AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫುಟ್​ಬಾಲ್ ಪಂದ್ಯದ ವೇಳೆ ಘರ್ಷಣೆ: ವಾಹನಗಳಿಗೆ ಬೆಂಕಿ, ಇಬ್ಬರ ಹತ್ಯೆ

ಈ ಘರ್ಷಣೆಯಿಂದ ಪಾತುರ ​​ನಿವಾಸಿ ವಿನಯ್ ಸಾಹು, ಕಾರ್ಮಿ ದೇವಿ ಮತ್ತು ಕಿಂಡಿರ್ಕೇಲ ನಿವಾಸಿ ಶೇಖ್ ಬೆಲಾಲ್ ಗಂಭೀರ ಗಾಯಗೊಂಡಿದ್ದಾರೆ.

ಫುಟ್​ಬಾಲ್ ಪಂದ್ಯದ ವೇಳೆ ಘರ್ಷಣೆ: ವಾಹನಗಳಿಗೆ ಬೆಂಕಿ, ಇಬ್ಬರ ಹತ್ಯೆ
clash
TV9 Web
| Updated By: ಝಾಹಿರ್ ಯೂಸುಫ್|

Updated on:Aug 25, 2021 | 11:06 PM

Share

ಫುಟ್​ಬಾಲ್ ಪಂದ್ಯದ ವೇಳೆ ಶುರುವಾದ ಜಗಳ ಇಬ್ಬರ ಕೊಲೆಯೊಂದಿಗೆ ಅಂತ್ಯಗೊಂಡ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ. ಗುಮ್ಲಾ ಜಿಲ್ಲೆಯ ಬಾಸಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಬಸ್ತೋಲಿಯಲ್ಲಿ ರಾತ್ರಿ ನಡೆದ ಫುಟ್ಬಾಲ್ ಪಂದ್ಯದ ಬಳಿಕ ಈ ಘಟನೆ ಜರುಗಿದೆ. ಈ ಪಂದ್ಯದಲ್ಲಿ ಪಾತುರಾ vs ಪೀಠಕ್ ಟೋಲಿ ತಂಡಗಳು ಮುಖಾಮುಖಿಯಾಗಿದ್ದವು. ಪಂದ್ಯದ ನಡುವೆ ರೆಫರಿ ನೀಡಿದ ತೀರ್ಪಿನ ವಿರುದ್ದ ಒಂದು ತಂಡವು ಆಕ್ರೋಶ ವ್ಯಕ್ತಪಡಿಸಿತ್ತು. ಇದೇ ವೇಳೆ ಉಭಯ ತಂಡಗಳ ಅಭಿಮಾನಿಗಳು ಮೈದಾನಕ್ಕಿಳಿದ್ದರಿಂದ ವಾಗ್ವಾದ ತಾರಕ್ಕೇರಿತು. ಪ್ರೇಕ್ಷಕರ ನಡುವಣ ಈ ಘರ್ಷಣೆಯು ಆ ಬಳಿಕ ಎರಡು ತಂಡಗಳ ಗ್ರಾಮಗಳಿಗೆ ಪಸರಿಸಿದೆ.

ಫುಟ್​ಬಾಲ್ ಮೈದಾನದಲ್ಲಿ ಗಲಾಟೆಯ ವಿಚಾರ ಎರಡು ಗ್ರಾಮಗಳ ನಡುವೆ ಕಿಡಿ ಹೊತ್ತಿಸಿದ್ದು, ಪರಸ್ಪರ ದಾಳಿಗೆ ಮುಂದಾಗಿದ್ದಾರೆ. ಈ ದಾಳಿ ವೇಳೆ ಪತುರಾ ಗ್ರಾಮದಲ್ಲಿ ಒಂದು ಬೊಲೆರೋ ಮತ್ತು ಮೂರು ಮೋಟಾರ್ ಸೈಕಲ್‌ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಇದರಿಂದ ಗ್ರಾಮದಲ್ಲಿ ಮತ್ತಷ್ಟು ಉದ್ವಿಗ್ನತೆ ಉಂಟಾಗಿದೆ.

ಈ ಘರ್ಷಣೆಯಿಂದ ಪಾತುರ ​​ನಿವಾಸಿ ವಿನಯ್ ಸಾಹು, ಕಾರ್ಮಿ ದೇವಿ ಮತ್ತು ಕಿಂಡಿರ್ಕೇಲ ನಿವಾಸಿ ಶೇಖ್ ಬೆಲಾಲ್ ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ರೆಫರಲ್ ಆಸ್ಪತ್ರೆ ಬಾಸಿಯಾಕ್ಕೆ ಕರೆಕೊಂಡು ಹೋದರು. ಅಲ್ಲಿಂದ ಶೇಖ್ ಬೆಲಾಲ್ ಮತ್ತು ವಿನಯ್ ಅವರನ್ನು ಉತ್ತಮ ಚಿಕಿತ್ಸೆಗಾಗಿ ರಿಮ್ಸ್ ರಾಂಚಿಗೆ ಕಳುಹಿಸಲಾಗಿದೆ.

ಇನ್ನು ಗುಂಪು ಘರ್ಷಣೆಯಲ್ಲಿ ಸಿಲುಕಿದ್ದ ಘಘರ ಬ್ಲಾಕ್​ನ ಬಾಳೆ ತೋಟದ ನಿರ್ದೇಶಕ ಲೋಕೇಶ್ ಪುಟ್ಟಸ್ವಾಮಿ ಮತ್ತು ಸಹವರ್ತಿ ಎಂ ದೇವ ವಾಸು ಅವರನ್ನು ಆಕ್ರೋಶಿತ ಗುಂಪು ಹತ್ಯೆ ಮಾಡಿದೆ. ತೀಕ್ಷ್ಣವಾದ ಆಯುಧಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದ್ದು, ಕೊಲೆಗಡುಕರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಸದ್ಯ ಬಾಸಿಯಾ ಠಾಣಾ ವ್ಯಾಪ್ತಿಯ ಈ ಎರಡು ಗ್ರಾಮಗಳು ಸಹಜ ಸ್ಥಿತಿ ಬಂದಿದ್ದು, ಯಾವಾಗ ಬೇಕಾದರೂ ಮತ್ತೆ ಗಲಭೆ ಉಂಟಾಗುವ ಭಯದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: ಪೆಟ್ರೋಲ್, ಡಿಸೇಲ್ ಹಾಕಬೇಕಿಲ್ಲ, ಚಾರ್ಜ್​ ಕೂಡ ಮಾಡಬೇಕಿಲ್ಲ: ಇದು ಮಾರುತಿ ಸುಜುಕಿ ಹೊಸ ಕಾರು

ಇದನ್ನೂ ಓದಿ: Video: ಒಂದೇ ಒಂದು ಬೌನ್ಸರ್ ಎಸೆದು ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದ!

ಇದನ್ನೂ ಓದಿ: Crime News: ಅಶ್ಲೀಲ ವೀಡಿಯೋ ಕಳುಹಿಸುತ್ತಿದ್ದ ಆಂಟಿ ಅರೆಸ್ಟ್..!

Published On - 10:30 pm, Wed, 25 August 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ