AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಲ್ಲೇ ಖೈದಿ ಸಾವು ಪ್ರಕರಣಕ್ಕೆ ಟ್ವಿಸ್ಟ್; ಪೊಲೀಸರ ಥರ್ಡ್​​ ಡಿಗ್ರಿ ಟಾರ್ಚರ್​ನಿಂದ ಸಾವು ಆರೋಪ?

ಡಕಾಯಿತಿ ಪ್ರಕರಣದ ಆರೋಪಿಯಾಗಿದ್ದ ಗಣೇಶ್ ಎಂಬಾತನ ಸಾವಿಗೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರ ಥರ್ಡ್​​ ಡಿಗ್ರಿ ಟಾರ್ಚರ್​ನಿಂದ ಗಣೇಶ್ ಮೃತಪಟ್ಟಿರುವ ಆರೋಪ ಬೆಂಗಳೂರಿನ ಹೆಚ್​ಎಸ್​ಆರ್ ಪೊಲೀಸ್​ ಠಾಣೆ(HSR Layout Police station)ಯ ಸಿಬ್ಬಂದಿ​ ವಿರುದ್ಧ ಕೇಳಿಬಂದಿದೆ.

ಜೈಲಲ್ಲೇ ಖೈದಿ ಸಾವು ಪ್ರಕರಣಕ್ಕೆ ಟ್ವಿಸ್ಟ್; ಪೊಲೀಸರ ಥರ್ಡ್​​ ಡಿಗ್ರಿ ಟಾರ್ಚರ್​ನಿಂದ ಸಾವು ಆರೋಪ?
ಮೃತ ಗಣೇಶ್​, ಸ್ನೇಹಿತ ವಿನೋದ್​
ರಾಮು, ಆನೇಕಲ್​
| Updated By: ಕಿರಣ್ ಹನುಮಂತ್​ ಮಾದಾರ್|

Updated on: Dec 31, 2023 | 4:12 PM

Share

ಬೆಂಗಳೂರು, ಡಿ.31: ಡಕಾಯಿತಿ ಪ್ರಕರಣದ ಆರೋಪಿಯಾಗಿದ್ದ ಗಣೇಶ್ ಎಂಬಾತನ ಸಾವಿಗೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರ ಥರ್ಡ್​​ ಡಿಗ್ರಿ ಟಾರ್ಚರ್​ನಿಂದ ಗಣೇಶ್ ಮೃತಪಟ್ಟಿರುವ ಆರೋಪ ಬೆಂಗಳೂರಿನ ಹೆಚ್​ಎಸ್​ಆರ್ ಪೊಲೀಸ್​ ಠಾಣೆ(HSR Layout Police station)ಯ ಸಿಬ್ಬಂದಿ​ ವಿರುದ್ಧ ಕೇಳಿಬಂದಿದೆ. ‘ಗಣೇಶ್​ ಮರ್ಮಾಂಗಕ್ಕೆ ಖಾರದಪುಡಿ ಎರಚಲಾಗಿದ್ದು, ನೋವಿನ ನಡುವೆಯೂ 4 ದಿನ ಠಾಣೆಯಲ್ಲಿರಿಸಿಕೊಂಡಿದ್ದರು. ಆರೋಗ್ಯ ಹದಗೆಡುತ್ತಿದ್ದಂತೆ ತರಾತುರಿಯಲ್ಲಿ ಜೈಲಿಗೆ ಶಿಫ್ಟ್​ ಮಾಡಿದ್ದಾರೆ. ಈ ಪೊಲೀಸರ ಟಾರ್ಚರ್​ನಿಂದಲೇ ಗಣೇಶ್​ ಮೃತನಾಗಿದ್ದಾನೆ ಎಂದು ಪೊಲೀಸರ ವಿರುದ್ಧ ಮೃತ ಗಣೇಶ್ ಸ್ನೇಹಿತ ವಿನೋದ್ ಎಂಬಾತ ಗಂಭೀರ ಆರೋಪ ಮಾಡಿದ್ದಾನೆ.

‘ನನಗೆ ಮೃತ ಗಣೇಶ್ ಎರಡೂವರೆ ಲಕ್ಷ ಹಣ ನೀಡಿದ್ದ. ಈ ಹಿನ್ನಲೆ ಹಲವು ಬಾರಿ ಪೋನ್ ಕರೆ ಮಾಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ನನ್ನನ್ನು ಸಹ 5 ದಿನ ಠಾಣೆಯಲ್ಲಿ ಅಕ್ರಮವಾಗಿರಿಸಿಕೊಂಡಿದ್ದರು. ಬಳಿಕ ನನ್ನ ಹೊರ ಬಿಡಲು 6 ಲಕ್ಷ ಹಣ, ಚಿನ್ನ ತೆಗೆದುಕೊಂಡಿದ್ದಲ್ಲದೇ, ಜೊತೆಗೆ ನನ್ನ ತಂದೆಯ ಮೇಲೂ ಹಲ್ಲೆ ಮಾಡಿದ್ದರು. ನಂತರ ಬೆದರಿಸಿ ನಮ್ಮ ತಂದೆ ಬಳಿ ಹೆಚ್ ಎಸ್ಆರ್ ಬಡಾವಣೆ ಸಬ್ ಇನ್ಸ್ಪೆಕ್ಟರ್ ಬಸವರಾಜ್ ಎಂಬುವವರು ಹಣ ಹಣ ಮತ್ತು ಚಿನ್ನ ಪಡೆದುಕೊಂಡರು ಎಂದು ಮೃತ ಗಣೇಶ್ ಸ್ನೇಹಿತ ವಿನೋದ್ ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಹೊಟ್ಟೆ ನೋವಿನಿಂದ ನರಳಿ ಸಾವು, ವೈದ್ಯರ ವಿರುದ್ಧ ಕುಟುಂಬಸ್ಥರ ಆಕ್ರೋಶ

ಘಟನೆ ವಿವರ

ಡಕಾಯಿತಿ ಪ್ರಕರಣದ ಹಿನ್ನಲೆ ಡಿ.22ನೇ ತಾರೀಖು ಹೆಚ್ಎಸ್ಆರ್ ಲೇಔಟ್ ಪೊಲೀಸರು ಆರೋಪಿ ಮಡಿವಾಳದ ತಾವರೆಕೆರೆ ಮೂಲದ ಗಣೇಶನನ್ನು ಬಂಧಿಸಿದ್ದರು. ಬಳಿಕ ತನಿಖೆಗೆ ಒಳಪಡಿಸಿ ಪರಪ್ಪನ ಅಗ್ರಹಾರ ಜೈಲಿಗೆ ಬಿಟ್ಟಿದ್ದರು. ನಿನ್ನೆ ಆಸ್ಪತ್ರೆಗೆ ಆರೋಪಿ ಗಣೇಶ್​ನನ್ನು ಕರೆದೊಯ್ಯಲಾಗಿತ್ತು. ಆದರೆ, ತೀವ್ರ ನೋವಿನಿಂದ ಬಳಲಿದ್ದ ಆರೋಪಿ ಗಣೇಶ್, ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು