AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಕರೆನ್ಸಿ ನೀಡಿ ₹64 ಲಕ್ಷ ಮೌಲ್ಯದ ₹500 ಮತ್ತು ₹1000 ಮುಖಬೆಲೆಯ ಹಳೇ ನೋಟುಗಳನ್ನು ಪಡೆದಿದ್ದ ಇಬ್ಬರು ವ್ಯಕ್ತಿಗಳ ಬಂಧನ

ಎಎನ್ಐ ಸುದ್ದಿಸಂಸ್ಥೆಯ ಪ್ರಕಾರ ₹14 ಲಕ್ಷ ಕೊಟ್ಟು ಇವರು ₹64 ಲಕ್ಷ ಮೌಲ್ಯದ ಹಳೇ ನೋಟುಗಳನ್ನು ಪಡೆದಿದ್ದಾರೆ. ಈ ವ್ಯಕ್ತಿಗಳ ಕೈಯಲ್ಲಿ ಹೇಗೆ ಹಳೇ ನೋಟುಗಳು ಬಂತು ಎಂಬುದರ ಬಗ್ಗೆ ದೆಹಲಿ ಪೊಲೀಸರು...

ಹೊಸ ಕರೆನ್ಸಿ ನೀಡಿ ₹64 ಲಕ್ಷ ಮೌಲ್ಯದ ₹500 ಮತ್ತು ₹1000 ಮುಖಬೆಲೆಯ ಹಳೇ ನೋಟುಗಳನ್ನು ಪಡೆದಿದ್ದ ಇಬ್ಬರು ವ್ಯಕ್ತಿಗಳ ಬಂಧನ
ಬಂಧಿತ ಆರೋಪಿಗಳು
TV9 Web
| Edited By: |

Updated on: Jul 07, 2022 | 7:13 PM

Share

ನೋಟು ಅಮಾನ್ಯೀಕರಣದ (demonetisation) ವೇಳೆ ರದ್ದು ಮಾಡಲಾಗಿದ್ದ ₹500 ಮತ್ತು ₹1000 ಮುಖಬೆಲೆಯ ಹಳೇ ನೋಟುಗಳನ್ನು ಕೈವಶವಿರಿಸಿಕೊಂಡಿದ್ದ ಇಬ್ಬರು ವ್ಯಕ್ತಿಗಳನ್ನು ಪೂರ್ವ ದೆಹಲಿಯ (Delhi) ಲಕ್ಷ್ಮಿ ನಗರದಿಂದ ಬಂಧಿಸಲಾಗಿದೆ. ಇವರ ಬಳಿಯಿಂದ ₹62 ಲಕ್ಷ ಮೌಲ್ಯದ ಹಳೇ ನೋಟುಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಎಎನ್ಐ ಸುದ್ದಿಸಂಸ್ಥೆಯ ಪ್ರಕಾರ ₹14 ಲಕ್ಷ ಕೊಟ್ಟು ಇವರು ₹64 ಲಕ್ಷ ಮೌಲ್ಯದ ಹಳೇ ನೋಟುಗಳನ್ನು ಪಡೆದಿದ್ದಾರೆ. ಈ ವ್ಯಕ್ತಿಗಳ ಕೈಯಲ್ಲಿ ಹೇಗೆ ಹಳೇ ನೋಟುಗಳು ಬಂತು ಎಂಬುದರ ಬಗ್ಗೆ ದೆಹಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. 2016 ನವೆಂಬರ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ₹500 ಮತ್ತು ₹1000 ಮುಖಬೆಲೆಯ ನೋಟುಗಳನ್ನು ರದ್ದು ಮಾಡುವುದಾಗಿ ಘೋಷಿಸಿದರು. ಈ ಘೋಷಣೆ ನಂತರ ಕೇಂದ್ರ ಸರ್ಕಾರವು ಹಳೇ ₹500 ನೋಟುಗಳ ಬದಲಿಗೆ ಹೊಸ ನೋಟು ಚಲಾವಣೆಗೆ ತಂದರೂ 1000 ಮುಖಬೆಲೆಯ ನೋಟನ್ನು ರದ್ದು ಮಾಡಿತ್ತು. ಇದರ ಬದಲಿಗೆ ಹೊಸ ₹2000 ನೋಟನ್ನು ಚಲಾವಣೆಗೆ ತಂದಿತ್ತು. ಹಳೇ ನೋಟುಗಳನ್ನು ಬದಲಿಸಲು ಸರ್ಕಾರ ದೇಶದ ಜನರಿಗೆ 2017 ಮಾರ್ಚ್ ವರೆಗೆ ಕಾಲಾವಕಾಶವನ್ನೂ ನೀಡಿತ್ತು. 2018ರಲ್ಲಿ ಆರ್​​ಬಿಐ ₹10, ₹50 ಮತ್ತು ₹200 ಹೊಸ ನೋಟನ್ನು ಚಲಾವಣೆಗೆ ತಂದಿತ್ತು. ಅದೇ ವೇಳೆ ಲ್ಯಾವೆಂಡರ್ ಬಣ್ಣದ ಹೊಸ 100ರ ನೋಟನ್ನೂ ಚಲಾವಣೆಗೆ ತಂದಿತ್ತು.

ನೋಟು ಅಮಾನ್ಯೀಕರಣದಿಂದಾಗಿ ಶೇ 86ರಷ್ಟು ಕರೆನ್ಸಿ ಚಲಾವಣೆಗೆ ಹೊಡೆತ ಬಿತ್ತು. ಗ್ರಾಮೀಣ ಪ್ರದೇಶಗಳಲ್ಲಿ ಕರೆನ್ಸಿ ಕೊರತೆಯೂ ಕಂಡು ಬಂತು. ಆದಾಗ್ಯೂ ನೋಟು ಅಮಾನ್ಯೀಕರಣ ನಡೆಯಿಂದಾಗಿ ದೇಶದಲ್ಲಿ ಡಿಜಿಟಲ್ ವ್ಯವಹಾರವು ಹೆಚ್ಚಾಯಿತು.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ