ತುಮಕೂರು: ಪೊಲೀಸ್, ನಿರಾಶ್ರಿತರ ಕೇಂದ್ರದ ಸಿಬ್ಬಂದಿ ಮೇಲೆ ಚಾಕುವಿನಿಂದ ದಾಳಿ ನಡೆಸಿದ ಉಗಾಂಡ ಮಹಿಳೆಯರು

ಪಾಸ್ ಪೋರ್ಟ್ ಅವಧಿ ಮುಗಿದ ವಿದೇಶಿಗರ ನಿರಾಶ್ರಿತ ಕೇಂದ್ರದಲ್ಲಿದ್ದ ಉಗಾಂಡದ ನಾಲ್ವರು ಮಹಿಳೆಯರು ಪೊಲೀಸ್ ಹಾಗೂ ಕೇಂದ್ರದ ಸಿಬ್ಬಂದಿ ಮೇಲೆ ದಾಳಿ ನಡೆಸಿದ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು: ಪೊಲೀಸ್, ನಿರಾಶ್ರಿತರ ಕೇಂದ್ರದ ಸಿಬ್ಬಂದಿ ಮೇಲೆ ಚಾಕುವಿನಿಂದ ದಾಳಿ ನಡೆಸಿದ ಉಗಾಂಡ ಮಹಿಳೆಯರು
ಉಗಾಂಡ ಮಹಿಳೆಯರಿಂದ ದಾಳಿಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೊಲೀಸ್ ಸಿಬ್ಬಂದಿ
Follow us
| Updated By: Rakesh Nayak Manchi

Updated on:Jul 07, 2023 | 9:09 PM

ತುಮಕೂರು: ಉಗಾಂಡದ (Uganda) ನಾಲ್ವರು ಮಹಿಳೆಯರು ಪೊಲೀಸ್ ಹಾಗೂ ಪಾಸ್ ಪೋರ್ಟ್ ಅವಧಿ ಮುಗಿದ ವಿದೇಶಿಗರ ನಿರಾಶ್ರಿತ ಕೇಂದ್ರದ (Foreigners Refugee Centre) ಸಿಬ್ಬಂದಿ ಮೇಲೆ ದಾಳಿ ನಡೆಸಿದ ಘಟನೆ ಜಿಲ್ಲೆಯ ದಿಬ್ಬೂರಿನಲ್ಲಿ ನಡೆದಿದೆ. ಪಿಎಸ್ಐ ಚಂದ್ರಕಲಾ, ಡಬ್ಲ್ಯುಪಿಸಿ ತಾಸೀನಾ ಬಾನು, ನಿರಾಶ್ರಿತ ಕೇಂದ್ರದ ಡ್ರೈವರ್ ಬಸವರಾಜು, ಅಡುಗೆ ಸಹಾಯಕಿ ಲಕ್ಷ್ಮೀ ಎಂಬುವರ ಮೇಲೆ ದಾಳಿ ನಡೆಸಲಾಗಿದೆ.

ಪಾಸ್​ಪೋರ್ಟ್ ಅವಧಿ ಮುಕ್ತಾಯದ ನಂತರವೂ ಅಕ್ರಮವಾಗಿ ಇಲ್ಲೇ ಉಳಿದುಕೊಂಡಿದ್ದ ವಿದೇಶಿ ಪ್ರಜೆಗಳನ್ನು ದಿಬ್ಬೂರಿನಲ್ಲಿರುವ ವಿದೇಶಿಗರ ನಿರಾಶ್ರಿತರ ಕೇಂದ್ರದಲ್ಲಿ ಇರಿಸಲಾಗಿತ್ತು. ಈ ಕೇಂದ್ರದಲ್ಲಿ ಸುಮಾರು 30 ಜನರಿದ್ದಾರೆ. ಅದರಂತೆ ಅಡುಗೆ ಮಾಡಲು ಗ್ಯಾಸ್ ಸಿಲಿಂಡರ್ ನೀಡಲು ಹೋದಾಗ ಉಗಾಂಡದ ನಾಲ್ವರು ಮಹಿಳೆಯರು ಸಿಬ್ಬಂದಿಯನ್ನು ಕೊಠಡಿಯಲ್ಲಿ ಕೂಡಿಹಾಕಿ ಚಾಕು ಹಿಡಿದುಕೊಂಡು ಕೊಲೆ ಯತ್ನ ನಡೆಸಿದ್ದಾರೆ.

ಇದನ್ನೂ ಓದಿ: Ramanagara News: ಮಹಿಳೆ ಮೇಲೆ ದಾಳಿ ಮಾಡಿದ ರಾಷ್ಟ್ರೀಯ ಪಕ್ಷಿ ನವಿಲು: ಅರಣ್ಯ ಇಲಾಖೆಗೆ ದೂರು

ಘಟನೆಯಲ್ಲಿ ಪಿಎಸ್ಐ ಚಂದ್ರಕಲಾ, ಡಬ್ಲ್ಯುಪಿಸಿ ತಾಸೀನಾ ಬಾನು, ನಿರಾಶ್ರಿತ ಕೇಂದ್ರದ ಡ್ರೈವರ್ ಬಸವರಾಜು, ಅಡುಗೆ ಸಹಾಯಕಿ ಲಕ್ಷ್ಮೀ ಎಂಬವರ ಕೈ ಕಾಲುಗಳಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಈ ಬಗ್ಗೆ ಹೇಳಿಕೆ ನೀಡಿದ ಎಸ್​ಪಿ ರಾಹುಲ್ ಕುಮಾರ್, ಕಳೆದ ಎರಡು ತಿಂಗಳಿಂದ ತುಮಕೂರಿನಲ್ಲಿ ವಿದೇಶಿ ಪ್ರಜೆಗಳ ನಿರಾಶ್ರಿತರ ಕೇಂದ್ರ ಓಪನ್ ಆಗಿದೆ‌. ಆ ಕೇಂದ್ರದಲ್ಲಿ ಬಾಂಗ್ಲಾದೇಶ, ನೈಜೀರಿಯ ಸೇರಿದಂತೆ ಒಟ್ಟು 5 ದೇಶದ 27 ವಿದೇಶಿ ಮಹಿಳಾ ಪ್ರಜೆಗಳು ಇದ್ದಾರೆ. ಬೇರೆ ಬೇರೆ ಕಾರಣಗಳಿಂದ ಹಾಗೂ ವಿಸಾ ಮುಗಿದ ಹಿನ್ನೆಲೆ ಅವರನ್ನ ಇಲ್ಲಿ ಕರೆತಂದು ಇರಿಸಲಾಗಿದೆ. ಇವತ್ತು ಸಂಜೆ ಸ್ಟವ್​ಗಳನ್ನ ಬಳಸುತ್ತಿದ್ದಾರೆ ಎಂಬ ಮಾಹಿತಿ ಆಧಾರದ ಮೇಲೆ ಪರಿಶೀಲನೆ ನಡೆಸಲು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಪೊಲೀಸ್ ಸಿಬ್ಬಂದಿ ಜೊತೆಗೆ ಇಲ್ಲಿಗೆ ಬಂದಿದ್ದಾರೆ. ಈ ವೇಳೆ ದಾಳಿ ನಡೆಸಿದ್ದಾರೆ. ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಲಾಗುತ್ತದೆ. ದೂರು ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತೇವೆ ಎಂದರು.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:43 pm, Fri, 7 July 23

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ