AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಶಾಲಾ ವಿದ್ಯಾರ್ಥಿಗಳೆದುರೇ ವ್ಯಕ್ತಿಗೆ ಕಲ್ಲಿನಿಂದ ಜಜ್ಜಿ, ಟೈಲ್ಸ್​​ನಿಂದ ಹೊಡೆದು ಹಲ್ಲೆ

ಶಾಲೆ ವಿದ್ಯಾರ್ಥಿಗಳು ನೋಡುತ್ತಿದ್ದಂತೆಯೇ ಅವರ ಮುಂದೆ ಇಬ್ಬರು ವ್ಯಕ್ತಿಗಳು ವ್ಯಕ್ತಿಯೊಬ್ಬನನ್ನು ಅಟ್ಟಾಡಿಸಿಕೊಂಡು ಬಂದು ಹಲ್ಲೆ ನಡೆಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.ಹಲ್ಲೆಗೊಳಗಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ದೂರು ಸ್ವೀಕರಿಸಿಲ್ಲ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ದೆಹಲಿ: ಶಾಲಾ ವಿದ್ಯಾರ್ಥಿಗಳೆದುರೇ ವ್ಯಕ್ತಿಗೆ ಕಲ್ಲಿನಿಂದ ಜಜ್ಜಿ, ಟೈಲ್ಸ್​​ನಿಂದ ಹೊಡೆದು ಹಲ್ಲೆ
ದೆಹಲಿ ಅಪರಾಧದ ದೃಶ್ಯ
ರಶ್ಮಿ ಕಲ್ಲಕಟ್ಟ
|

Updated on: Dec 02, 2023 | 6:19 PM

Share

ದೆಹಲಿ ಡಿಸೆಂಬರ್ 02: ದೆಹಲಿ (Delhi) ಆದರ್ಶ ನಗರದಲ್ಲಿ (Adarsh Nagar) ಇಬ್ಬರು ವ್ಯಕ್ತಿಗಳನ್ನು ಬೆನ್ನಟ್ಟಿ ಕಲ್ಲು ಮತ್ತು ಚಾಕುವಿನಿಂದ ಥಳಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Viral Video) ಆಗಿದೆ. ಒಬ್ಬ ವ್ಯಕ್ತಿಯನ್ನು ಇಬ್ಬರು ವ್ಯಕ್ತಿಗಳು ಹಿಂಬಾಲಿಸುತ್ತಿರುವುದು ವಿಡಿಯೊದಲ್ಲಿದ್ದು, ಮುಂದೆ ಓಡುತ್ತಿದ್ದ ವ್ಯಕ್ತಿ ತನ್ನ ಮನೆಯ ಮುಂದೆ ಬಿದ್ದಾಗ ಆ ಇಬ್ಬರು ವ್ಯಕ್ತಿಗಳು ಆತನನ್ನು ಹಿಡಿಯುತ್ತಾರೆ. ಅಲ್ಲಿ ಅವರು ಆ ವ್ಯಕ್ತಿ ಮೇಲೆ ಗಂಭೀರ ಹಲ್ಲೆ ನಡೆಸುತ್ತಾರೆ. ಮತ್ತೊಬ್ಬ ದಾಳಿಕೋರ, ಚಾಕುನಲ್ಲಿ ಇರಿಯಲು ಪ್ರಯತ್ನಿಸಿದಾಗ ಮತ್ತೊಬ್ಬ ಆತನನ್ನು ತಡೆಯುವುದು ಕಾಣುತ್ತದೆ.

ನಂತರ ಇಬ್ಬರೂ ಪಕ್ಕದಲ್ಲಿ ಬಿದ್ದಿರುವ ಕಲ್ಲುಗಳು, ಟೈಲ್ಸ್ ಎತ್ತಿಕೊಂಡು ಸಂತ್ರಸ್ತನಿಗೆ ಹೊಡೆಯಲು ಶುರು ಮಾಡುತ್ತಾರೆ. ವಿದ್ಯಾರ್ಥಿಗಳು ಮನೆಗೆ ತೆರಳುತ್ತಿದ್ದ ವೇಳೆ ಶಾಲೆಯ ಬಳಿ ಈ ಘಟನೆ ನಡೆದಿದೆ. ವ್ಯಕ್ತಿಯನ್ನು ಹೊಡೆಯುತ್ತಿರುವಾಗ, ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಸೇರುತ್ತಾರೆ. ಆದರೆ ನೆರೆಹೊರೆಯವರು ಯಾರೊಬ್ಬರೂ ಸಹಾಯಕ್ಕೆ ಬರಲಿಲ್ಲ.

ಹಲ್ಲೆಗೊಳಗಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ದೂರು ಸ್ವೀಕರಿಸಿಲ್ಲ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. ಸಂತ್ರಸ್ತನ ಕುಟುಂಬದಿಂದ ದೂರು ಬಂದರೆ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಉಪ ಆಯುಕ್ತ ಜಿತೇಂದ್ರ ಮೀನಾ ಹೇಳಿದ್ದಾರೆ.

ಇಂಥದ್ದೇ ಇನ್ನೊಂದು ಘಟನೆ ದೆಹಲಿಯಿಂದ ವರದಿ ಆಗಿದೆ. ಆಗ್ನೇಯ ದೆಹಲಿಯ ಸನ್‌ಲೈಟ್‌ ಕಾಲೋನಿಯಲ್ಲಿ ರಾತ್ರಿ ವೇಳೆ ಮಣಿಪುರದ  ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರ ಮೇಲೆ ಎಂಟು-ಒಂಬತ್ತು ಜನರ ಗುಂಪೊಂದು ರಸ್ತೆಯಲ್ಲಿ ಹಲ್ಲೆ ನಡೆಸಿದೆ. ಗುರುವಾರ ನಡೆದ ಘಟನೆಯನ್ನು ರಸ್ತೆಯ ಬಾಲ್ಕನಿಯಲ್ಲಿ ಮೊಬೈಲ್‌ನಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಶೇರ್ ಮಾಡಲಾಗಿದೆ. ಶುಕ್ರವಾರ ರಾತ್ರಿ ಹಲವಾರು ಅಪರಿಚಿತ ಆರೋಪಿಗಳ ವಿರುದ್ಧ ಪ್ರಥಮ ಮಾಹಿತಿ ವರದಿ (FIR) ದಾಖಲಿಸಲಾಗಿದೆ ಎಂದು ಸನ್‌ಲೈಟ್ ಕಾಲೋನಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎನ್‌ಡಿಟಿವಿ ಎಫ್‌ಐಆರ್ ಪ್ರತಿಯನ್ನು ನೋಡಿದ್ದು ಆರೋಪಗಳಲ್ಲಿ ಲೈಂಗಿಕ ದೌರ್ಜನ್ಯವೂ ಸೇರಿದೆ ಎಂದು ವರದಿ ಮಾಡಿದೆ.

ಇದನ್ನೂ ಓದಿ: ಕೆಆರ್​ ಪುರಂ ಠಾಣೆ PSI ಪಿಸ್ತೂಲ್ ಕಳವು ಮಾಡಿದ್ದ 3 ಆರೋಪಿಗಳ ಬಂಧನ

ಶುಕ್ರವಾರ ತಡರಾತ್ರಿ ಎಫ್‌ಐಆರ್ ದಾಖಲಿಸಿದ ನಂತರ ದೂರುದಾರರು ಸನ್‌ಲೈಟ್ ಕಾಲೋನಿ ಪೊಲೀಸ್ ಠಾಣೆಯ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಸಿಸಿಟಿವಿ ದೃಶ್ಯಾವಳಿಗಳಲ್ಲಿ ಇಬ್ಬರು ಆರೋಪಿಗಳ ಮುಖಗಳು ಸ್ಪಷ್ಟವಾಗಿ ಕಂಡುಬರುತ್ತವೆ ಎಂದಿದ್ದಾರೆ. ಮೊಬೈಲ್ ದೃಶ್ಯಗಳಲ್ಲಿ ಒಬ್ಬ ಪುರುಷ, ಅವನ ಹೆಂಡತಿ, ಅವನ ಸಹೋದರಿ ಮತ್ತು ಕುಟುಂಬದ ಸ್ನೇಹಿತ ಈ ನಾಲ್ವರಿಗೆ ಜನರ ಮೇಲೆ ಗುಂಪೊಂದು ಹಲ್ಲೆ ನಡೆಸುತ್ತಿರುವುದನ್ನು ತೋರಿಸುತ್ತದೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ