AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಧಿಸಲು ಹೋದ ಅರಣ್ಯ ಸಿಬ್ಬಂದಿಯನ್ನೇ ಮುಳುಗಿಸಿ, ಸಾಯಿಸಿದ ಮೀನುಗಾರರು!

ಮೈಸೂರು: ಅಕ್ರಮವಾಗಿ ಮೀನು ಹಿಡಿಯುತ್ತಿದ್ದವರನ್ನ ಹಿಡಿಯಲು ಹೋದ ಅರಣ್ಯ ಸಿಬ್ಬಂದಿಯನ್ನೇ ನೀರಿನಲ್ಲಿ ಮುಳುಗಿಸಿರುವ ಘಟನೆ ಹೆಚ್​.ಡಿ.ಕೋಟೆ ತಾಲೂಕಿನ ವನ್ಯಜೀವಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಡೆದಿದೆ. ನೀರಿನಲ್ಲಿ ಮುಳುಗಿ ಅರಣ್ಯ ಸಿಬ್ಬಂದಿಯಾದ ಶಿವಕುಮಾರ್ ಮತ್ತು ಮಹೇಶ ಮೃತಪಟ್ಟಿದ್ದಾರೆ. ಎನ್.ಬೇಗೂರು ಗುಂಡ್ರೆ ಅರಣ್ಯ ಪ್ರದೇಶದ ಕಬಿನಿ ಹಿನ್ನೀರಿನಲ್ಲಿ ಕಳ್ಳರು ಅಕ್ರಮವಾಗಿ ಮೀನು ಹಿಡಿಯುತ್ತಿದ್ದರು. ಮಾಹಿತಿ ಮೇರೆಗೆ ಮೀನುಗಾರರನ್ನು ಹಿಡಿಯಲು ಮೈಸೂರು ಅರಣ್ಯ ಇಲಾಖೆಯ ಸಿಬ್ಬಂದಿ ಹರಿಗೋಲಿನಲ್ಲಿ ಹೋಗಿದ್ದರು. ಈ ವೇಳೆ ಮೀನುಗಾರರನ್ನು ಕಂಡು ಅರಣ್ಯ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. […]

ಬಂಧಿಸಲು ಹೋದ ಅರಣ್ಯ ಸಿಬ್ಬಂದಿಯನ್ನೇ ಮುಳುಗಿಸಿ, ಸಾಯಿಸಿದ ಮೀನುಗಾರರು!
ಸಾಧು ಶ್ರೀನಾಥ್​
|

Updated on:Apr 25, 2020 | 1:22 PM

Share

ಮೈಸೂರು: ಅಕ್ರಮವಾಗಿ ಮೀನು ಹಿಡಿಯುತ್ತಿದ್ದವರನ್ನ ಹಿಡಿಯಲು ಹೋದ ಅರಣ್ಯ ಸಿಬ್ಬಂದಿಯನ್ನೇ ನೀರಿನಲ್ಲಿ ಮುಳುಗಿಸಿರುವ ಘಟನೆ ಹೆಚ್​.ಡಿ.ಕೋಟೆ ತಾಲೂಕಿನ ವನ್ಯಜೀವಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಡೆದಿದೆ. ನೀರಿನಲ್ಲಿ ಮುಳುಗಿ ಅರಣ್ಯ ಸಿಬ್ಬಂದಿಯಾದ ಶಿವಕುಮಾರ್ ಮತ್ತು ಮಹೇಶ ಮೃತಪಟ್ಟಿದ್ದಾರೆ.

ಎನ್.ಬೇಗೂರು ಗುಂಡ್ರೆ ಅರಣ್ಯ ಪ್ರದೇಶದ ಕಬಿನಿ ಹಿನ್ನೀರಿನಲ್ಲಿ ಕಳ್ಳರು ಅಕ್ರಮವಾಗಿ ಮೀನು ಹಿಡಿಯುತ್ತಿದ್ದರು. ಮಾಹಿತಿ ಮೇರೆಗೆ ಮೀನುಗಾರರನ್ನು ಹಿಡಿಯಲು ಮೈಸೂರು ಅರಣ್ಯ ಇಲಾಖೆಯ ಸಿಬ್ಬಂದಿ ಹರಿಗೋಲಿನಲ್ಲಿ ಹೋಗಿದ್ದರು. ಈ ವೇಳೆ ಮೀನುಗಾರರನ್ನು ಕಂಡು ಅರಣ್ಯ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆಗ ಅರಣ್ಯ ಇಲಾಖೆಯ 4 ಜನರಿದ್ದ ಹರಿಗೋಲನ್ನೇ ನದಿಯಲ್ಲಿ ಕಳ್ಳರು ಮುಳುಗಿಸಿದ್ದಾರೆ.

ಅರಣ್ಯ ಇಲಾಖೆಗೆ ಸೇರಿದ ಬಂದೂಕು ನೀರುಪಾಲು: ಘಟನೆ ಬಳಿಕ ಅರಣ್ಯ ಇಲಾಖೆ ಇಬ್ಬರು ಈಜಿ ದಡ ಸೇರಿದ್ದಾರೆ. ಅದ್ರೆ, ಇಬ್ಬರು ನೀರಿನಲ್ಲಿ ಈಜಲಾಗದೆ ಮುಳುಗಿ ಇಬ್ಬರು ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ ಅರಣ್ಯ ಇಲಾಖೆಗೆ ಸೇರಿದ ಬಂದೂಕು ಸಹ ನೀರುಪಾಲಾಗಿದೆ. ಸ್ಥಳಕ್ಕೆ ಡಿವೈಎಸ್‌ಪಿ ಸುಂದರ್‌ ರಾಜ್ ಸೇರಿ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಬೀಚನಹಳ್ಳಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Published On - 1:01 pm, Sat, 25 April 20

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್