AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನಾಭರಣ ಪ್ರದರ್ಶನ ವೇಳೆ 200 ಗ್ರಾಂ ಚಿನ್ನ ಎಗರಿಸಿದ ಐನಾತಿ ಮಹಿಳೆಯರು!

ಬೆಂಗಳೂರು: ಚಿನ್ನಾಭರಣ ಪ್ರದರ್ಶನ ವೇಳೆ ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಸರ ಎಗರಿಸಿ ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ಜನವರಿ 18ರಿಂದ 20ರವರೆಗೂ ರಾಜಕುಮಾರ್ ರಸ್ತೆಯ ಖಾಸಗಿ ಹೋಟೆಲ್​ನಲ್ಲಿ ವಿಶಾಖಪಟ್ಟಣಂ ಮೂಲದ ವೈಭವ್ ಜ್ಯುವೆಲ್ಲರಿ ಮಳಿಗೆ ಮಾಲೀಕರು ಚಿನ್ನಾಭರಣ ಪ್ರದರ್ಶನ ಕಾರ್ಯಕ್ರಮ ಆಯೋಜಿಸಿದ್ದರು. ಆಗ ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು ಹಾಗೂ ಒಬ್ಬ ಪುರುಷ 196.720 ಗ್ರಾಂ ಚಿನ್ನ ಕದ್ದು ಪರಾರಿಯಾಗಿದ್ದಾರೆ. 5 ಮಂದಿ ಖದೀಮರ ತಂಡ: ಘಟನೆ ನಡೆದ ವೇಳೆ ಯಾರಿಗೂ ಚಿನ್ನ ಕದ್ದಿರುವ […]

ಚಿನ್ನಾಭರಣ ಪ್ರದರ್ಶನ ವೇಳೆ 200 ಗ್ರಾಂ ಚಿನ್ನ ಎಗರಿಸಿದ ಐನಾತಿ ಮಹಿಳೆಯರು!
ಸಾಧು ಶ್ರೀನಾಥ್​
|

Updated on:Jan 30, 2020 | 2:59 PM

Share

ಬೆಂಗಳೂರು: ಚಿನ್ನಾಭರಣ ಪ್ರದರ್ಶನ ವೇಳೆ ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಸರ ಎಗರಿಸಿ ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ಜನವರಿ 18ರಿಂದ 20ರವರೆಗೂ ರಾಜಕುಮಾರ್ ರಸ್ತೆಯ ಖಾಸಗಿ ಹೋಟೆಲ್​ನಲ್ಲಿ ವಿಶಾಖಪಟ್ಟಣಂ ಮೂಲದ ವೈಭವ್ ಜ್ಯುವೆಲ್ಲರಿ ಮಳಿಗೆ ಮಾಲೀಕರು ಚಿನ್ನಾಭರಣ ಪ್ರದರ್ಶನ ಕಾರ್ಯಕ್ರಮ ಆಯೋಜಿಸಿದ್ದರು. ಆಗ ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು ಹಾಗೂ ಒಬ್ಬ ಪುರುಷ 196.720 ಗ್ರಾಂ ಚಿನ್ನ ಕದ್ದು ಪರಾರಿಯಾಗಿದ್ದಾರೆ.

5 ಮಂದಿ ಖದೀಮರ ತಂಡ: ಘಟನೆ ನಡೆದ ವೇಳೆ ಯಾರಿಗೂ ಚಿನ್ನ ಕದ್ದಿರುವ ವಿಚಾರ ಅರಿವಿಗೆ ಬಂದಿರಲಿಲ್ಲ. ಚಿನ್ನಾಭರಣ ಪ್ರದರ್ಶನ ಮುಗಿದ ಬಳಿಕ ಲೆಕ್ಕಾಚಾರದ ವೇಳೆ ಚಿನ್ನದ ಸರ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ. ಬಳಿಕ ಅನುಮಾನಗೊಂಡು ಹೋಟೆಲ್​ನ ಸಿಸಿಟಿವಿ ಪರಿಶೀಲನೆ ಮಾಡಿದಾಗ ಐನಾತಿ ಕಳ್ಳರ ಕೃತ್ಯ ಬೆಳಕಿಗೆ ಬಂದಿದೆ.

ಘಟನೆ ಕುರಿತು ವೈಭವ್ ಚಿನ್ನದ ಮಳಿಗೆ ಮಾಲೀಕರು ಸುಬ್ರಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಸಿಸಿಟಿವಿ ದೃಶ್ಯ ಆಧರಿಸಿ ತನಿಖೆ ಕೈಗೊಂಡಿದ್ದಾರೆ. ಕಳ್ಳರ ಗ್ಯಾಂಗಿನಲ್ಲಿ ಒಟ್ಟು 5 ಮಂದಿ ಇರಬಹುದು ಎಂದು ಶಂಕಿಸಲಾಗಿದೆ.

Published On - 2:58 pm, Thu, 30 January 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್