AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT-BT ಉದ್ಯೋಗಿಗಳಿಗೆ ಸಖತ್​ Kick ಕೊಡ್ತಿದ್ದ ಹ್ಯಾಶ್​ ಆಯಿಲ್​ ಮಾರಾಟಗಾರರು ಅರೆಸ್ಟ್​

ಬೆಂಗಳೂರು: ಐಟಿ-ಬಿಟಿ ನಗರ ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಜಾಲ ಎಲ್ಲೆಡೆ ಹಬ್ಬುತ್ತಿದೆ. ನಗರದ ಕಾಳಸಂತೆಯಲ್ಲಿ ಮತ್ತೇರಿಸುವ ಎಣ್ಣೆ ಮಾರಾಟ ದಂಧೆ ಜೋರಾಗಿದೆ. ಇದೀಗ, ಅಫೀಮು, ಗಾಂಜಾ,‌ ಕೊಕೈನ್​ಗಿಂತ ಹೆಚ್ಚು ನಶೆ ಏರಿಸುವ ದ್ರವ್ಯವೊಂದು ಈಗ ಕಾಳಸಂತೆಯಲ್ಲಿ ಲಭ್ಯವಾಗುತ್ತಿದೆ. ಇತರೆ ರಾಜ್ಯಗಳಲ್ಲಿ ತಯಾರಾಗಿ ನಗರದ ಐಟಿ-ಬಿಟಿ ಉದ್ಯೋಗಿಗಳಿಗೆ ಸರಬರಾಜಾಗುವ ಈ ಹ್ಯಾಶ್​ ಆಯಿಲ್​ನ (Hash oil) ಮಾರಾಟ ಎಗ್ಗಿಲ್ಲದೆ ಸಾಗುತ್ತಿದೆ. 1 ಗ್ರಾಂ ಹ್ಯಾಶ್​ ಆಯಿಲ್ ಬೆಲೆ 3ರಿಂದ 5 ಸಾವಿರ ರೂಪಾಯಿಯಷ್ಟು ಇದೆ. ಆಂಧ್ರದ ವಿಶಾಖಪಟ್ಟಣಂನಿಂದ ಈ […]

IT-BT ಉದ್ಯೋಗಿಗಳಿಗೆ ಸಖತ್​ Kick ಕೊಡ್ತಿದ್ದ ಹ್ಯಾಶ್​ ಆಯಿಲ್​ ಮಾರಾಟಗಾರರು ಅರೆಸ್ಟ್​
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on: Aug 23, 2020 | 2:17 PM

Share

ಬೆಂಗಳೂರು: ಐಟಿ-ಬಿಟಿ ನಗರ ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಜಾಲ ಎಲ್ಲೆಡೆ ಹಬ್ಬುತ್ತಿದೆ. ನಗರದ ಕಾಳಸಂತೆಯಲ್ಲಿ ಮತ್ತೇರಿಸುವ ಎಣ್ಣೆ ಮಾರಾಟ ದಂಧೆ ಜೋರಾಗಿದೆ. ಇದೀಗ, ಅಫೀಮು, ಗಾಂಜಾ,‌ ಕೊಕೈನ್​ಗಿಂತ ಹೆಚ್ಚು ನಶೆ ಏರಿಸುವ ದ್ರವ್ಯವೊಂದು ಈಗ ಕಾಳಸಂತೆಯಲ್ಲಿ ಲಭ್ಯವಾಗುತ್ತಿದೆ.

ಇತರೆ ರಾಜ್ಯಗಳಲ್ಲಿ ತಯಾರಾಗಿ ನಗರದ ಐಟಿ-ಬಿಟಿ ಉದ್ಯೋಗಿಗಳಿಗೆ ಸರಬರಾಜಾಗುವ ಈ ಹ್ಯಾಶ್​ ಆಯಿಲ್​ನ (Hash oil) ಮಾರಾಟ ಎಗ್ಗಿಲ್ಲದೆ ಸಾಗುತ್ತಿದೆ. 1 ಗ್ರಾಂ ಹ್ಯಾಶ್​ ಆಯಿಲ್ ಬೆಲೆ 3ರಿಂದ 5 ಸಾವಿರ ರೂಪಾಯಿಯಷ್ಟು ಇದೆ. ಆಂಧ್ರದ ವಿಶಾಖಪಟ್ಟಣಂನಿಂದ ಈ ಮಾದಕ ದ್ರವ್ಯವನ್ನು ನಗರಕ್ಕೆ ತಂದು ಮಾರಾಟ ಮಾಡಲಾಗುತ್ತಿದೆಯಂತೆ.

ಈ ಮಾದಕ ದ್ರವ್ಯದ ವಿತರಕರಿಗೆ ನಗರದ ಐಟಿ-ಬಿಟಿ ಉದ್ಯೋಗಿಗಳೇ ಟಾರ್ಗೆಟ್​ . ಜೊತೆಗೆ, ಇದು ಬಹು ಬೇಡಿಕೆಯ ದ್ರವ್ಯವಾಗಿದೆ. ಸದ್ಯ ಈಗ ನಗರದಲ್ಲಿ ಹ್ಯಾಶ್​ ಆಯಿಲ್ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಸದ್ದುಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುರಕತ್ತಿ ಪ್ರಭಾಕರ್, ಕೊರಳ ಕಾಮರಾಜ್ ಬಂಧಿತ ಆರೋಪಿಗಳು. ಬಂಧಿತರಿಂದ 950 ಗ್ರಾಂ‌ ಆಯಿಲ್ ಮತ್ತು 3 ಕೆ.ಜಿ. ಗಾಂಜಾ ಸಹ ಜಪ್ತಿ ಮಾಡಲಾಗಿದೆ.

ಚೆಕ್​ಪಾಯಿಂಟ್​ನಲ್ಲಿ ಕೆಲ ಬೈಕ್ ಸವಾರರನ್ನ ಸಂಶಯದ ಮೇಲೆ ಹಿಡಿದು ತಪಾಸಣೆ ನಡೆಸಿದ ವೇಳೆ ಅವರು ಗಾಂಜಾ ಸೇವನೆ‌ ಮಾಡಿರೋದು ಪೊಲೀಸರಿಗೆ ಕಂಡು ಬಂದಿತ್ತು. ವಿಚಾರಣೆ ನಡೆಸಿದಾಗ ಅವರಿಗೆ ಗಾಂಜಾ ಸಪ್ಲೈ ಮಾಡಿದ್ದವರ ಮಾಹಿತಿ ದೊರಕಿತ್ತು. ಹೀಗಾಗಿ, ಮಾರಾಟಗಾರರ ಮೇಲೆ ದಾಳಿ ಮಾಡಿ ಗಾಂಜಾ ಹಾಗೂ ಸೊಪ್ಪು ಸೀಜ್ ಮಾಡಲಾಗಿದೆ ಎಂದು ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಮಾಹಿತಿ ನೀಡಿದ್ದಾರೆ.

ಆರೋಪಿಗಳು ಸುಮಾರು 80 ಕೆ.ಜಿ ಗಾಂಜಾ ಒಣಗಿಸಿ, ನಂತರ ಕುದಿಸಿ, ಅದರಿಂದ ಎಣ್ಣೆ ತೆಗಿಯುತ್ತಾರೆ. 1 ಕೆ.ಜಿ ಗಾಂಜಾ ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತು ಆಗುತ್ತೆ. ದೀಪುರಾಜ್  ಎಂಬ ಬೈಕ್ ಸವಾರನನ್ನ ಬಂಧಿಸಿ ತನಿಖೆ ನಡೆಸಿದಾಗ ಆರೋಪಿಗಳ ಬಗ್ಗೆ ಮಾಹಿತಿ ಬೆಳಕಿಗೆ ಬಂದಿದೆ ಎಂದು ಶ್ರೀನಾಥ್  ಹೇಳಿದ್ದಾರೆ.

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ