AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾರ್ಟ್​ಮೆಂಟ್​ ಮಾಲೀಕನ ಪುತ್ರಿ ಜತೆ ಅಕ್ರಮ ಸಂಬಂಧವಿದೆ ಎಂದು ವಾಟ್ಸ್ಯಾಪ್​ ಸ್ಟೇಟಸ್​ ಹಾಕಿದ್ದಕ್ಕೆ ಕೊಲೆ; ಇಬ್ಬರ ಬಂಧನ

ಆರೋಪಿ ಸ್ಥಾನದಲ್ಲಿ ನಿಂತಿರುವ ಮೋಹನ್​ಗೆ ಅಪಾರ್ಟ್​ಮೆಂಟ್​ ಮಾಲೀಕ ಹಲವು ಜವಾಬ್ದಾರಿ ನೀಡಿದ್ದು, ಅಪಾರ್ಟ್​ಮೆಂಟ್​ ನಿರ್ವಹಣೆ ಮಾಡುವಂತೆಯೂ ತಿಳಿಸಿದ್ದರು. ಆದರೆ, ಮೋಹನ್​ ಅವರ ಎಲ್ಲಾ ವ್ಯವಹಾರಗಳಿಗೆ ಅಡ್ಡಿಪಡಿಸುತ್ತಿದ್ದ ಕಾರ್ತಿಕ್, ಅಪಾರ್ಟ್​ಮೆಂಟ್ ಮಾಲೀಕನ ಪುತ್ರಿ ಜತೆ ಮೋಹನ್​ಗೆ ಅಕ್ರಮ ಸಂಬಂಧವಿದೆ ಎಂದು ವಾಟ್ಸ್ಯಾಪ್​ ಸ್ಟೇಟಸ್ ಸಹ ಹಾಕಿದ್ದರು.

ಅಪಾರ್ಟ್​ಮೆಂಟ್​ ಮಾಲೀಕನ ಪುತ್ರಿ ಜತೆ ಅಕ್ರಮ ಸಂಬಂಧವಿದೆ ಎಂದು ವಾಟ್ಸ್ಯಾಪ್​ ಸ್ಟೇಟಸ್​ ಹಾಕಿದ್ದಕ್ಕೆ ಕೊಲೆ; ಇಬ್ಬರ ಬಂಧನ
ಬಂಧಿತ ಆರೋಪಿಗಳು
TV9 Web
| Edited By: |

Updated on: Jun 19, 2021 | 1:52 PM

Share

ಬೆಂಗಳೂರು: ವಾಟ್ಸ್ಯಾಪ್​ ಸ್ಟೇಟಸ್ ಕಥೆ ಕೊಲೆಯಲ್ಲಿ ಅಂತ್ಯ ಕಂಡ ವಿಚಾರಕ್ಕಾಗಿ ಸಂಬಂಧಿಸಿದಂತೆ ಬೆಂಗಳೂರಿನ ರಾಜಗೋಪಾಲನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ವಾಟ್ಸ್ಯಾಪ್​ನಲ್ಲಿ ಸ್ಟೇಟಸ್​ ಹಾಕಿದ್ದ ಕಾರ್ತಿಕ್​ ಎಂಬಾತನನ್ನು ಹತ್ಯೆ ಮಾಡಿದ ಆರೋಪದ ಮೇಲೆ ಮೋಹನ್ ಕುಮಾರ್ ಹಾಗೂ ನಾಗರಾಜ್​ ಎಂಬ ಇಬ್ಬರನ್ನು ಪೊಲೀಸರು ಬಂಧನಕ್ಕೆ ಒಳಪಡಿಸಿದ್ದಾರೆ.

ಅಪಾರ್ಟ್​ಮೆಂಟ್​ನಲ್ಲಿ 2 ಫ್ಲ್ಯಾಟ್ ಖರೀದಿಸಿದ್ದ ಕಾರ್ತಿಕ್, ಒಟ್ಟು ₹61 ಲಕ್ಷಕ್ಕೆ ಅಗ್ರಿಮೆಂಟ್​ ಮಾಡಿಕೊಂಡಿದ್ದರು. ಆದರೆ, ₹41ಲಕ್ಷ ನೀಡಿ ಬಾಕಿ ಉಳಿದ ₹20 ಲಕ್ಷ ನೀಡದೆ ಸತಾಯಿಸುತ್ತಿದ್ದರು ಎನ್ನಲಾಗಿದೆ. ಅಲ್ಲದೇ, 2 ಫ್ಲ್ಯಾಟ್​ ನಡುವಿನ ಗೋಡೆಯನ್ನೂ ಕಾರ್ತಿಕ್​ ಒಡೆಸಿ ಕೂಡಿಸಿದ್ದರು. ಗೋಡೆ ಒಡೆದರೆ ಕಟ್ಟಡಕ್ಕೆ ತೊಂದರೆ ಆಗುತ್ತೆ ಎಂದರೂ ಕೇಳಿರಲಿಲ್ಲ. ಹೀಗಾಗಿ ಕಾರ್ತಿಕ್​ ವಿರುದ್ಧ ಅಪಾರ್ಟ್​ಮೆಂಟ್ ನಿವಾಸಿಗಳು ಠಾಣೆಗೆ ದೂರು ನೀಡಿದ್ದರು ಎಂಬ ಮಾಹಿತಿಯೂ ಲಭ್ಯವಾಗಿದೆ.

ಇದೀಗ ಆರೋಪಿ ಸ್ಥಾನದಲ್ಲಿ ನಿಂತಿರುವ ಮೋಹನ್​ಗೆ ಅಪಾರ್ಟ್​ಮೆಂಟ್​ ಮಾಲೀಕ ಹಲವು ಜವಾಬ್ದಾರಿ ನೀಡಿದ್ದು, ಅಪಾರ್ಟ್​ಮೆಂಟ್​ ನಿರ್ವಹಣೆ ಮಾಡುವಂತೆಯೂ ತಿಳಿಸಿದ್ದರು. ಆದರೆ, ಮೋಹನ್​ ಅವರ ಎಲ್ಲಾ ವ್ಯವಹಾರಗಳಿಗೆ ಅಡ್ಡಿಪಡಿಸುತ್ತಿದ್ದ ಕಾರ್ತಿಕ್, ಅಪಾರ್ಟ್​ಮೆಂಟ್ ಮಾಲೀಕನ ಪುತ್ರಿ ಜತೆ ಮೋಹನ್​ಗೆ ಅಕ್ರಮ ಸಂಬಂಧವಿದೆ ಎಂದು ವಾಟ್ಸ್ಯಾಪ್​ ಸ್ಟೇಟಸ್ ಸಹ ಹಾಕಿದ್ದರು.

ಅಕ್ರಮ ಸಂಬಂಧವಿದೆ ಎಂದು ಹೇಳಿದ್ದಕ್ಕೆ ಕುಪಿತಗೊಂಡ ಮೋಹನ್​, ತಲೆ ಮೇಲೆ ಕಲ್ಲು ಎತ್ತಿಹಾಕಿ ಕಾರ್ತಿಕ್​ರನ್ನು ಕೊಲೆಗೈದಿದ್ದರು. ಜೂನ್​ 16ರಂದು ಈ ಘಟನೆ ನಡೆದಿದ್ದು, ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಗೋಪಾಲನಗರ ಠಾಣೆಯಲ್ಲಿ ಪ್ರಕರಣ​ ದಾಖಲಾಗಿತ್ತು. ಇದೀಗ ಪೊಲೀಸರು ಮೋಹನ್​ ಹಾಗೂ ನಾಗರಾಜ್ ಎಂಬ ಇಬ್ಬರನ್ನು ಬಂಧಿಸಿದ್ದಾರೆ.

ಕೆಲ ದಿನಗಳ ಹಿಂದೆ ಕುಂದಾಪುರದಲ್ಲಿ ಅವಾಂತರ ಸೃಷ್ಟಿಸಿದ್ದ ವಾಟ್ಸ್ಯಾಪ್​ ಸ್ಟೇಟಸ್ ಕೆಲ ದಿನಗಳ ಹಿಂದೆಯಷ್ಟೇ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಯಡಮೊಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ವಾಟ್ಸ್ಯಾಪ್​ ಸ್ಟೇಟಸ್​ನಿಂದ ಜೋರಾದ ದ್ವೇಷ ಕೊಲೆಯಲ್ಲಿ ಅಂತ್ಯವಾದ ಘಟನೆಯೊಂದು ನಡೆದಿತ್ತು. ಯಡಮೊಗೆ ಗ್ರಾಮದ ನಿವಾಸಿ ಉದಯ್​ ಗಾಣಿಗ ಹತ್ಯೆ ಪ್ರಕರಣದಲ್ಲಿ ಯಡಮೊಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಾಣೇಶ್ ಯಡಿಯಾಳ್ ಎಂಬುವವರ ಮೇಲೆ ಕೊಲೆ ಆರೋಪ ಕೇಳಿಬಂದಿದ್ದು, ಭಾರೀ ಸುದ್ದಿಯಾಗಿತ್ತು.

ಯಡಮೊಗೆ ಗ್ರಾಮದಲ್ಲಿ ಸುಮಾರು 25 ಕೊರೊನಾ ಪಾಸಿಟಿವ್ ಪ್ರಕರಣ ಇದ್ದು, ಅದರ ನಿರ್ವಹಣೆಗೆ ಸಂಬಂಧಿಸಿದಂತೆ ವಾಟ್ಸ್ಯಾಪ್​ ಸ್ಟೇಟಸ್ ಹಾಕಿದ್ದ ಉದಯ್ ಗಾಣಿಗ ಊರಿಗೆ ಬೇಲಿ ಹಾಕುವ ಮೊದಲು ವ್ಯವಸ್ಥೆ ಕಲ್ಪಿಸಿ ಎಂದು ಪ್ರಾಣೇಶ್ ಯಡಿಯಾಳ ಅವರ ಕಾಲೆಳೆದಿದ್ದರು. ಅಲ್ಲದೇ ಅದಕ್ಕೂ ಮುನ್ನ ಉದಯ್ ಮನೆಯಲ್ಲಿ ಬೋರ್​ವೆಲ್ ಕೊರೆಸಲು ಪ್ರಾಣೇಶ್ ಅವಕಾಶ ಕೊಟ್ಟಿಲ್ಲ ಎನ್ನುವ ವಿಷಯವೂ ದ್ವೇಷಕ್ಕೆ ಕಾರಣವಾಗಿತ್ತು. ನಂತರ ವಾಟ್ಸ್ಯಾಪ್​ ಸ್ಟೇಟಸ್​ನಿಂದ ಪ್ರಾಣೇಶ್ ಯಡಿಯಾಳ ಮತ್ತಷ್ಟು ಕುಪಿತರಾಗಿ ಉದಯ್​ ಅವರ ಮೇಲೆ ಕಾರು ಹತ್ತಿಸಿ ಹತ್ಯೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಈ ಸಂಬಂಧ ಆರೋಪಿಗಳೆಲ್ಲರನ್ನೂ ಬಂಧಿಸಿದರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮೈಸೂರು: ಅನ್ಯಜಾತಿಯ ಹುಡುಗನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಲೆ ಮಾಡಿದ ತಂದೆ 

ಅನೈತಿಕ ಸಂಬಂಧ ಶಂಕೆ; ಮಹಿಳೆ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ತಂದೆ, ಅಪ್ರಾಪ್ತ ಮಗ ಅರೆಸ್ಟ್

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್