AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಟೆಕ್ಕಿಗೆ ಮದ್ಯ ಕುಡಿಸಿ ಅತ್ಯಾಚಾರ: ಇಬ್ಬರು ನೈಜೀರಿಯಾ ಪ್ರಜೆಗಳನ್ನ ಬಂಧಿಸಿದ ಬಾಣಸವಾಡಿ ಪೊಲೀಸರು

Nigerian: ನಗರದ ಪ್ರತಿಷ್ಠಿತ ಕಂಪನಿಯಲ್ಲಿ ಸಾಫ್ಟವೇರ್ ಉದ್ಯೋಗಿಯಾಗಿರುವ ಸಂತ್ರಸ್ತ ಯುವತಿಗೆ ಆರೋಪಿ ಆ್ಯಂಟೋನಿ ಹಲವು ವರ್ಷಗಳಿಂದ ಪರಿಚಯವಿದ್ದ. ಕಳೆದ ಭಾನುವಾರ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಮಹಿಳಾ ಟೆಕ್ಕಿಗೆ ಮದ್ಯ ಕುಡಿಸಿ ಅತ್ಯಾಚಾರ: ಇಬ್ಬರು ನೈಜೀರಿಯಾ ಪ್ರಜೆಗಳನ್ನ ಬಂಧಿಸಿದ ಬಾಣಸವಾಡಿ ಪೊಲೀಸರು
ಮಹಿಳಾ ಟೆಕ್ಕಿಗೆ ಮದ್ಯ ಕುಡಿಸಿ ಅತ್ಯಾಚಾರ: ಇಬ್ಬರು ನೈಜೀರಿಯಾ ಪ್ರಜೆಗಳನ್ನ ಬಂಧಿಸಿದ ಬಾಣಸವಾಡಿ ಪೊಲೀಸರು
TV9 Web
| Updated By: ಸಾಧು ಶ್ರೀನಾಥ್​|

Updated on:Sep 04, 2021 | 7:40 AM

Share

ಬೆಂಗಳೂರು: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ವಿದೇಶಿಗರ ಆಟಾಟೋಪ ಮಿತಿಮೀರಿದೆ. ಅಪರಾಧಗಳ ಮೇಲೆ ಅಪರಾಧಗಳನ್ನು ಮಾಡುತ್ತಿದ್ದಾರೆ. ಇಬ್ಬರು ನೈಜೀರಿಯಾ ಪ್ರಜೆಗಳು ಮಹಿಳಾ ಟೆಕ್ಕಿಗೆ ಮದ್ಯ ಕುಡಿಸಿ ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಇಬ್ಬರು ನೈಜೀರಿಯಾ ಪ್ರಜೆಗಳನ್ನ ಪೊಲೀಸರು ಬಂಧಿಸಿದ್ದಾರೆ.

ಬಾಣಸವಾಡಿ ಪೊಲೀಸರು ಇಬ್ಬರು ಅತ್ಯಾಚಾರ ಆರೋಪಿಗಳಾದ ಆ್ಯಂಟೋನಿ (35) ಮತ್ತು ಒಬಾಕಾನನ್ನು (36) ಸೆರೆ ಹಿಡಿದಿದ್ದಾರೆ. ನಗರದ ಪ್ರತಿಷ್ಠಿತ ಕಂಪನಿಯಲ್ಲಿ ಸಾಫ್ಟವೇರ್ ಉದ್ಯೋಗಿಯಾಗಿರುವ 29 ವರ್ಷದ ಸಂತ್ರಸ್ತ ಯುವತಿಗೆ ಆರೋಪಿ ಆ್ಯಂಟೋನಿ ಹಲವು ವರ್ಷಗಳಿಂದ ಪರಿಚಯವಿದ್ದ. ಕಳೆದ ಭಾನುವಾರ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಯುವತಿಗೆ ಪರಿಚಯವಿದ್ದ ಆರೋಪಿ ಆ್ಯಂಟೋನಿ ಆಗಸ್ಟ್​ 29ರಂದು ಯುವತಿಯನ್ನು ಸ್ನೇಹಿತರ ಮನೆಗೆಂದು ಕರೆದೊಯ್ದಿದ್ದ. ಬಳಿಕ ಮೂವರೂ ಜೊತೆಗೆ ಕುಳಿತು ಮದ್ಯ ಸೇವಿಸಿದ್ದರು. ಕುಡಿದ ಮತ್ತಿನಲ್ಲಿದ್ದಾಗ ಅತ್ಯಾಚಾರ ಮಾಡಿದ್ದಾಗಿ ಯುವತಿ ಆರೋಪ ಮಾಡಿದ್ದಾಳೆ. ಈ ಸಂಬಂಧ ಬಾಣಸವಾಡಿ ಪೊಲೀಸ್​ ಠಾಣೆಗೆ ಯುವತಿ ದೂರು ನೀಡಿದ್ದರು. ಯುವತಿಯ ದೂರಿನ ಮೇರೆಗೆ ಇಬ್ಬರನ್ನೂ ಬಂಧಿಸಲಾಗಿದೆ. ಯುವತಿಯನ್ನು ಬಾಣಸವಾಡಿ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

ಬೆಂಗಳೂರಿನಲ್ಲಿ ರಸ್ತೆ ಅಪಘಾತ: ಇಂಟರ್​ವ್ಯೂಗೆ ತೆರಳುತ್ತಿದ್ದ ಯುವತಿ ಸಾವು

ಬೆಂಗಳೂರಿನಲ್ಲಿ ರಸ್ತೆ ಅಪಘಾತಕ್ಕೆ ಯುವತಿಯೊಬ್ಬರು ಬಲಿಯಾಗಿದ್ದಾರೆ.  ನಿನ್ನೆ ಮಧ್ಯಾಹ್ನ ಭದ್ರಪ್ಪ ಲೇ ಔಟಿನಲ್ಲಿ ಹಿಂಬದಿಯಿಂದ ಬರುತ್ತಿದ್ದ ಕ್ಯಾಂಟರ್ ಸ್ಕೂಟರ್ ಗೆ ಢಿಕ್ಕಿಯಾಗಿ ಘಟನೆ ನಡೆದಿದೆ. ಕೆಂಗೇರಿ ನಿವಾಸಿ ಗಂಗಾ (22) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.  ಯುವತಿ ಕೆಲಸಕ್ಕಾಗಿ ಇಂಟರ್​ವ್ಯೂಗೆ ತೆರಳುತ್ತಿದ್ದರು. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೆಬ್ಬಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read:

ಗೋಕುಲಾಷ್ಟಮಿಯ ಪೂರ್ಣ ಫಲ ಪ್ರಾಪ್ತಿಯಾಗಲು ರಾಧಾ ಜನ್ಮಾಷ್ಟಮಿ ಆಚರಿಸಬೇಕು; ರಾಧಾ ಅಷ್ಟಮಿ ಸಿದ್ಧತೆ, ಆಚರಣೆ ಹೇಗೆ?

ಬೆಳಗಾವಿಯಲ್ಲಿ 15 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; 20 ದಿನಗಳ ಹಿಂದೆ ನಡೆದ ಘಟನೆ, ನಾಲ್ವರ ಬಂಧನ (two Nigerians allegedly rape woman techie in banasawadi bangalore)

Published On - 7:28 am, Sat, 4 September 21

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?