AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನಾಭರಣ ಪ್ರದರ್ಶನ ವೇಳೆ 200 ಗ್ರಾಂ ಚಿನ್ನ ಎಗರಿಸಿದ ಐನಾತಿ ಮಹಿಳೆಯರು!

ಬೆಂಗಳೂರು: ಚಿನ್ನಾಭರಣ ಪ್ರದರ್ಶನ ವೇಳೆ ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಸರ ಎಗರಿಸಿ ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ಜನವರಿ 18ರಿಂದ 20ರವರೆಗೂ ರಾಜಕುಮಾರ್ ರಸ್ತೆಯ ಖಾಸಗಿ ಹೋಟೆಲ್​ನಲ್ಲಿ ವಿಶಾಖಪಟ್ಟಣಂ ಮೂಲದ ವೈಭವ್ ಜ್ಯುವೆಲ್ಲರಿ ಮಳಿಗೆ ಮಾಲೀಕರು ಚಿನ್ನಾಭರಣ ಪ್ರದರ್ಶನ ಕಾರ್ಯಕ್ರಮ ಆಯೋಜಿಸಿದ್ದರು. ಆಗ ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು ಹಾಗೂ ಒಬ್ಬ ಪುರುಷ 196.720 ಗ್ರಾಂ ಚಿನ್ನ ಕದ್ದು ಪರಾರಿಯಾಗಿದ್ದಾರೆ. 5 ಮಂದಿ ಖದೀಮರ ತಂಡ: ಘಟನೆ ನಡೆದ ವೇಳೆ ಯಾರಿಗೂ ಚಿನ್ನ ಕದ್ದಿರುವ […]

ಚಿನ್ನಾಭರಣ ಪ್ರದರ್ಶನ ವೇಳೆ 200 ಗ್ರಾಂ ಚಿನ್ನ ಎಗರಿಸಿದ ಐನಾತಿ ಮಹಿಳೆಯರು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 30, 2020 | 2:59 PM

Share

ಬೆಂಗಳೂರು: ಚಿನ್ನಾಭರಣ ಪ್ರದರ್ಶನ ವೇಳೆ ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಸರ ಎಗರಿಸಿ ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ಜನವರಿ 18ರಿಂದ 20ರವರೆಗೂ ರಾಜಕುಮಾರ್ ರಸ್ತೆಯ ಖಾಸಗಿ ಹೋಟೆಲ್​ನಲ್ಲಿ ವಿಶಾಖಪಟ್ಟಣಂ ಮೂಲದ ವೈಭವ್ ಜ್ಯುವೆಲ್ಲರಿ ಮಳಿಗೆ ಮಾಲೀಕರು ಚಿನ್ನಾಭರಣ ಪ್ರದರ್ಶನ ಕಾರ್ಯಕ್ರಮ ಆಯೋಜಿಸಿದ್ದರು. ಆಗ ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು ಹಾಗೂ ಒಬ್ಬ ಪುರುಷ 196.720 ಗ್ರಾಂ ಚಿನ್ನ ಕದ್ದು ಪರಾರಿಯಾಗಿದ್ದಾರೆ.

5 ಮಂದಿ ಖದೀಮರ ತಂಡ: ಘಟನೆ ನಡೆದ ವೇಳೆ ಯಾರಿಗೂ ಚಿನ್ನ ಕದ್ದಿರುವ ವಿಚಾರ ಅರಿವಿಗೆ ಬಂದಿರಲಿಲ್ಲ. ಚಿನ್ನಾಭರಣ ಪ್ರದರ್ಶನ ಮುಗಿದ ಬಳಿಕ ಲೆಕ್ಕಾಚಾರದ ವೇಳೆ ಚಿನ್ನದ ಸರ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ. ಬಳಿಕ ಅನುಮಾನಗೊಂಡು ಹೋಟೆಲ್​ನ ಸಿಸಿಟಿವಿ ಪರಿಶೀಲನೆ ಮಾಡಿದಾಗ ಐನಾತಿ ಕಳ್ಳರ ಕೃತ್ಯ ಬೆಳಕಿಗೆ ಬಂದಿದೆ.

ಘಟನೆ ಕುರಿತು ವೈಭವ್ ಚಿನ್ನದ ಮಳಿಗೆ ಮಾಲೀಕರು ಸುಬ್ರಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಸಿಸಿಟಿವಿ ದೃಶ್ಯ ಆಧರಿಸಿ ತನಿಖೆ ಕೈಗೊಂಡಿದ್ದಾರೆ. ಕಳ್ಳರ ಗ್ಯಾಂಗಿನಲ್ಲಿ ಒಟ್ಟು 5 ಮಂದಿ ಇರಬಹುದು ಎಂದು ಶಂಕಿಸಲಾಗಿದೆ.

Published On - 2:58 pm, Thu, 30 January 20

Follow Us
ಚೆನ್ನಮ್ಮ ಸಮಾಧಿ ಮುಂದೆಯೇ ಕುಳಿತು ದೇವೇಗೌಡರ ಕಣ್ಣೀರು
ಚೆನ್ನಮ್ಮ ಸಮಾಧಿ ಮುಂದೆಯೇ ಕುಳಿತು ದೇವೇಗೌಡರ ಕಣ್ಣೀರು
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್