ಮಲ್ಲೇಶ್ವರಂನಲ್ಲೂ ಡ್ರಗ್ಸ್ ಹಾವಳಿ? ಇಬ್ಬರು ಯುವಕರ ಸಾವು

ಬೆಂಗಳೂರು: ಒಂದೇ ಏರಿಯಾದಲ್ಲಿ‌ ಇಬ್ಬರು ಯುವಕರ ಮೃತಪಟ್ಟಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಮಲ್ಲೇಶ್ವರಂ 13ನೇ ಕ್ರಾಸ್​ನ ಅಭಿಲಾಶ್ ಮತ್ತು ಗೋಪಿ ಮೃತ ಯುವಕರಾಗಿದ್ದಾರೆ. ಹೊಟ್ಟೆ ನೋವೆಂದು ಅಭಿಲಾಷ್ ಮಾತ್ರೆ ಸೇವಿಸಿದ್ದ. ಹೊಟ್ಟೆ ನೋವು ಹೆಚ್ಚಾದ ಕಾರಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಅಭಿಲಾಷ್ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ. ಇನ್ನು ಗೋಪಿ ಎಂಬಾತ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ. ಈತನೂ ಸಹ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಪ್ರತ್ಯೇಕ ಆಸ್ಪತ್ರೆಗೆ ದಾಖಲಾಗಿದ್ದ ಒಂದೇ ಏರಿಯಾದ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಡ್ರಗ್ಸ್ […]

ಮಲ್ಲೇಶ್ವರಂನಲ್ಲೂ ಡ್ರಗ್ಸ್ ಹಾವಳಿ? ಇಬ್ಬರು ಯುವಕರ ಸಾವು
ಸಾಧು ಶ್ರೀನಾಥ್​

Updated on: Nov 20, 2019 | 6:09 AM

ಬೆಂಗಳೂರು: ಒಂದೇ ಏರಿಯಾದಲ್ಲಿ‌ ಇಬ್ಬರು ಯುವಕರ ಮೃತಪಟ್ಟಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಮಲ್ಲೇಶ್ವರಂ 13ನೇ ಕ್ರಾಸ್​ನ ಅಭಿಲಾಶ್ ಮತ್ತು ಗೋಪಿ ಮೃತ ಯುವಕರಾಗಿದ್ದಾರೆ.

ಹೊಟ್ಟೆ ನೋವೆಂದು ಅಭಿಲಾಷ್ ಮಾತ್ರೆ ಸೇವಿಸಿದ್ದ. ಹೊಟ್ಟೆ ನೋವು ಹೆಚ್ಚಾದ ಕಾರಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಅಭಿಲಾಷ್ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ. ಇನ್ನು ಗೋಪಿ ಎಂಬಾತ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ. ಈತನೂ ಸಹ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

ಪ್ರತ್ಯೇಕ ಆಸ್ಪತ್ರೆಗೆ ದಾಖಲಾಗಿದ್ದ ಒಂದೇ ಏರಿಯಾದ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಡ್ರಗ್ಸ್ ಸೇವಿಸಿ ಪಾರ್ಟಿ ಮಾಡಿದ ಕಾರಣ ಈ ಯುವಕರು ಸಾವನ್ನಪ್ಪಿದ್ದಾರೆ ಎಂಬ ಶಂಕೆ ವ್ಯಕ್ತಪಡಿಸಲಾಗಿದೆ.

Published On - 11:15 pm, Tue, 19 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us