AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾರ್ಟ್​ಮೆಂಟ್​ ಮಾಲೀಕನ ಪುತ್ರಿ ಜತೆ ಅಕ್ರಮ ಸಂಬಂಧವಿದೆ ಎಂದು ವಾಟ್ಸ್ಯಾಪ್​ ಸ್ಟೇಟಸ್​ ಹಾಕಿದ್ದಕ್ಕೆ ಕೊಲೆ; ಇಬ್ಬರ ಬಂಧನ

ಆರೋಪಿ ಸ್ಥಾನದಲ್ಲಿ ನಿಂತಿರುವ ಮೋಹನ್​ಗೆ ಅಪಾರ್ಟ್​ಮೆಂಟ್​ ಮಾಲೀಕ ಹಲವು ಜವಾಬ್ದಾರಿ ನೀಡಿದ್ದು, ಅಪಾರ್ಟ್​ಮೆಂಟ್​ ನಿರ್ವಹಣೆ ಮಾಡುವಂತೆಯೂ ತಿಳಿಸಿದ್ದರು. ಆದರೆ, ಮೋಹನ್​ ಅವರ ಎಲ್ಲಾ ವ್ಯವಹಾರಗಳಿಗೆ ಅಡ್ಡಿಪಡಿಸುತ್ತಿದ್ದ ಕಾರ್ತಿಕ್, ಅಪಾರ್ಟ್​ಮೆಂಟ್ ಮಾಲೀಕನ ಪುತ್ರಿ ಜತೆ ಮೋಹನ್​ಗೆ ಅಕ್ರಮ ಸಂಬಂಧವಿದೆ ಎಂದು ವಾಟ್ಸ್ಯಾಪ್​ ಸ್ಟೇಟಸ್ ಸಹ ಹಾಕಿದ್ದರು.

ಅಪಾರ್ಟ್​ಮೆಂಟ್​ ಮಾಲೀಕನ ಪುತ್ರಿ ಜತೆ ಅಕ್ರಮ ಸಂಬಂಧವಿದೆ ಎಂದು ವಾಟ್ಸ್ಯಾಪ್​ ಸ್ಟೇಟಸ್​ ಹಾಕಿದ್ದಕ್ಕೆ ಕೊಲೆ; ಇಬ್ಬರ ಬಂಧನ
ಬಂಧಿತ ಆರೋಪಿಗಳು
TV9 Web
| Edited By: |

Updated on: Jun 19, 2021 | 1:52 PM

Share

ಬೆಂಗಳೂರು: ವಾಟ್ಸ್ಯಾಪ್​ ಸ್ಟೇಟಸ್ ಕಥೆ ಕೊಲೆಯಲ್ಲಿ ಅಂತ್ಯ ಕಂಡ ವಿಚಾರಕ್ಕಾಗಿ ಸಂಬಂಧಿಸಿದಂತೆ ಬೆಂಗಳೂರಿನ ರಾಜಗೋಪಾಲನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ವಾಟ್ಸ್ಯಾಪ್​ನಲ್ಲಿ ಸ್ಟೇಟಸ್​ ಹಾಕಿದ್ದ ಕಾರ್ತಿಕ್​ ಎಂಬಾತನನ್ನು ಹತ್ಯೆ ಮಾಡಿದ ಆರೋಪದ ಮೇಲೆ ಮೋಹನ್ ಕುಮಾರ್ ಹಾಗೂ ನಾಗರಾಜ್​ ಎಂಬ ಇಬ್ಬರನ್ನು ಪೊಲೀಸರು ಬಂಧನಕ್ಕೆ ಒಳಪಡಿಸಿದ್ದಾರೆ.

ಅಪಾರ್ಟ್​ಮೆಂಟ್​ನಲ್ಲಿ 2 ಫ್ಲ್ಯಾಟ್ ಖರೀದಿಸಿದ್ದ ಕಾರ್ತಿಕ್, ಒಟ್ಟು ₹61 ಲಕ್ಷಕ್ಕೆ ಅಗ್ರಿಮೆಂಟ್​ ಮಾಡಿಕೊಂಡಿದ್ದರು. ಆದರೆ, ₹41ಲಕ್ಷ ನೀಡಿ ಬಾಕಿ ಉಳಿದ ₹20 ಲಕ್ಷ ನೀಡದೆ ಸತಾಯಿಸುತ್ತಿದ್ದರು ಎನ್ನಲಾಗಿದೆ. ಅಲ್ಲದೇ, 2 ಫ್ಲ್ಯಾಟ್​ ನಡುವಿನ ಗೋಡೆಯನ್ನೂ ಕಾರ್ತಿಕ್​ ಒಡೆಸಿ ಕೂಡಿಸಿದ್ದರು. ಗೋಡೆ ಒಡೆದರೆ ಕಟ್ಟಡಕ್ಕೆ ತೊಂದರೆ ಆಗುತ್ತೆ ಎಂದರೂ ಕೇಳಿರಲಿಲ್ಲ. ಹೀಗಾಗಿ ಕಾರ್ತಿಕ್​ ವಿರುದ್ಧ ಅಪಾರ್ಟ್​ಮೆಂಟ್ ನಿವಾಸಿಗಳು ಠಾಣೆಗೆ ದೂರು ನೀಡಿದ್ದರು ಎಂಬ ಮಾಹಿತಿಯೂ ಲಭ್ಯವಾಗಿದೆ.

ಇದೀಗ ಆರೋಪಿ ಸ್ಥಾನದಲ್ಲಿ ನಿಂತಿರುವ ಮೋಹನ್​ಗೆ ಅಪಾರ್ಟ್​ಮೆಂಟ್​ ಮಾಲೀಕ ಹಲವು ಜವಾಬ್ದಾರಿ ನೀಡಿದ್ದು, ಅಪಾರ್ಟ್​ಮೆಂಟ್​ ನಿರ್ವಹಣೆ ಮಾಡುವಂತೆಯೂ ತಿಳಿಸಿದ್ದರು. ಆದರೆ, ಮೋಹನ್​ ಅವರ ಎಲ್ಲಾ ವ್ಯವಹಾರಗಳಿಗೆ ಅಡ್ಡಿಪಡಿಸುತ್ತಿದ್ದ ಕಾರ್ತಿಕ್, ಅಪಾರ್ಟ್​ಮೆಂಟ್ ಮಾಲೀಕನ ಪುತ್ರಿ ಜತೆ ಮೋಹನ್​ಗೆ ಅಕ್ರಮ ಸಂಬಂಧವಿದೆ ಎಂದು ವಾಟ್ಸ್ಯಾಪ್​ ಸ್ಟೇಟಸ್ ಸಹ ಹಾಕಿದ್ದರು.

ಅಕ್ರಮ ಸಂಬಂಧವಿದೆ ಎಂದು ಹೇಳಿದ್ದಕ್ಕೆ ಕುಪಿತಗೊಂಡ ಮೋಹನ್​, ತಲೆ ಮೇಲೆ ಕಲ್ಲು ಎತ್ತಿಹಾಕಿ ಕಾರ್ತಿಕ್​ರನ್ನು ಕೊಲೆಗೈದಿದ್ದರು. ಜೂನ್​ 16ರಂದು ಈ ಘಟನೆ ನಡೆದಿದ್ದು, ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಗೋಪಾಲನಗರ ಠಾಣೆಯಲ್ಲಿ ಪ್ರಕರಣ​ ದಾಖಲಾಗಿತ್ತು. ಇದೀಗ ಪೊಲೀಸರು ಮೋಹನ್​ ಹಾಗೂ ನಾಗರಾಜ್ ಎಂಬ ಇಬ್ಬರನ್ನು ಬಂಧಿಸಿದ್ದಾರೆ.

ಕೆಲ ದಿನಗಳ ಹಿಂದೆ ಕುಂದಾಪುರದಲ್ಲಿ ಅವಾಂತರ ಸೃಷ್ಟಿಸಿದ್ದ ವಾಟ್ಸ್ಯಾಪ್​ ಸ್ಟೇಟಸ್ ಕೆಲ ದಿನಗಳ ಹಿಂದೆಯಷ್ಟೇ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಯಡಮೊಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ವಾಟ್ಸ್ಯಾಪ್​ ಸ್ಟೇಟಸ್​ನಿಂದ ಜೋರಾದ ದ್ವೇಷ ಕೊಲೆಯಲ್ಲಿ ಅಂತ್ಯವಾದ ಘಟನೆಯೊಂದು ನಡೆದಿತ್ತು. ಯಡಮೊಗೆ ಗ್ರಾಮದ ನಿವಾಸಿ ಉದಯ್​ ಗಾಣಿಗ ಹತ್ಯೆ ಪ್ರಕರಣದಲ್ಲಿ ಯಡಮೊಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಾಣೇಶ್ ಯಡಿಯಾಳ್ ಎಂಬುವವರ ಮೇಲೆ ಕೊಲೆ ಆರೋಪ ಕೇಳಿಬಂದಿದ್ದು, ಭಾರೀ ಸುದ್ದಿಯಾಗಿತ್ತು.

ಯಡಮೊಗೆ ಗ್ರಾಮದಲ್ಲಿ ಸುಮಾರು 25 ಕೊರೊನಾ ಪಾಸಿಟಿವ್ ಪ್ರಕರಣ ಇದ್ದು, ಅದರ ನಿರ್ವಹಣೆಗೆ ಸಂಬಂಧಿಸಿದಂತೆ ವಾಟ್ಸ್ಯಾಪ್​ ಸ್ಟೇಟಸ್ ಹಾಕಿದ್ದ ಉದಯ್ ಗಾಣಿಗ ಊರಿಗೆ ಬೇಲಿ ಹಾಕುವ ಮೊದಲು ವ್ಯವಸ್ಥೆ ಕಲ್ಪಿಸಿ ಎಂದು ಪ್ರಾಣೇಶ್ ಯಡಿಯಾಳ ಅವರ ಕಾಲೆಳೆದಿದ್ದರು. ಅಲ್ಲದೇ ಅದಕ್ಕೂ ಮುನ್ನ ಉದಯ್ ಮನೆಯಲ್ಲಿ ಬೋರ್​ವೆಲ್ ಕೊರೆಸಲು ಪ್ರಾಣೇಶ್ ಅವಕಾಶ ಕೊಟ್ಟಿಲ್ಲ ಎನ್ನುವ ವಿಷಯವೂ ದ್ವೇಷಕ್ಕೆ ಕಾರಣವಾಗಿತ್ತು. ನಂತರ ವಾಟ್ಸ್ಯಾಪ್​ ಸ್ಟೇಟಸ್​ನಿಂದ ಪ್ರಾಣೇಶ್ ಯಡಿಯಾಳ ಮತ್ತಷ್ಟು ಕುಪಿತರಾಗಿ ಉದಯ್​ ಅವರ ಮೇಲೆ ಕಾರು ಹತ್ತಿಸಿ ಹತ್ಯೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಈ ಸಂಬಂಧ ಆರೋಪಿಗಳೆಲ್ಲರನ್ನೂ ಬಂಧಿಸಿದರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮೈಸೂರು: ಅನ್ಯಜಾತಿಯ ಹುಡುಗನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಲೆ ಮಾಡಿದ ತಂದೆ 

ಅನೈತಿಕ ಸಂಬಂಧ ಶಂಕೆ; ಮಹಿಳೆ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ತಂದೆ, ಅಪ್ರಾಪ್ತ ಮಗ ಅರೆಸ್ಟ್

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ