ಚಿನ್ನಾಭರಣ ಪ್ರದರ್ಶನ ವೇಳೆ 200 ಗ್ರಾಂ ಚಿನ್ನ ಎಗರಿಸಿದ ಐನಾತಿ ಮಹಿಳೆಯರು!

ಬೆಂಗಳೂರು: ಚಿನ್ನಾಭರಣ ಪ್ರದರ್ಶನ ವೇಳೆ ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಸರ ಎಗರಿಸಿ ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ಜನವರಿ 18ರಿಂದ 20ರವರೆಗೂ ರಾಜಕುಮಾರ್ ರಸ್ತೆಯ ಖಾಸಗಿ ಹೋಟೆಲ್​ನಲ್ಲಿ ವಿಶಾಖಪಟ್ಟಣಂ ಮೂಲದ ವೈಭವ್ ಜ್ಯುವೆಲ್ಲರಿ ಮಳಿಗೆ ಮಾಲೀಕರು ಚಿನ್ನಾಭರಣ ಪ್ರದರ್ಶನ ಕಾರ್ಯಕ್ರಮ ಆಯೋಜಿಸಿದ್ದರು. ಆಗ ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು ಹಾಗೂ ಒಬ್ಬ ಪುರುಷ 196.720 ಗ್ರಾಂ ಚಿನ್ನ ಕದ್ದು ಪರಾರಿಯಾಗಿದ್ದಾರೆ. 5 ಮಂದಿ ಖದೀಮರ ತಂಡ: ಘಟನೆ ನಡೆದ ವೇಳೆ ಯಾರಿಗೂ ಚಿನ್ನ ಕದ್ದಿರುವ […]

ಚಿನ್ನಾಭರಣ ಪ್ರದರ್ಶನ ವೇಳೆ 200 ಗ್ರಾಂ ಚಿನ್ನ ಎಗರಿಸಿದ ಐನಾತಿ ಮಹಿಳೆಯರು!
ಸಾಧು ಶ್ರೀನಾಥ್​

Updated on: Jan 30, 2020 | 2:59 PM

ಬೆಂಗಳೂರು: ಚಿನ್ನಾಭರಣ ಪ್ರದರ್ಶನ ವೇಳೆ ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಸರ ಎಗರಿಸಿ ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ಜನವರಿ 18ರಿಂದ 20ರವರೆಗೂ ರಾಜಕುಮಾರ್ ರಸ್ತೆಯ ಖಾಸಗಿ ಹೋಟೆಲ್​ನಲ್ಲಿ ವಿಶಾಖಪಟ್ಟಣಂ ಮೂಲದ ವೈಭವ್ ಜ್ಯುವೆಲ್ಲರಿ ಮಳಿಗೆ ಮಾಲೀಕರು ಚಿನ್ನಾಭರಣ ಪ್ರದರ್ಶನ ಕಾರ್ಯಕ್ರಮ ಆಯೋಜಿಸಿದ್ದರು. ಆಗ ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು ಹಾಗೂ ಒಬ್ಬ ಪುರುಷ 196.720 ಗ್ರಾಂ ಚಿನ್ನ ಕದ್ದು ಪರಾರಿಯಾಗಿದ್ದಾರೆ.

5 ಮಂದಿ ಖದೀಮರ ತಂಡ: ಘಟನೆ ನಡೆದ ವೇಳೆ ಯಾರಿಗೂ ಚಿನ್ನ ಕದ್ದಿರುವ ವಿಚಾರ ಅರಿವಿಗೆ ಬಂದಿರಲಿಲ್ಲ. ಚಿನ್ನಾಭರಣ ಪ್ರದರ್ಶನ ಮುಗಿದ ಬಳಿಕ ಲೆಕ್ಕಾಚಾರದ ವೇಳೆ ಚಿನ್ನದ ಸರ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ. ಬಳಿಕ ಅನುಮಾನಗೊಂಡು ಹೋಟೆಲ್​ನ ಸಿಸಿಟಿವಿ ಪರಿಶೀಲನೆ ಮಾಡಿದಾಗ ಐನಾತಿ ಕಳ್ಳರ ಕೃತ್ಯ ಬೆಳಕಿಗೆ ಬಂದಿದೆ.

ಘಟನೆ ಕುರಿತು ವೈಭವ್ ಚಿನ್ನದ ಮಳಿಗೆ ಮಾಲೀಕರು ಸುಬ್ರಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಸಿಸಿಟಿವಿ ದೃಶ್ಯ ಆಧರಿಸಿ ತನಿಖೆ ಕೈಗೊಂಡಿದ್ದಾರೆ. ಕಳ್ಳರ ಗ್ಯಾಂಗಿನಲ್ಲಿ ಒಟ್ಟು 5 ಮಂದಿ ಇರಬಹುದು ಎಂದು ಶಂಕಿಸಲಾಗಿದೆ.

Published On - 2:58 pm, Thu, 30 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us