AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನಾಭರಣ ಪ್ರದರ್ಶನ ವೇಳೆ 200 ಗ್ರಾಂ ಚಿನ್ನ ಎಗರಿಸಿದ ಐನಾತಿ ಮಹಿಳೆಯರು!

ಬೆಂಗಳೂರು: ಚಿನ್ನಾಭರಣ ಪ್ರದರ್ಶನ ವೇಳೆ ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಸರ ಎಗರಿಸಿ ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ಜನವರಿ 18ರಿಂದ 20ರವರೆಗೂ ರಾಜಕುಮಾರ್ ರಸ್ತೆಯ ಖಾಸಗಿ ಹೋಟೆಲ್​ನಲ್ಲಿ ವಿಶಾಖಪಟ್ಟಣಂ ಮೂಲದ ವೈಭವ್ ಜ್ಯುವೆಲ್ಲರಿ ಮಳಿಗೆ ಮಾಲೀಕರು ಚಿನ್ನಾಭರಣ ಪ್ರದರ್ಶನ ಕಾರ್ಯಕ್ರಮ ಆಯೋಜಿಸಿದ್ದರು. ಆಗ ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು ಹಾಗೂ ಒಬ್ಬ ಪುರುಷ 196.720 ಗ್ರಾಂ ಚಿನ್ನ ಕದ್ದು ಪರಾರಿಯಾಗಿದ್ದಾರೆ. 5 ಮಂದಿ ಖದೀಮರ ತಂಡ: ಘಟನೆ ನಡೆದ ವೇಳೆ ಯಾರಿಗೂ ಚಿನ್ನ ಕದ್ದಿರುವ […]

ಚಿನ್ನಾಭರಣ ಪ್ರದರ್ಶನ ವೇಳೆ 200 ಗ್ರಾಂ ಚಿನ್ನ ಎಗರಿಸಿದ ಐನಾತಿ ಮಹಿಳೆಯರು!
ಸಾಧು ಶ್ರೀನಾಥ್​
|

Updated on:Jan 30, 2020 | 2:59 PM

Share

ಬೆಂಗಳೂರು: ಚಿನ್ನಾಭರಣ ಪ್ರದರ್ಶನ ವೇಳೆ ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಸರ ಎಗರಿಸಿ ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ಜನವರಿ 18ರಿಂದ 20ರವರೆಗೂ ರಾಜಕುಮಾರ್ ರಸ್ತೆಯ ಖಾಸಗಿ ಹೋಟೆಲ್​ನಲ್ಲಿ ವಿಶಾಖಪಟ್ಟಣಂ ಮೂಲದ ವೈಭವ್ ಜ್ಯುವೆಲ್ಲರಿ ಮಳಿಗೆ ಮಾಲೀಕರು ಚಿನ್ನಾಭರಣ ಪ್ರದರ್ಶನ ಕಾರ್ಯಕ್ರಮ ಆಯೋಜಿಸಿದ್ದರು. ಆಗ ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು ಹಾಗೂ ಒಬ್ಬ ಪುರುಷ 196.720 ಗ್ರಾಂ ಚಿನ್ನ ಕದ್ದು ಪರಾರಿಯಾಗಿದ್ದಾರೆ.

5 ಮಂದಿ ಖದೀಮರ ತಂಡ: ಘಟನೆ ನಡೆದ ವೇಳೆ ಯಾರಿಗೂ ಚಿನ್ನ ಕದ್ದಿರುವ ವಿಚಾರ ಅರಿವಿಗೆ ಬಂದಿರಲಿಲ್ಲ. ಚಿನ್ನಾಭರಣ ಪ್ರದರ್ಶನ ಮುಗಿದ ಬಳಿಕ ಲೆಕ್ಕಾಚಾರದ ವೇಳೆ ಚಿನ್ನದ ಸರ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ. ಬಳಿಕ ಅನುಮಾನಗೊಂಡು ಹೋಟೆಲ್​ನ ಸಿಸಿಟಿವಿ ಪರಿಶೀಲನೆ ಮಾಡಿದಾಗ ಐನಾತಿ ಕಳ್ಳರ ಕೃತ್ಯ ಬೆಳಕಿಗೆ ಬಂದಿದೆ.

ಘಟನೆ ಕುರಿತು ವೈಭವ್ ಚಿನ್ನದ ಮಳಿಗೆ ಮಾಲೀಕರು ಸುಬ್ರಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಸಿಸಿಟಿವಿ ದೃಶ್ಯ ಆಧರಿಸಿ ತನಿಖೆ ಕೈಗೊಂಡಿದ್ದಾರೆ. ಕಳ್ಳರ ಗ್ಯಾಂಗಿನಲ್ಲಿ ಒಟ್ಟು 5 ಮಂದಿ ಇರಬಹುದು ಎಂದು ಶಂಕಿಸಲಾಗಿದೆ.

Published On - 2:58 pm, Thu, 30 January 20

Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ