AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT-BT ಉದ್ಯೋಗಿಗಳಿಗೆ ಸಖತ್​ Kick ಕೊಡ್ತಿದ್ದ ಹ್ಯಾಶ್​ ಆಯಿಲ್​ ಮಾರಾಟಗಾರರು ಅರೆಸ್ಟ್​

ಬೆಂಗಳೂರು: ಐಟಿ-ಬಿಟಿ ನಗರ ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಜಾಲ ಎಲ್ಲೆಡೆ ಹಬ್ಬುತ್ತಿದೆ. ನಗರದ ಕಾಳಸಂತೆಯಲ್ಲಿ ಮತ್ತೇರಿಸುವ ಎಣ್ಣೆ ಮಾರಾಟ ದಂಧೆ ಜೋರಾಗಿದೆ. ಇದೀಗ, ಅಫೀಮು, ಗಾಂಜಾ,‌ ಕೊಕೈನ್​ಗಿಂತ ಹೆಚ್ಚು ನಶೆ ಏರಿಸುವ ದ್ರವ್ಯವೊಂದು ಈಗ ಕಾಳಸಂತೆಯಲ್ಲಿ ಲಭ್ಯವಾಗುತ್ತಿದೆ. ಇತರೆ ರಾಜ್ಯಗಳಲ್ಲಿ ತಯಾರಾಗಿ ನಗರದ ಐಟಿ-ಬಿಟಿ ಉದ್ಯೋಗಿಗಳಿಗೆ ಸರಬರಾಜಾಗುವ ಈ ಹ್ಯಾಶ್​ ಆಯಿಲ್​ನ (Hash oil) ಮಾರಾಟ ಎಗ್ಗಿಲ್ಲದೆ ಸಾಗುತ್ತಿದೆ. 1 ಗ್ರಾಂ ಹ್ಯಾಶ್​ ಆಯಿಲ್ ಬೆಲೆ 3ರಿಂದ 5 ಸಾವಿರ ರೂಪಾಯಿಯಷ್ಟು ಇದೆ. ಆಂಧ್ರದ ವಿಶಾಖಪಟ್ಟಣಂನಿಂದ ಈ […]

IT-BT ಉದ್ಯೋಗಿಗಳಿಗೆ ಸಖತ್​ Kick ಕೊಡ್ತಿದ್ದ ಹ್ಯಾಶ್​ ಆಯಿಲ್​ ಮಾರಾಟಗಾರರು ಅರೆಸ್ಟ್​
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on: Aug 23, 2020 | 2:17 PM

Share

ಬೆಂಗಳೂರು: ಐಟಿ-ಬಿಟಿ ನಗರ ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಜಾಲ ಎಲ್ಲೆಡೆ ಹಬ್ಬುತ್ತಿದೆ. ನಗರದ ಕಾಳಸಂತೆಯಲ್ಲಿ ಮತ್ತೇರಿಸುವ ಎಣ್ಣೆ ಮಾರಾಟ ದಂಧೆ ಜೋರಾಗಿದೆ. ಇದೀಗ, ಅಫೀಮು, ಗಾಂಜಾ,‌ ಕೊಕೈನ್​ಗಿಂತ ಹೆಚ್ಚು ನಶೆ ಏರಿಸುವ ದ್ರವ್ಯವೊಂದು ಈಗ ಕಾಳಸಂತೆಯಲ್ಲಿ ಲಭ್ಯವಾಗುತ್ತಿದೆ.

ಇತರೆ ರಾಜ್ಯಗಳಲ್ಲಿ ತಯಾರಾಗಿ ನಗರದ ಐಟಿ-ಬಿಟಿ ಉದ್ಯೋಗಿಗಳಿಗೆ ಸರಬರಾಜಾಗುವ ಈ ಹ್ಯಾಶ್​ ಆಯಿಲ್​ನ (Hash oil) ಮಾರಾಟ ಎಗ್ಗಿಲ್ಲದೆ ಸಾಗುತ್ತಿದೆ. 1 ಗ್ರಾಂ ಹ್ಯಾಶ್​ ಆಯಿಲ್ ಬೆಲೆ 3ರಿಂದ 5 ಸಾವಿರ ರೂಪಾಯಿಯಷ್ಟು ಇದೆ. ಆಂಧ್ರದ ವಿಶಾಖಪಟ್ಟಣಂನಿಂದ ಈ ಮಾದಕ ದ್ರವ್ಯವನ್ನು ನಗರಕ್ಕೆ ತಂದು ಮಾರಾಟ ಮಾಡಲಾಗುತ್ತಿದೆಯಂತೆ.

ಈ ಮಾದಕ ದ್ರವ್ಯದ ವಿತರಕರಿಗೆ ನಗರದ ಐಟಿ-ಬಿಟಿ ಉದ್ಯೋಗಿಗಳೇ ಟಾರ್ಗೆಟ್​ . ಜೊತೆಗೆ, ಇದು ಬಹು ಬೇಡಿಕೆಯ ದ್ರವ್ಯವಾಗಿದೆ. ಸದ್ಯ ಈಗ ನಗರದಲ್ಲಿ ಹ್ಯಾಶ್​ ಆಯಿಲ್ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಸದ್ದುಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುರಕತ್ತಿ ಪ್ರಭಾಕರ್, ಕೊರಳ ಕಾಮರಾಜ್ ಬಂಧಿತ ಆರೋಪಿಗಳು. ಬಂಧಿತರಿಂದ 950 ಗ್ರಾಂ‌ ಆಯಿಲ್ ಮತ್ತು 3 ಕೆ.ಜಿ. ಗಾಂಜಾ ಸಹ ಜಪ್ತಿ ಮಾಡಲಾಗಿದೆ.

ಚೆಕ್​ಪಾಯಿಂಟ್​ನಲ್ಲಿ ಕೆಲ ಬೈಕ್ ಸವಾರರನ್ನ ಸಂಶಯದ ಮೇಲೆ ಹಿಡಿದು ತಪಾಸಣೆ ನಡೆಸಿದ ವೇಳೆ ಅವರು ಗಾಂಜಾ ಸೇವನೆ‌ ಮಾಡಿರೋದು ಪೊಲೀಸರಿಗೆ ಕಂಡು ಬಂದಿತ್ತು. ವಿಚಾರಣೆ ನಡೆಸಿದಾಗ ಅವರಿಗೆ ಗಾಂಜಾ ಸಪ್ಲೈ ಮಾಡಿದ್ದವರ ಮಾಹಿತಿ ದೊರಕಿತ್ತು. ಹೀಗಾಗಿ, ಮಾರಾಟಗಾರರ ಮೇಲೆ ದಾಳಿ ಮಾಡಿ ಗಾಂಜಾ ಹಾಗೂ ಸೊಪ್ಪು ಸೀಜ್ ಮಾಡಲಾಗಿದೆ ಎಂದು ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಮಾಹಿತಿ ನೀಡಿದ್ದಾರೆ.

ಆರೋಪಿಗಳು ಸುಮಾರು 80 ಕೆ.ಜಿ ಗಾಂಜಾ ಒಣಗಿಸಿ, ನಂತರ ಕುದಿಸಿ, ಅದರಿಂದ ಎಣ್ಣೆ ತೆಗಿಯುತ್ತಾರೆ. 1 ಕೆ.ಜಿ ಗಾಂಜಾ ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತು ಆಗುತ್ತೆ. ದೀಪುರಾಜ್  ಎಂಬ ಬೈಕ್ ಸವಾರನನ್ನ ಬಂಧಿಸಿ ತನಿಖೆ ನಡೆಸಿದಾಗ ಆರೋಪಿಗಳ ಬಗ್ಗೆ ಮಾಹಿತಿ ಬೆಳಕಿಗೆ ಬಂದಿದೆ ಎಂದು ಶ್ರೀನಾಥ್  ಹೇಳಿದ್ದಾರೆ.

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ