿಯುತ್ತಿದ್ದಂತೆ ರೇವಂತ್ ಪ್ರಿಯತಮೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ:
ಬಿಎಂಟಿಸಿ ಬಸ್ ಚಾಲಕ ಸುಧೀಂದ್ರ ಪತ್ನಿ ಹರ್ಷಿತಾ ಮನೆಯಲ್ಲಿ‌  ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪತಿಯ ವಿರುದ್ದ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣು ತಡರಾತ್ರಿ ಮನೆಯಲ್ಲಿ‌ರುವ ಫ್ಯಾನಿಗೆ ಹಗ್ಗಕಟ್ಟಿ ನೇಣಿಗೆ ಶರಣಾಗಿದ್ದಾಳೆ. ಪತಿಯ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಮದ್ಯ ಸೇವಿಸಿ ಬಂದು ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದ. ಇದೇ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆಂದು ಸಾಯುವ ಮುನ್ನ ಹರ್ಷಿತಾ ಡೆತ್​ನೋಟ್ ಬರೆದಿದ್ದಾಳೆ. ಈ ಸಂಬಂಧ ಆರ್​ಆರ್ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Published On - 1:02 pm, Sun, 23 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us