AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT-BT ಉದ್ಯೋಗಿಗಳಿಗೆ ಸಖತ್​ Kick ಕೊಡ್ತಿದ್ದ ಹ್ಯಾಶ್​ ಆಯಿಲ್​ ಮಾರಾಟಗಾರರು ಅರೆಸ್ಟ್​

ಬೆಂಗಳೂರು: ಐಟಿ-ಬಿಟಿ ನಗರ ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಜಾಲ ಎಲ್ಲೆಡೆ ಹಬ್ಬುತ್ತಿದೆ. ನಗರದ ಕಾಳಸಂತೆಯಲ್ಲಿ ಮತ್ತೇರಿಸುವ ಎಣ್ಣೆ ಮಾರಾಟ ದಂಧೆ ಜೋರಾಗಿದೆ. ಇದೀಗ, ಅಫೀಮು, ಗಾಂಜಾ,‌ ಕೊಕೈನ್​ಗಿಂತ ಹೆಚ್ಚು ನಶೆ ಏರಿಸುವ ದ್ರವ್ಯವೊಂದು ಈಗ ಕಾಳಸಂತೆಯಲ್ಲಿ ಲಭ್ಯವಾಗುತ್ತಿದೆ. ಇತರೆ ರಾಜ್ಯಗಳಲ್ಲಿ ತಯಾರಾಗಿ ನಗರದ ಐಟಿ-ಬಿಟಿ ಉದ್ಯೋಗಿಗಳಿಗೆ ಸರಬರಾಜಾಗುವ ಈ ಹ್ಯಾಶ್​ ಆಯಿಲ್​ನ (Hash oil) ಮಾರಾಟ ಎಗ್ಗಿಲ್ಲದೆ ಸಾಗುತ್ತಿದೆ. 1 ಗ್ರಾಂ ಹ್ಯಾಶ್​ ಆಯಿಲ್ ಬೆಲೆ 3ರಿಂದ 5 ಸಾವಿರ ರೂಪಾಯಿಯಷ್ಟು ಇದೆ. ಆಂಧ್ರದ ವಿಶಾಖಪಟ್ಟಣಂನಿಂದ ಈ […]

IT-BT ಉದ್ಯೋಗಿಗಳಿಗೆ ಸಖತ್​ Kick ಕೊಡ್ತಿದ್ದ ಹ್ಯಾಶ್​ ಆಯಿಲ್​ ಮಾರಾಟಗಾರರು ಅರೆಸ್ಟ್​
ಆಯೇಷಾ ಬಾನು
| Edited By: |

Updated on: Aug 23, 2020 | 2:17 PM

Share

ಬೆಂಗಳೂರು: ಐಟಿ-ಬಿಟಿ ನಗರ ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಜಾಲ ಎಲ್ಲೆಡೆ ಹಬ್ಬುತ್ತಿದೆ. ನಗರದ ಕಾಳಸಂತೆಯಲ್ಲಿ ಮತ್ತೇರಿಸುವ ಎಣ್ಣೆ ಮಾರಾಟ ದಂಧೆ ಜೋರಾಗಿದೆ. ಇದೀಗ, ಅಫೀಮು, ಗಾಂಜಾ,‌ ಕೊಕೈನ್​ಗಿಂತ ಹೆಚ್ಚು ನಶೆ ಏರಿಸುವ ದ್ರವ್ಯವೊಂದು ಈಗ ಕಾಳಸಂತೆಯಲ್ಲಿ ಲಭ್ಯವಾಗುತ್ತಿದೆ.

ಇತರೆ ರಾಜ್ಯಗಳಲ್ಲಿ ತಯಾರಾಗಿ ನಗರದ ಐಟಿ-ಬಿಟಿ ಉದ್ಯೋಗಿಗಳಿಗೆ ಸರಬರಾಜಾಗುವ ಈ ಹ್ಯಾಶ್​ ಆಯಿಲ್​ನ (Hash oil) ಮಾರಾಟ ಎಗ್ಗಿಲ್ಲದೆ ಸಾಗುತ್ತಿದೆ. 1 ಗ್ರಾಂ ಹ್ಯಾಶ್​ ಆಯಿಲ್ ಬೆಲೆ 3ರಿಂದ 5 ಸಾವಿರ ರೂಪಾಯಿಯಷ್ಟು ಇದೆ. ಆಂಧ್ರದ ವಿಶಾಖಪಟ್ಟಣಂನಿಂದ ಈ ಮಾದಕ ದ್ರವ್ಯವನ್ನು ನಗರಕ್ಕೆ ತಂದು ಮಾರಾಟ ಮಾಡಲಾಗುತ್ತಿದೆಯಂತೆ.

ಈ ಮಾದಕ ದ್ರವ್ಯದ ವಿತರಕರಿಗೆ ನಗರದ ಐಟಿ-ಬಿಟಿ ಉದ್ಯೋಗಿಗಳೇ ಟಾರ್ಗೆಟ್​ . ಜೊತೆಗೆ, ಇದು ಬಹು ಬೇಡಿಕೆಯ ದ್ರವ್ಯವಾಗಿದೆ. ಸದ್ಯ ಈಗ ನಗರದಲ್ಲಿ ಹ್ಯಾಶ್​ ಆಯಿಲ್ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಸದ್ದುಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುರಕತ್ತಿ ಪ್ರಭಾಕರ್, ಕೊರಳ ಕಾಮರಾಜ್ ಬಂಧಿತ ಆರೋಪಿಗಳು. ಬಂಧಿತರಿಂದ 950 ಗ್ರಾಂ‌ ಆಯಿಲ್ ಮತ್ತು 3 ಕೆ.ಜಿ. ಗಾಂಜಾ ಸಹ ಜಪ್ತಿ ಮಾಡಲಾಗಿದೆ.

ಚೆಕ್​ಪಾಯಿಂಟ್​ನಲ್ಲಿ ಕೆಲ ಬೈಕ್ ಸವಾರರನ್ನ ಸಂಶಯದ ಮೇಲೆ ಹಿಡಿದು ತಪಾಸಣೆ ನಡೆಸಿದ ವೇಳೆ ಅವರು ಗಾಂಜಾ ಸೇವನೆ‌ ಮಾಡಿರೋದು ಪೊಲೀಸರಿಗೆ ಕಂಡು ಬಂದಿತ್ತು. ವಿಚಾರಣೆ ನಡೆಸಿದಾಗ ಅವರಿಗೆ ಗಾಂಜಾ ಸಪ್ಲೈ ಮಾಡಿದ್ದವರ ಮಾಹಿತಿ ದೊರಕಿತ್ತು. ಹೀಗಾಗಿ, ಮಾರಾಟಗಾರರ ಮೇಲೆ ದಾಳಿ ಮಾಡಿ ಗಾಂಜಾ ಹಾಗೂ ಸೊಪ್ಪು ಸೀಜ್ ಮಾಡಲಾಗಿದೆ ಎಂದು ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಮಾಹಿತಿ ನೀಡಿದ್ದಾರೆ.

ಆರೋಪಿಗಳು ಸುಮಾರು 80 ಕೆ.ಜಿ ಗಾಂಜಾ ಒಣಗಿಸಿ, ನಂತರ ಕುದಿಸಿ, ಅದರಿಂದ ಎಣ್ಣೆ ತೆಗಿಯುತ್ತಾರೆ. 1 ಕೆ.ಜಿ ಗಾಂಜಾ ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತು ಆಗುತ್ತೆ. ದೀಪುರಾಜ್  ಎಂಬ ಬೈಕ್ ಸವಾರನನ್ನ ಬಂಧಿಸಿ ತನಿಖೆ ನಡೆಸಿದಾಗ ಆರೋಪಿಗಳ ಬಗ್ಗೆ ಮಾಹಿತಿ ಬೆಳಕಿಗೆ ಬಂದಿದೆ ಎಂದು ಶ್ರೀನಾಥ್  ಹೇಳಿದ್ದಾರೆ.

ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ