AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT-BT ಉದ್ಯೋಗಿಗಳಿಗೆ ಸಖತ್​ Kick ಕೊಡ್ತಿದ್ದ ಹ್ಯಾಶ್​ ಆಯಿಲ್​ ಮಾರಾಟಗಾರರು ಅರೆಸ್ಟ್​

ಬೆಂಗಳೂರು: ಐಟಿ-ಬಿಟಿ ನಗರ ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಜಾಲ ಎಲ್ಲೆಡೆ ಹಬ್ಬುತ್ತಿದೆ. ನಗರದ ಕಾಳಸಂತೆಯಲ್ಲಿ ಮತ್ತೇರಿಸುವ ಎಣ್ಣೆ ಮಾರಾಟ ದಂಧೆ ಜೋರಾಗಿದೆ. ಇದೀಗ, ಅಫೀಮು, ಗಾಂಜಾ,‌ ಕೊಕೈನ್​ಗಿಂತ ಹೆಚ್ಚು ನಶೆ ಏರಿಸುವ ದ್ರವ್ಯವೊಂದು ಈಗ ಕಾಳಸಂತೆಯಲ್ಲಿ ಲಭ್ಯವಾಗುತ್ತಿದೆ. ಇತರೆ ರಾಜ್ಯಗಳಲ್ಲಿ ತಯಾರಾಗಿ ನಗರದ ಐಟಿ-ಬಿಟಿ ಉದ್ಯೋಗಿಗಳಿಗೆ ಸರಬರಾಜಾಗುವ ಈ ಹ್ಯಾಶ್​ ಆಯಿಲ್​ನ (Hash oil) ಮಾರಾಟ ಎಗ್ಗಿಲ್ಲದೆ ಸಾಗುತ್ತಿದೆ. 1 ಗ್ರಾಂ ಹ್ಯಾಶ್​ ಆಯಿಲ್ ಬೆಲೆ 3ರಿಂದ 5 ಸಾವಿರ ರೂಪಾಯಿಯಷ್ಟು ಇದೆ. ಆಂಧ್ರದ ವಿಶಾಖಪಟ್ಟಣಂನಿಂದ ಈ […]

IT-BT ಉದ್ಯೋಗಿಗಳಿಗೆ ಸಖತ್​ Kick ಕೊಡ್ತಿದ್ದ ಹ್ಯಾಶ್​ ಆಯಿಲ್​ ಮಾರಾಟಗಾರರು ಅರೆಸ್ಟ್​
ಆಯೇಷಾ ಬಾನು
| Edited By: |

Updated on: Aug 23, 2020 | 2:17 PM

Share

ಬೆಂಗಳೂರು: ಐಟಿ-ಬಿಟಿ ನಗರ ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಜಾಲ ಎಲ್ಲೆಡೆ ಹಬ್ಬುತ್ತಿದೆ. ನಗರದ ಕಾಳಸಂತೆಯಲ್ಲಿ ಮತ್ತೇರಿಸುವ ಎಣ್ಣೆ ಮಾರಾಟ ದಂಧೆ ಜೋರಾಗಿದೆ. ಇದೀಗ, ಅಫೀಮು, ಗಾಂಜಾ,‌ ಕೊಕೈನ್​ಗಿಂತ ಹೆಚ್ಚು ನಶೆ ಏರಿಸುವ ದ್ರವ್ಯವೊಂದು ಈಗ ಕಾಳಸಂತೆಯಲ್ಲಿ ಲಭ್ಯವಾಗುತ್ತಿದೆ.

ಇತರೆ ರಾಜ್ಯಗಳಲ್ಲಿ ತಯಾರಾಗಿ ನಗರದ ಐಟಿ-ಬಿಟಿ ಉದ್ಯೋಗಿಗಳಿಗೆ ಸರಬರಾಜಾಗುವ ಈ ಹ್ಯಾಶ್​ ಆಯಿಲ್​ನ (Hash oil) ಮಾರಾಟ ಎಗ್ಗಿಲ್ಲದೆ ಸಾಗುತ್ತಿದೆ. 1 ಗ್ರಾಂ ಹ್ಯಾಶ್​ ಆಯಿಲ್ ಬೆಲೆ 3ರಿಂದ 5 ಸಾವಿರ ರೂಪಾಯಿಯಷ್ಟು ಇದೆ. ಆಂಧ್ರದ ವಿಶಾಖಪಟ್ಟಣಂನಿಂದ ಈ ಮಾದಕ ದ್ರವ್ಯವನ್ನು ನಗರಕ್ಕೆ ತಂದು ಮಾರಾಟ ಮಾಡಲಾಗುತ್ತಿದೆಯಂತೆ.

ಈ ಮಾದಕ ದ್ರವ್ಯದ ವಿತರಕರಿಗೆ ನಗರದ ಐಟಿ-ಬಿಟಿ ಉದ್ಯೋಗಿಗಳೇ ಟಾರ್ಗೆಟ್​ . ಜೊತೆಗೆ, ಇದು ಬಹು ಬೇಡಿಕೆಯ ದ್ರವ್ಯವಾಗಿದೆ. ಸದ್ಯ ಈಗ ನಗರದಲ್ಲಿ ಹ್ಯಾಶ್​ ಆಯಿಲ್ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಸದ್ದುಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುರಕತ್ತಿ ಪ್ರಭಾಕರ್, ಕೊರಳ ಕಾಮರಾಜ್ ಬಂಧಿತ ಆರೋಪಿಗಳು. ಬಂಧಿತರಿಂದ 950 ಗ್ರಾಂ‌ ಆಯಿಲ್ ಮತ್ತು 3 ಕೆ.ಜಿ. ಗಾಂಜಾ ಸಹ ಜಪ್ತಿ ಮಾಡಲಾಗಿದೆ.

ಚೆಕ್​ಪಾಯಿಂಟ್​ನಲ್ಲಿ ಕೆಲ ಬೈಕ್ ಸವಾರರನ್ನ ಸಂಶಯದ ಮೇಲೆ ಹಿಡಿದು ತಪಾಸಣೆ ನಡೆಸಿದ ವೇಳೆ ಅವರು ಗಾಂಜಾ ಸೇವನೆ‌ ಮಾಡಿರೋದು ಪೊಲೀಸರಿಗೆ ಕಂಡು ಬಂದಿತ್ತು. ವಿಚಾರಣೆ ನಡೆಸಿದಾಗ ಅವರಿಗೆ ಗಾಂಜಾ ಸಪ್ಲೈ ಮಾಡಿದ್ದವರ ಮಾಹಿತಿ ದೊರಕಿತ್ತು. ಹೀಗಾಗಿ, ಮಾರಾಟಗಾರರ ಮೇಲೆ ದಾಳಿ ಮಾಡಿ ಗಾಂಜಾ ಹಾಗೂ ಸೊಪ್ಪು ಸೀಜ್ ಮಾಡಲಾಗಿದೆ ಎಂದು ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಮಾಹಿತಿ ನೀಡಿದ್ದಾರೆ.

ಆರೋಪಿಗಳು ಸುಮಾರು 80 ಕೆ.ಜಿ ಗಾಂಜಾ ಒಣಗಿಸಿ, ನಂತರ ಕುದಿಸಿ, ಅದರಿಂದ ಎಣ್ಣೆ ತೆಗಿಯುತ್ತಾರೆ. 1 ಕೆ.ಜಿ ಗಾಂಜಾ ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತು ಆಗುತ್ತೆ. ದೀಪುರಾಜ್  ಎಂಬ ಬೈಕ್ ಸವಾರನನ್ನ ಬಂಧಿಸಿ ತನಿಖೆ ನಡೆಸಿದಾಗ ಆರೋಪಿಗಳ ಬಗ್ಗೆ ಮಾಹಿತಿ ಬೆಳಕಿಗೆ ಬಂದಿದೆ ಎಂದು ಶ್ರೀನಾಥ್  ಹೇಳಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ