Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾರ್ಟ್​ಮೆಂಟ್​ ಮಾಲೀಕನ ಪುತ್ರಿ ಜತೆ ಅಕ್ರಮ ಸಂಬಂಧವಿದೆ ಎಂದು ವಾಟ್ಸ್ಯಾಪ್​ ಸ್ಟೇಟಸ್​ ಹಾಕಿದ್ದಕ್ಕೆ ಕೊಲೆ; ಇಬ್ಬರ ಬಂಧನ

ಆರೋಪಿ ಸ್ಥಾನದಲ್ಲಿ ನಿಂತಿರುವ ಮೋಹನ್​ಗೆ ಅಪಾರ್ಟ್​ಮೆಂಟ್​ ಮಾಲೀಕ ಹಲವು ಜವಾಬ್ದಾರಿ ನೀಡಿದ್ದು, ಅಪಾರ್ಟ್​ಮೆಂಟ್​ ನಿರ್ವಹಣೆ ಮಾಡುವಂತೆಯೂ ತಿಳಿಸಿದ್ದರು. ಆದರೆ, ಮೋಹನ್​ ಅವರ ಎಲ್ಲಾ ವ್ಯವಹಾರಗಳಿಗೆ ಅಡ್ಡಿಪಡಿಸುತ್ತಿದ್ದ ಕಾರ್ತಿಕ್, ಅಪಾರ್ಟ್​ಮೆಂಟ್ ಮಾಲೀಕನ ಪುತ್ರಿ ಜತೆ ಮೋಹನ್​ಗೆ ಅಕ್ರಮ ಸಂಬಂಧವಿದೆ ಎಂದು ವಾಟ್ಸ್ಯಾಪ್​ ಸ್ಟೇಟಸ್ ಸಹ ಹಾಕಿದ್ದರು.

ಅಪಾರ್ಟ್​ಮೆಂಟ್​ ಮಾಲೀಕನ ಪುತ್ರಿ ಜತೆ ಅಕ್ರಮ ಸಂಬಂಧವಿದೆ ಎಂದು ವಾಟ್ಸ್ಯಾಪ್​ ಸ್ಟೇಟಸ್​ ಹಾಕಿದ್ದಕ್ಕೆ ಕೊಲೆ; ಇಬ್ಬರ ಬಂಧನ
ಬಂಧಿತ ಆರೋಪಿಗಳು
Follow us
TV9 Web
| Updated By: Skanda

Updated on: Jun 19, 2021 | 1:52 PM

ಬೆಂಗಳೂರು: ವಾಟ್ಸ್ಯಾಪ್​ ಸ್ಟೇಟಸ್ ಕಥೆ ಕೊಲೆಯಲ್ಲಿ ಅಂತ್ಯ ಕಂಡ ವಿಚಾರಕ್ಕಾಗಿ ಸಂಬಂಧಿಸಿದಂತೆ ಬೆಂಗಳೂರಿನ ರಾಜಗೋಪಾಲನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ವಾಟ್ಸ್ಯಾಪ್​ನಲ್ಲಿ ಸ್ಟೇಟಸ್​ ಹಾಕಿದ್ದ ಕಾರ್ತಿಕ್​ ಎಂಬಾತನನ್ನು ಹತ್ಯೆ ಮಾಡಿದ ಆರೋಪದ ಮೇಲೆ ಮೋಹನ್ ಕುಮಾರ್ ಹಾಗೂ ನಾಗರಾಜ್​ ಎಂಬ ಇಬ್ಬರನ್ನು ಪೊಲೀಸರು ಬಂಧನಕ್ಕೆ ಒಳಪಡಿಸಿದ್ದಾರೆ.

ಅಪಾರ್ಟ್​ಮೆಂಟ್​ನಲ್ಲಿ 2 ಫ್ಲ್ಯಾಟ್ ಖರೀದಿಸಿದ್ದ ಕಾರ್ತಿಕ್, ಒಟ್ಟು ₹61 ಲಕ್ಷಕ್ಕೆ ಅಗ್ರಿಮೆಂಟ್​ ಮಾಡಿಕೊಂಡಿದ್ದರು. ಆದರೆ, ₹41ಲಕ್ಷ ನೀಡಿ ಬಾಕಿ ಉಳಿದ ₹20 ಲಕ್ಷ ನೀಡದೆ ಸತಾಯಿಸುತ್ತಿದ್ದರು ಎನ್ನಲಾಗಿದೆ. ಅಲ್ಲದೇ, 2 ಫ್ಲ್ಯಾಟ್​ ನಡುವಿನ ಗೋಡೆಯನ್ನೂ ಕಾರ್ತಿಕ್​ ಒಡೆಸಿ ಕೂಡಿಸಿದ್ದರು. ಗೋಡೆ ಒಡೆದರೆ ಕಟ್ಟಡಕ್ಕೆ ತೊಂದರೆ ಆಗುತ್ತೆ ಎಂದರೂ ಕೇಳಿರಲಿಲ್ಲ. ಹೀಗಾಗಿ ಕಾರ್ತಿಕ್​ ವಿರುದ್ಧ ಅಪಾರ್ಟ್​ಮೆಂಟ್ ನಿವಾಸಿಗಳು ಠಾಣೆಗೆ ದೂರು ನೀಡಿದ್ದರು ಎಂಬ ಮಾಹಿತಿಯೂ ಲಭ್ಯವಾಗಿದೆ.

ಇದೀಗ ಆರೋಪಿ ಸ್ಥಾನದಲ್ಲಿ ನಿಂತಿರುವ ಮೋಹನ್​ಗೆ ಅಪಾರ್ಟ್​ಮೆಂಟ್​ ಮಾಲೀಕ ಹಲವು ಜವಾಬ್ದಾರಿ ನೀಡಿದ್ದು, ಅಪಾರ್ಟ್​ಮೆಂಟ್​ ನಿರ್ವಹಣೆ ಮಾಡುವಂತೆಯೂ ತಿಳಿಸಿದ್ದರು. ಆದರೆ, ಮೋಹನ್​ ಅವರ ಎಲ್ಲಾ ವ್ಯವಹಾರಗಳಿಗೆ ಅಡ್ಡಿಪಡಿಸುತ್ತಿದ್ದ ಕಾರ್ತಿಕ್, ಅಪಾರ್ಟ್​ಮೆಂಟ್ ಮಾಲೀಕನ ಪುತ್ರಿ ಜತೆ ಮೋಹನ್​ಗೆ ಅಕ್ರಮ ಸಂಬಂಧವಿದೆ ಎಂದು ವಾಟ್ಸ್ಯಾಪ್​ ಸ್ಟೇಟಸ್ ಸಹ ಹಾಕಿದ್ದರು.

ಅಕ್ರಮ ಸಂಬಂಧವಿದೆ ಎಂದು ಹೇಳಿದ್ದಕ್ಕೆ ಕುಪಿತಗೊಂಡ ಮೋಹನ್​, ತಲೆ ಮೇಲೆ ಕಲ್ಲು ಎತ್ತಿಹಾಕಿ ಕಾರ್ತಿಕ್​ರನ್ನು ಕೊಲೆಗೈದಿದ್ದರು. ಜೂನ್​ 16ರಂದು ಈ ಘಟನೆ ನಡೆದಿದ್ದು, ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಗೋಪಾಲನಗರ ಠಾಣೆಯಲ್ಲಿ ಪ್ರಕರಣ​ ದಾಖಲಾಗಿತ್ತು. ಇದೀಗ ಪೊಲೀಸರು ಮೋಹನ್​ ಹಾಗೂ ನಾಗರಾಜ್ ಎಂಬ ಇಬ್ಬರನ್ನು ಬಂಧಿಸಿದ್ದಾರೆ.

ಕೆಲ ದಿನಗಳ ಹಿಂದೆ ಕುಂದಾಪುರದಲ್ಲಿ ಅವಾಂತರ ಸೃಷ್ಟಿಸಿದ್ದ ವಾಟ್ಸ್ಯಾಪ್​ ಸ್ಟೇಟಸ್ ಕೆಲ ದಿನಗಳ ಹಿಂದೆಯಷ್ಟೇ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಯಡಮೊಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ವಾಟ್ಸ್ಯಾಪ್​ ಸ್ಟೇಟಸ್​ನಿಂದ ಜೋರಾದ ದ್ವೇಷ ಕೊಲೆಯಲ್ಲಿ ಅಂತ್ಯವಾದ ಘಟನೆಯೊಂದು ನಡೆದಿತ್ತು. ಯಡಮೊಗೆ ಗ್ರಾಮದ ನಿವಾಸಿ ಉದಯ್​ ಗಾಣಿಗ ಹತ್ಯೆ ಪ್ರಕರಣದಲ್ಲಿ ಯಡಮೊಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಾಣೇಶ್ ಯಡಿಯಾಳ್ ಎಂಬುವವರ ಮೇಲೆ ಕೊಲೆ ಆರೋಪ ಕೇಳಿಬಂದಿದ್ದು, ಭಾರೀ ಸುದ್ದಿಯಾಗಿತ್ತು.

ಯಡಮೊಗೆ ಗ್ರಾಮದಲ್ಲಿ ಸುಮಾರು 25 ಕೊರೊನಾ ಪಾಸಿಟಿವ್ ಪ್ರಕರಣ ಇದ್ದು, ಅದರ ನಿರ್ವಹಣೆಗೆ ಸಂಬಂಧಿಸಿದಂತೆ ವಾಟ್ಸ್ಯಾಪ್​ ಸ್ಟೇಟಸ್ ಹಾಕಿದ್ದ ಉದಯ್ ಗಾಣಿಗ ಊರಿಗೆ ಬೇಲಿ ಹಾಕುವ ಮೊದಲು ವ್ಯವಸ್ಥೆ ಕಲ್ಪಿಸಿ ಎಂದು ಪ್ರಾಣೇಶ್ ಯಡಿಯಾಳ ಅವರ ಕಾಲೆಳೆದಿದ್ದರು. ಅಲ್ಲದೇ ಅದಕ್ಕೂ ಮುನ್ನ ಉದಯ್ ಮನೆಯಲ್ಲಿ ಬೋರ್​ವೆಲ್ ಕೊರೆಸಲು ಪ್ರಾಣೇಶ್ ಅವಕಾಶ ಕೊಟ್ಟಿಲ್ಲ ಎನ್ನುವ ವಿಷಯವೂ ದ್ವೇಷಕ್ಕೆ ಕಾರಣವಾಗಿತ್ತು. ನಂತರ ವಾಟ್ಸ್ಯಾಪ್​ ಸ್ಟೇಟಸ್​ನಿಂದ ಪ್ರಾಣೇಶ್ ಯಡಿಯಾಳ ಮತ್ತಷ್ಟು ಕುಪಿತರಾಗಿ ಉದಯ್​ ಅವರ ಮೇಲೆ ಕಾರು ಹತ್ತಿಸಿ ಹತ್ಯೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಈ ಸಂಬಂಧ ಆರೋಪಿಗಳೆಲ್ಲರನ್ನೂ ಬಂಧಿಸಿದರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮೈಸೂರು: ಅನ್ಯಜಾತಿಯ ಹುಡುಗನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಲೆ ಮಾಡಿದ ತಂದೆ 

ಅನೈತಿಕ ಸಂಬಂಧ ಶಂಕೆ; ಮಹಿಳೆ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ತಂದೆ, ಅಪ್ರಾಪ್ತ ಮಗ ಅರೆಸ್ಟ್

ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ