AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru News: ಬಿಸಿ ರೋಡ್​ನಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ, ಇಬ್ಬರ ಬಂಧನ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಎನ್​ಐಎ ತನಿಖೆ ನಡೆಸುತ್ತಿದೆ. ಈ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಂಟ್ವಾಳ ನಗರ ಡಿವೈಎಸ್​ಪಿ ಕಚೇರಿಯ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಬಿಸಿ ರೋಡ್​ನಲ್ಲಿ ನಡೆದಿದೆ.

Mangaluru News: ಬಿಸಿ ರೋಡ್​ನಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ, ಇಬ್ಬರ ಬಂಧನ
ಬಿಸಿ ರೋಡ್​ನಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on:Jul 28, 2023 | 3:07 PM

Share

ಮಂಗಳೂರು, ಜುಲೈ 28: ಕುಟುಂಬದೊಂದಿಗೆ ಹೊಟೇಲ್​ಗೆ ಹೋಗಿ ವಾಪಸ್ ಆಗುತ್ತಿದ್ದ ಪೊಲೀಸ್ ಸಿಬ್ಬಂದಿಯೊಬ್ಬರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿ ರೋಡ್​ನಲ್ಲಿ (BC Road) ನಿನ್ನೆ (ಜುಲೈ 27) ರಾತ್ರಿ ನಡೆದಿದೆ. ಮುಸ್ಲಿಂ-ಹಿಂದೂ ಹುಡುಗಿಯರನ್ನು ಎಲ್ಲಿ ಕರೆದುಕೊಂಡು ಹೋಗಿದ್ದೀಯಾ? ಎಂದು ಪ್ರಶ್ನಿಸಿ ಹಲ್ಲೆಗೆ (Assault) ಮುಂದಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಎನ್​ಐಎ ತನಿಖೆ ನಡೆಸುತ್ತಿದೆ. ಈ ವಿಭಾಗದಲ್ಲಿ ಬಂಟ್ವಾಳ ಡಿವೈಎಸ್​ಪಿ ಕಚೇರಿಯ ಸಿಬ್ಬಂದಿ ಕುಮಾರ್ ಎಂಬವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ ಬಿಸಿರೋಡಿನಲ್ಲಿರುವ ಪೋಲೀಸ್ ವಸತಿಗೃಹದಲ್ಲಿ ತನ್ನ ಪತ್ನಿ ಹಾಗೂ ಆಕೆಯ ಅಕ್ಕನೊಂದಿಗೆ ತಂಗಿದ್ದರು.

ಇದನ್ನೂ ಓದಿ: Dakshina Kannada: ಚಿನ್ನಕ್ಕಾಗಿ ಅಜ್ಜ-ಅಜ್ಜಿಯನ್ನ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಮಂಗಳೂರಿನಲ್ಲಿ ಸಿಕ್ಕಿಬಿದ್ದ

ನಿನ್ನೆ ರಾತ್ರಿ ಕುಮಾರ್ ಕುಟುಂಬ ಸಹಿತವಾಗಿ ಊಟಕ್ಕೆ ಬಿಸಿರೋಡಿನ ಹೋಟೆಲ್ ಒಂದಕ್ಕೆ ಹೋಗಿ ವಾಪಸಾಗುತ್ತಿದ್ದರು. ಈ ವೇಳೆ ಇಬ್ಬರು ಯುವಕರು ಕುಮಾರ್ ಕುಟುಂಬವನ್ನು ಹಿಂಬಾಲಿಸಿಕೊಂಡು ಬಂದು ಅವ್ಯಾಚ್ಯವಾಗಿ ಬೈದಿದ್ದಾರೆ. ನೀನು ಮುಸ್ಲಿಂ ಹಿಂದೂ ಹುಡುಗಿಯರನ್ನು ಎಲ್ಲಿ ಕರೆದುಕೊಂಡು ಹೋಗಿದ್ದೀಯಾ? ಇಲ್ಲಿನ ವಿಚಾರ ನಿನಗೆ ಗೊತ್ತಲ್ಲ ಎಂದು ಬೆದರಿಕೆ ಹಾಕಿದ್ದಾರೆ.

ತಾನು ಪೋಲೀಸ್ ಎಂದು ಗೋಗೆರದರೂ ಲೆಕ್ಕಿಸಿದ ಯುವಕರು ಹಲ್ಲೆಗೂ ಮುಂದಾಗಿದ್ದಾರೆ. ಇದೇ ವೇಳೆ ಕುಮಾರ್ ಪತ್ನಿಯ ಚಿತ್ರೀಕರಣ ಮಾಡಿ ಮಾನಭಂಗಕ್ಕೆ ಯತ್ನಿಸಿದ್ದಾಗಿ ಆರೋಪಿಸಲಾಗಿದೆ. ಘಟನೆ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತುಂಬೆ ನಿವಾಸಿ ಆರೋಪಿಗಳಾದ ಮನೀಶ್ ಪೂಜಾರಿ ಮತ್ತು ಮಂಜುನಾಥ್ ಆಚಾರ್ಯ ಎಂಬವರನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆ

ಪೊಲೀಸ್ ಕುಟುಂಬವನ್ನು ಆರೋಪಿಗಳು ಫಾಲೋ ಮಾಡಿದ್ದ ದೃಶ್ಯ ರಸ್ತೆ ಪಕ್ಕ ಅಳವಡಿಸಿರುವ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ ಇರುವಂತೆ, ಪೊಲೀಸ್ ಕುಟುಂಬವನ್ನು ಬೈಕ್​ ಮೂಲಕ ಇಬ್ಬರು ಹಿಂಬಾಲಿಸಿಕೊಂಡು ಹೋಗುತ್ತಿರುವುದನ್ನು ಕಾಣಬಹುದು.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:57 pm, Fri, 28 July 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ