AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಪೊಲೀಸ್, ನಿರಾಶ್ರಿತರ ಕೇಂದ್ರದ ಸಿಬ್ಬಂದಿ ಮೇಲೆ ಚಾಕುವಿನಿಂದ ದಾಳಿ ನಡೆಸಿದ ಉಗಾಂಡ ಮಹಿಳೆಯರು

ಪಾಸ್ ಪೋರ್ಟ್ ಅವಧಿ ಮುಗಿದ ವಿದೇಶಿಗರ ನಿರಾಶ್ರಿತ ಕೇಂದ್ರದಲ್ಲಿದ್ದ ಉಗಾಂಡದ ನಾಲ್ವರು ಮಹಿಳೆಯರು ಪೊಲೀಸ್ ಹಾಗೂ ಕೇಂದ್ರದ ಸಿಬ್ಬಂದಿ ಮೇಲೆ ದಾಳಿ ನಡೆಸಿದ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು: ಪೊಲೀಸ್, ನಿರಾಶ್ರಿತರ ಕೇಂದ್ರದ ಸಿಬ್ಬಂದಿ ಮೇಲೆ ಚಾಕುವಿನಿಂದ ದಾಳಿ ನಡೆಸಿದ ಉಗಾಂಡ ಮಹಿಳೆಯರು
ಉಗಾಂಡ ಮಹಿಳೆಯರಿಂದ ದಾಳಿಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೊಲೀಸ್ ಸಿಬ್ಬಂದಿ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Jul 07, 2023 | 9:09 PM

Share

ತುಮಕೂರು: ಉಗಾಂಡದ (Uganda) ನಾಲ್ವರು ಮಹಿಳೆಯರು ಪೊಲೀಸ್ ಹಾಗೂ ಪಾಸ್ ಪೋರ್ಟ್ ಅವಧಿ ಮುಗಿದ ವಿದೇಶಿಗರ ನಿರಾಶ್ರಿತ ಕೇಂದ್ರದ (Foreigners Refugee Centre) ಸಿಬ್ಬಂದಿ ಮೇಲೆ ದಾಳಿ ನಡೆಸಿದ ಘಟನೆ ಜಿಲ್ಲೆಯ ದಿಬ್ಬೂರಿನಲ್ಲಿ ನಡೆದಿದೆ. ಪಿಎಸ್ಐ ಚಂದ್ರಕಲಾ, ಡಬ್ಲ್ಯುಪಿಸಿ ತಾಸೀನಾ ಬಾನು, ನಿರಾಶ್ರಿತ ಕೇಂದ್ರದ ಡ್ರೈವರ್ ಬಸವರಾಜು, ಅಡುಗೆ ಸಹಾಯಕಿ ಲಕ್ಷ್ಮೀ ಎಂಬುವರ ಮೇಲೆ ದಾಳಿ ನಡೆಸಲಾಗಿದೆ.

ಪಾಸ್​ಪೋರ್ಟ್ ಅವಧಿ ಮುಕ್ತಾಯದ ನಂತರವೂ ಅಕ್ರಮವಾಗಿ ಇಲ್ಲೇ ಉಳಿದುಕೊಂಡಿದ್ದ ವಿದೇಶಿ ಪ್ರಜೆಗಳನ್ನು ದಿಬ್ಬೂರಿನಲ್ಲಿರುವ ವಿದೇಶಿಗರ ನಿರಾಶ್ರಿತರ ಕೇಂದ್ರದಲ್ಲಿ ಇರಿಸಲಾಗಿತ್ತು. ಈ ಕೇಂದ್ರದಲ್ಲಿ ಸುಮಾರು 30 ಜನರಿದ್ದಾರೆ. ಅದರಂತೆ ಅಡುಗೆ ಮಾಡಲು ಗ್ಯಾಸ್ ಸಿಲಿಂಡರ್ ನೀಡಲು ಹೋದಾಗ ಉಗಾಂಡದ ನಾಲ್ವರು ಮಹಿಳೆಯರು ಸಿಬ್ಬಂದಿಯನ್ನು ಕೊಠಡಿಯಲ್ಲಿ ಕೂಡಿಹಾಕಿ ಚಾಕು ಹಿಡಿದುಕೊಂಡು ಕೊಲೆ ಯತ್ನ ನಡೆಸಿದ್ದಾರೆ.

ಇದನ್ನೂ ಓದಿ: Ramanagara News: ಮಹಿಳೆ ಮೇಲೆ ದಾಳಿ ಮಾಡಿದ ರಾಷ್ಟ್ರೀಯ ಪಕ್ಷಿ ನವಿಲು: ಅರಣ್ಯ ಇಲಾಖೆಗೆ ದೂರು

ಘಟನೆಯಲ್ಲಿ ಪಿಎಸ್ಐ ಚಂದ್ರಕಲಾ, ಡಬ್ಲ್ಯುಪಿಸಿ ತಾಸೀನಾ ಬಾನು, ನಿರಾಶ್ರಿತ ಕೇಂದ್ರದ ಡ್ರೈವರ್ ಬಸವರಾಜು, ಅಡುಗೆ ಸಹಾಯಕಿ ಲಕ್ಷ್ಮೀ ಎಂಬವರ ಕೈ ಕಾಲುಗಳಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಈ ಬಗ್ಗೆ ಹೇಳಿಕೆ ನೀಡಿದ ಎಸ್​ಪಿ ರಾಹುಲ್ ಕುಮಾರ್, ಕಳೆದ ಎರಡು ತಿಂಗಳಿಂದ ತುಮಕೂರಿನಲ್ಲಿ ವಿದೇಶಿ ಪ್ರಜೆಗಳ ನಿರಾಶ್ರಿತರ ಕೇಂದ್ರ ಓಪನ್ ಆಗಿದೆ‌. ಆ ಕೇಂದ್ರದಲ್ಲಿ ಬಾಂಗ್ಲಾದೇಶ, ನೈಜೀರಿಯ ಸೇರಿದಂತೆ ಒಟ್ಟು 5 ದೇಶದ 27 ವಿದೇಶಿ ಮಹಿಳಾ ಪ್ರಜೆಗಳು ಇದ್ದಾರೆ. ಬೇರೆ ಬೇರೆ ಕಾರಣಗಳಿಂದ ಹಾಗೂ ವಿಸಾ ಮುಗಿದ ಹಿನ್ನೆಲೆ ಅವರನ್ನ ಇಲ್ಲಿ ಕರೆತಂದು ಇರಿಸಲಾಗಿದೆ. ಇವತ್ತು ಸಂಜೆ ಸ್ಟವ್​ಗಳನ್ನ ಬಳಸುತ್ತಿದ್ದಾರೆ ಎಂಬ ಮಾಹಿತಿ ಆಧಾರದ ಮೇಲೆ ಪರಿಶೀಲನೆ ನಡೆಸಲು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಪೊಲೀಸ್ ಸಿಬ್ಬಂದಿ ಜೊತೆಗೆ ಇಲ್ಲಿಗೆ ಬಂದಿದ್ದಾರೆ. ಈ ವೇಳೆ ದಾಳಿ ನಡೆಸಿದ್ದಾರೆ. ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಲಾಗುತ್ತದೆ. ದೂರು ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತೇವೆ ಎಂದರು.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:43 pm, Fri, 7 July 23

Follow Us
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!