ನೇಜಾರು ನಾಲ್ವರ ಹತ್ಯೆ ಪ್ರಕರಣ: ಆರೋಪಿಯ ಪೆರೋಲ್ ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

ಉಡುಪಿಯ ನೇಜಾರು ಗ್ರಾಮದಲ್ಲಿ ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ್ದ ಪೆರೋಲ್ ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿದೆ. ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಡಿಸೆಂಬರ್ ತಿಂಗಳಲ್ಲಿ ನ್ಯಾಯಾಲಯವು ತಿರಸ್ಕರಿಸಿತ್ತು.

ನೇಜಾರು ನಾಲ್ವರ ಹತ್ಯೆ ಪ್ರಕರಣ: ಆರೋಪಿಯ ಪೆರೋಲ್ ಅರ್ಜಿ ತಿರಸ್ಕರಿಸಿದ ನ್ಯಾಯಾಲಯ
ನೇಜಾರು ನಾಲ್ವರ ಹತ್ಯೆ ಪ್ರಕರಣ ಸಂಬಂಧ ಆರೋಪಿಯ ಪೆರೋಲ್ ಅರ್ಜಿ ತಿರಸ್ಕರಿಸಿದ ನ್ಯಾಯಾಲಯ
Edited By: Rakesh Nayak Manchi

Updated on: Feb 11, 2024 | 7:49 AM

ಉಡುಪಿ, ಫೆ.11: ನಗರದ ನೇಜಾರ್ (Nejar) ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ (Murder) ಮಾಡಿದ್ದ ಪ್ರಕರಣ ಸಂಬಂಧ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ್ದ ಪೆರೋಲ್ ಅರ್ಜಿಯನ್ನು ಉಡುಪಿಯ ಜೆಎಂಎಫ್‌ಸಿ ನ್ಯಾಯಾಲಯ ವಜಾಗೊಳಿಸಿದೆ. ಫೆಬ್ರವರಿ 1 ರಂದು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಿಧನರಾದ ತಮ್ಮ ಮೃತ ಸಹೋದರ ನಿತಿನ್ ಅವರ ಅಂತ್ಯಕ್ರಿಯೆಯ ವಿಧಿಗಳಲ್ಲಿ ಪಾಲ್ಗೊಳ್ಳಲು ತಾತ್ಕಾಲಿಕ ಬಿಡುಗಡೆಗಾಗಿ ಫೆಬ್ರವರಿ 8 ರಂದು ಮೂರು ಗಂಟೆಗಳ ಅವಧಿಗೆ ಚೌಗುಲೆ ಪೆರೋಲ್ ಅರ್ಜಿ ಸಲ್ಲಿಸಿದ್ದನು.

ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಾಗ, ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕ ಎಚ್‌ಎಂ ನದಾಫ್ ಅವರು ಪೆರೋಲ್ ನೀಡುವ ಮನವಿಗೆ ಆಕ್ಷೇಪನೆ ವ್ಯಕ್ತಪಡಿಸಿದರು. ಆರೋಪಿಯನ್ನು ತಾತ್ಕಾಲಿಕವಾಗಿ ಬಿಡುಗಡೆ ಮಾಡಿದರೆ ಕಾನೂನು ಮತ್ತು ಸುವ್ಯವಸ್ಥೆಗೆ ಅಡ್ಡಿಯಾಗುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಹೆಚ್ಚುವರಿಯಾಗಿ, ಆರೋಪಿಯು ತನ್ನ ಸಹೋದರನ ಮರಣ ಪ್ರಮಾಣಪತ್ರವನ್ನು ಒದಗಿಸಲು ವಿಫಲವಾಗಿದ್ದಾರೆ ಎಂದು ನದಾಫ್ ವಾದಿಸಿದರು. ಅಲ್ಲದೆ, ವಿನಂತಿಯ ನ್ಯಾಯಸಮ್ಮತತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಅತ್ಯಾಚಾರ, ಬ್ಲ್ಯಾಕ್​​ಮೇಲ್ ಪ್ರಕರಣ; ಆರೋಪಿಗೆ 20 ವರ್ಷ ಶಿಕ್ಷೆ, 62 ಸಾವಿರ ರೂ ದಂಡ ವಿಧಿಸಿದ ನ್ಯಾಯಾಲಯ

ವಾದಗಳನ್ನು ಕೂಲಂಕುಷವಾಗಿ ಪರಿಗಣಿಸಿದ ನ್ಯಾಯಾಧೀಶೆ ದೀಪಾ ಅವರು ಆರೋಪಿಗೆ ಪೆರೋಲ್ ನೀಡದೆ ಅರ್ಜಿಯನ್ನು ತಿರಸ್ಕರಿಸಿದರು. ವಾದ ಮಂಡನೆ ವೇಳೆ ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಎಚ್.ಎಂ.ನದಾಫ್ ಇದ್ದರು.

ತನಿಖಾ ತಂಡವು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಚಾರ್ಜ್ ಶೀಟ್ ಅನ್ನು ಫೆಬ್ರವರಿ 12 ರಂದು ಉಡುಪಿ ನ್ಯಾಯಾಲಯಕ್ಕೆ ಸಲ್ಲಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಪೊಲೀಸರ ಕೈಸೇರಿದ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಗಳೊಂದಿಗೆ ತನಿಖೆ ಮುಕ್ತಾಯಗೊಂಡಿದೆ ಎಂದು ತಿಳಿದುಬಂದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Web contact

TV9 Kannada

Read More
Follow Us