ಉತ್ತರ ಪ್ರದೇಶ: ಪ್ರೀತಿ, ಅಕ್ಕರೆ ಎಲ್ಲಾ ಎಲ್ಲಿ ಹೋಯ್ತು? ಇಬ್ಬರು ಸಹೋದರಿಯರ ಶಿರಚ್ಛೇದ ಮಾಡಿದ ಅಕ್ಕ

ಯುವತಿಯೊಬ್ಬಳು ತನ್ನ ಇಬ್ಬರು ಸಹೋದರಿಯ ಶಿರಚ್ಛೇದ ಮಾಡಿರುವ ಘಟನೆ ಉತ್ತರ ಪ್ರದೇಶದ ಇಟಾವಾದಲ್ಲಿ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಕೆಲವೇ ಗಂಟೆಗಳ ನಂತರ ಆರೋಪಿ ಯುವತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಲರಾಯ ಪೊಲೀಸ್ ಠಾಣೆ ವ್ಯಾಪ್ತಿಯ ಬಹದ್ದೂರ್‌ಪುರ ಗ್ರಾಮದಲ್ಲಿ ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮೃತರನ್ನು ಜೈವೀರ್ ಸಿಂಗ್ ಅವರ ಪುತ್ರಿಯರಾದ ಸುರಭಿ (6) ಮತ್ತು ರೋಷ್ನಿ (4) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಮನೆಯ ವಿವಿಧ ಕೊಠಡಿಗಳಲ್ಲಿ ವಿಕೃತ ರೀತಿಯಲ್ಲಿ ಶವಗಳು ಪತ್ತೆಯಾಗಿವೆ ಎಂದು ಹೇಳಿದರು.

ಉತ್ತರ ಪ್ರದೇಶ: ಪ್ರೀತಿ, ಅಕ್ಕರೆ ಎಲ್ಲಾ ಎಲ್ಲಿ ಹೋಯ್ತು? ಇಬ್ಬರು ಸಹೋದರಿಯರ ಶಿರಚ್ಛೇದ ಮಾಡಿದ ಅಕ್ಕ
ಪ್ರಾತಿನಿಧಿಕ ಚಿತ್ರ
Follow us
|

Updated on: Oct 10, 2023 | 12:56 PM

ಯುವತಿಯೊಬ್ಬಳು ತನ್ನ ಇಬ್ಬರು ಸಹೋದರಿಯ ಶಿರಚ್ಛೇದ ಮಾಡಿರುವ ಘಟನೆ ಉತ್ತರ ಪ್ರದೇಶದ ಇಟಾವಾದಲ್ಲಿ ನಡೆದಿದೆ.  ಘಟನೆಯ ಬಗ್ಗೆ ಮಾಹಿತಿ ಪಡೆದ ಕೆಲವೇ ಗಂಟೆಗಳ ನಂತರ ಆರೋಪಿ ಯುವತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಲರಾಯ ಪೊಲೀಸ್ ಠಾಣೆ ವ್ಯಾಪ್ತಿಯ ಬಹದ್ದೂರ್‌ಪುರ ಗ್ರಾಮದಲ್ಲಿ ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮೃತರನ್ನು ಜೈವೀರ್ ಸಿಂಗ್ ಅವರ ಪುತ್ರಿಯರಾದ ಸುರಭಿ (6) ಮತ್ತು ರೋಷ್ನಿ (4) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಮನೆಯ ವಿವಿಧ ಕೊಠಡಿಗಳಲ್ಲಿ ವಿಕೃತ ರೀತಿಯಲ್ಲಿ ಶವಗಳು ಪತ್ತೆಯಾಗಿವೆ ಎಂದು ಹೇಳಿದರು.

ಅಂಜಲಿ ಪಾಲ್ ಎಂದು ಗುರುತಿಸಲಾದ ಆರೋಪಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾಳೆ ಎಂದು ಕಾನ್ಪುರ ರೇಂಜ್ ಪೊಲೀಸ್ ಮಹಾನಿರೀಕ್ಷಕ (ಐಜಿ) ಪ್ರಶಾಂತ್ ಕುಮಾರ್ ಹೇಳಿದ್ದಾರೆ. ಈ ಪ್ರಕರಣದ ಉದ್ದೇಶವನ್ನು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ತನಿಖೆಯ ನೇತೃತ್ವ ವಹಿಸಿರುವ ಕುಮಾರ್ ಹೇಳಿದ್ದಾರೆ.

ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302 (ಕೊಲೆ) ಮತ್ತು 201 (ಸಾಕ್ಷ್ಯವನ್ನು ಮರೆಮಾಚುವುದು ಅಥವಾ ಸುಳ್ಳು ಮಾಹಿತಿ ನೀಡುವುದು) ಅಡಿಯಲ್ಲಿ ದಾಖಲಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ಯುವತಿಯೊಂದಿಗೆ ಮೂವರು ಪುರುಷರನ್ನು ಸಹ ವಿಚಾರಣೆ ನಡೆಸಿದ್ದಾರೆ ಎಂದು ಎಸ್‌ಪಿ ಸಂಜಯ್ ವರ್ಮಾ ತಿಳಿಸಿದ್ದಾರೆ.

ಪೋಷಕರು ಇರದೇ ಇದ್ದಾಗ ಅಂಜಲಿ ತನ್ನ ಪ್ರಿಯಕರನೊಂದಿಗೆ ಇರುವುದನ್ನು ಮಕ್ಕಳು ನೋಡಿದ್ದರು ಹಾಗಾಗಿ ಅವರನ್ನು ಕೊಲೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಒಡಿಶಾ: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯನ್ನು ಮನಸೋ ಇಚ್ಛೆ ಥಳಿಸಿದ ಶಿಕ್ಷಕರು, ಬಾಲಕ ಸಾವು

ಕೊಲೆಗೆ ಬಳಸಿದ ಗುದ್ದಲಿಯನ್ನು ಪೊಲೀಸರು ಅಪರಾಧ ಸ್ಥಳದಿಂದ ವಶಪಡಿಸಿಕೊಂಡಿದ್ದಾರೆ. ಪೊಲೀಸರ ಪ್ರಕಾರ, ಫೋರೆನ್ಸಿಕ್ ತಂಡವು ತನಿಖೆಗಾಗಿ ಸ್ಥಳದಿಂದ ಗುದ್ದಲಿಯನ್ನು ವಶಪಡಿಸಿಕೊಂಡಿದೆ. ಫೋರೆನ್ಸಿಕ್ ತಂಡವು ಆರೋಪಿಯ ಮನೆಯ ಹೊರಗೆ ಬಿಸಿಲಿನಲ್ಲಿ ಒಣಗಲು ಹಾಕಿದ್ದ ಕೆಲವು ಬಟ್ಟೆಗಳನ್ನು ಸಹ ಪತ್ತೆ ಮಾಡಿದ್ದು, ವಶಪಡಿಸಿಕೊಳ್ಳಲಾಗಿದೆ.

ಘಟನೆಯ ವೇಳೆ ಜೈವೀರ್, ಅವರ ಪತ್ನಿ ಸುಶೀಲಾ, ಅವರ ಮಕ್ಕಳಾದ ನಂದ್ ಕಿಶೋರ್ (12) ಮತ್ತು ಕನ್ಹಯ್ಯ (8) ಮನೆಯಲ್ಲಿ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ