AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಲ್ಲೇ ಖೈದಿ ಸಾವು ಪ್ರಕರಣಕ್ಕೆ ಟ್ವಿಸ್ಟ್; ಪೊಲೀಸರ ಥರ್ಡ್​​ ಡಿಗ್ರಿ ಟಾರ್ಚರ್​ನಿಂದ ಸಾವು ಆರೋಪ?

ಡಕಾಯಿತಿ ಪ್ರಕರಣದ ಆರೋಪಿಯಾಗಿದ್ದ ಗಣೇಶ್ ಎಂಬಾತನ ಸಾವಿಗೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರ ಥರ್ಡ್​​ ಡಿಗ್ರಿ ಟಾರ್ಚರ್​ನಿಂದ ಗಣೇಶ್ ಮೃತಪಟ್ಟಿರುವ ಆರೋಪ ಬೆಂಗಳೂರಿನ ಹೆಚ್​ಎಸ್​ಆರ್ ಪೊಲೀಸ್​ ಠಾಣೆ(HSR Layout Police station)ಯ ಸಿಬ್ಬಂದಿ​ ವಿರುದ್ಧ ಕೇಳಿಬಂದಿದೆ.

ಜೈಲಲ್ಲೇ ಖೈದಿ ಸಾವು ಪ್ರಕರಣಕ್ಕೆ ಟ್ವಿಸ್ಟ್; ಪೊಲೀಸರ ಥರ್ಡ್​​ ಡಿಗ್ರಿ ಟಾರ್ಚರ್​ನಿಂದ ಸಾವು ಆರೋಪ?
ಮೃತ ಗಣೇಶ್​, ಸ್ನೇಹಿತ ವಿನೋದ್​
ರಾಮು, ಆನೇಕಲ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 31, 2023 | 4:12 PM

Share

ಬೆಂಗಳೂರು, ಡಿ.31: ಡಕಾಯಿತಿ ಪ್ರಕರಣದ ಆರೋಪಿಯಾಗಿದ್ದ ಗಣೇಶ್ ಎಂಬಾತನ ಸಾವಿಗೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರ ಥರ್ಡ್​​ ಡಿಗ್ರಿ ಟಾರ್ಚರ್​ನಿಂದ ಗಣೇಶ್ ಮೃತಪಟ್ಟಿರುವ ಆರೋಪ ಬೆಂಗಳೂರಿನ ಹೆಚ್​ಎಸ್​ಆರ್ ಪೊಲೀಸ್​ ಠಾಣೆ(HSR Layout Police station)ಯ ಸಿಬ್ಬಂದಿ​ ವಿರುದ್ಧ ಕೇಳಿಬಂದಿದೆ. ‘ಗಣೇಶ್​ ಮರ್ಮಾಂಗಕ್ಕೆ ಖಾರದಪುಡಿ ಎರಚಲಾಗಿದ್ದು, ನೋವಿನ ನಡುವೆಯೂ 4 ದಿನ ಠಾಣೆಯಲ್ಲಿರಿಸಿಕೊಂಡಿದ್ದರು. ಆರೋಗ್ಯ ಹದಗೆಡುತ್ತಿದ್ದಂತೆ ತರಾತುರಿಯಲ್ಲಿ ಜೈಲಿಗೆ ಶಿಫ್ಟ್​ ಮಾಡಿದ್ದಾರೆ. ಈ ಪೊಲೀಸರ ಟಾರ್ಚರ್​ನಿಂದಲೇ ಗಣೇಶ್​ ಮೃತನಾಗಿದ್ದಾನೆ ಎಂದು ಪೊಲೀಸರ ವಿರುದ್ಧ ಮೃತ ಗಣೇಶ್ ಸ್ನೇಹಿತ ವಿನೋದ್ ಎಂಬಾತ ಗಂಭೀರ ಆರೋಪ ಮಾಡಿದ್ದಾನೆ.

‘ನನಗೆ ಮೃತ ಗಣೇಶ್ ಎರಡೂವರೆ ಲಕ್ಷ ಹಣ ನೀಡಿದ್ದ. ಈ ಹಿನ್ನಲೆ ಹಲವು ಬಾರಿ ಪೋನ್ ಕರೆ ಮಾಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ನನ್ನನ್ನು ಸಹ 5 ದಿನ ಠಾಣೆಯಲ್ಲಿ ಅಕ್ರಮವಾಗಿರಿಸಿಕೊಂಡಿದ್ದರು. ಬಳಿಕ ನನ್ನ ಹೊರ ಬಿಡಲು 6 ಲಕ್ಷ ಹಣ, ಚಿನ್ನ ತೆಗೆದುಕೊಂಡಿದ್ದಲ್ಲದೇ, ಜೊತೆಗೆ ನನ್ನ ತಂದೆಯ ಮೇಲೂ ಹಲ್ಲೆ ಮಾಡಿದ್ದರು. ನಂತರ ಬೆದರಿಸಿ ನಮ್ಮ ತಂದೆ ಬಳಿ ಹೆಚ್ ಎಸ್ಆರ್ ಬಡಾವಣೆ ಸಬ್ ಇನ್ಸ್ಪೆಕ್ಟರ್ ಬಸವರಾಜ್ ಎಂಬುವವರು ಹಣ ಹಣ ಮತ್ತು ಚಿನ್ನ ಪಡೆದುಕೊಂಡರು ಎಂದು ಮೃತ ಗಣೇಶ್ ಸ್ನೇಹಿತ ವಿನೋದ್ ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಹೊಟ್ಟೆ ನೋವಿನಿಂದ ನರಳಿ ಸಾವು, ವೈದ್ಯರ ವಿರುದ್ಧ ಕುಟುಂಬಸ್ಥರ ಆಕ್ರೋಶ

ಘಟನೆ ವಿವರ

ಡಕಾಯಿತಿ ಪ್ರಕರಣದ ಹಿನ್ನಲೆ ಡಿ.22ನೇ ತಾರೀಖು ಹೆಚ್ಎಸ್ಆರ್ ಲೇಔಟ್ ಪೊಲೀಸರು ಆರೋಪಿ ಮಡಿವಾಳದ ತಾವರೆಕೆರೆ ಮೂಲದ ಗಣೇಶನನ್ನು ಬಂಧಿಸಿದ್ದರು. ಬಳಿಕ ತನಿಖೆಗೆ ಒಳಪಡಿಸಿ ಪರಪ್ಪನ ಅಗ್ರಹಾರ ಜೈಲಿಗೆ ಬಿಟ್ಟಿದ್ದರು. ನಿನ್ನೆ ಆಸ್ಪತ್ರೆಗೆ ಆರೋಪಿ ಗಣೇಶ್​ನನ್ನು ಕರೆದೊಯ್ಯಲಾಗಿತ್ತು. ಆದರೆ, ತೀವ್ರ ನೋವಿನಿಂದ ಬಳಲಿದ್ದ ಆರೋಪಿ ಗಣೇಶ್, ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್