AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನವೀಯತೆಯ ಕಗ್ಗೊಲೆ: ನಾಯಿಗಳ ಬಾಯಿಗೆ ಆ್ಯಸಿಡ್ ಹಾಕಿ ಕೊಲೆಗೈದ ಪಾಪಿಗಳು..!

ನಾಲ್ಕರಿಂದ ಎಂಟು ವರ್ಷ ಪ್ರಾಯದ ನಾಯಿಗಳ ಮೇಲೆ ಆ್ಯಸಿಡ್ ದಾಳಿ ನಡೆಸಲಾಗಿದ್ದು, ಕೆಲ ನಾಯಿಗಳ ಬಾಯಿಗೆ ಆ್ಯಸಿಡ್ ಹಾಕಿದ್ದರಿಂದ ಸಂಪೂರ್ಣ ಸುಟ್ಟುಹೋಗಿದೆ.

ಮಾನವೀಯತೆಯ ಕಗ್ಗೊಲೆ: ನಾಯಿಗಳ ಬಾಯಿಗೆ ಆ್ಯಸಿಡ್ ಹಾಕಿ ಕೊಲೆಗೈದ ಪಾಪಿಗಳು..!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 04, 2021 | 10:38 PM

Share

ಇಡೀ ಸಮಾಜವೇ ತಲೆ ತಗ್ಗಿಸುವಂತಹ ಘಟನೆಯೊಂದು ಮಧ್ಯಪ್ರದೇಶದ ಉಜ್ಜೈನಿಯಲ್ಲಿ ನಡೆದಿದೆ. ನಗರದ ಪ್ರಮುಖ ರಸ್ತೆಯಲ್ಲಿದ್ದ ಓಡಾಡುತ್ತಿದ್ದ ಬೀದಿ ನಾಯಿಗಳನ್ನು ಆ್ಯಸಿಡ್ ದಾಳಿ ನಡೆಸಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಈ ಬಗ್ಗೆ ವ್ಯಾಪಕ ಆಕ್ರೋಶಗಳು ವ್ಯಕ್ತವಾಗುತ್ತಿದ್ದಂತೆ ಇದೀಗ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಉಜ್ಜೈನಿಯ ನಾಗಜಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 5 ಬೀದಿ ನಾಯಿಗಳ ಬಾಯಿಗೆ ಕೆಲವು ಅಪರಿಚಿತ ವ್ಯಕ್ತಿಗಳು ಆ್ಯಸಿಡ್ ಹಾಕಿದ್ದಾರೆ ಎಂದು ಕರೆ ಮಾಡಿದ್ದರು. ಇದನ್ನು ಕೇಳಿ ಸ್ಥಳಕ್ಕೆ ಧಾವಿಸಿದಾಗ ಘಟನೆ ನಡೆದಿರುವುದು ಬೆಳಕಿಗೆ ಬಂತು ಎಂದು ಪೀಪಲ್ ಫಾರ್ ಅನಿಮಲ್ಸ್ ಇಂದೋರ್ ಘಟಕದ ಅಧ್ಯಕ್ಷ ಪ್ರಿಯಾಂಶು ಜೈನ್ ತಿಳಿಸಿದ್ದಾರೆ. ಆ ಬಳಿಕ ಸಂಸ್ಥೆಯ ಸದಸ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ನಾಲ್ಕರಿಂದ ಎಂಟು ವರ್ಷ ಪ್ರಾಯದ ನಾಯಿಗಳ ಮೇಲೆ ಆ್ಯಸಿಡ್ ದಾಳಿ ನಡೆಸಲಾಗಿದ್ದು, ಕೆಲ ನಾಯಿಗಳ ಬಾಯಿಗೆ ಆ್ಯಸಿಡ್ ಹಾಕಿದ್ದರಿಂದ ಸಂಪೂರ್ಣ ಸುಟ್ಟುಹೋಗಿದೆ. ಹೀಗೆ ಜೀವನ್ಮರಣದ ನಡುವೆ ಹೊರಳಾಡುತ್ತಿದ್ದ ನಾಯಿಗಳನ್ನು ಸ್ಥಳೀಯರು ಪಶು ಆಸ್ಪ್ರತೆಗೆ ದಾಖಲಿಸಿದರೂ ಪ್ರಯೋಜನವಾಗಿಲ್ಲ.

ಇನ್ನು ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶಗಳು ವ್ಯಕ್ತವಾಗಿದ್ದವು. ಇದರ ಬೆನ್ನಲ್ಲೇ ಪ್ರಕರಣ ದಾಖಲಿಸಿರುವ ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಸುತ್ತ ಮುತ್ತಲಿನ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿರುವುದಾಗಿ ನಾಗಜಿರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಲಿವಾನ್ ಕುಜೂರ್ ತಿಳಿಸಿದ್ದಾರೆ. ಅಲ್ಲದೆ ಖಂಡಿತವಾಗಿಯೂ ಆರೋಪಿಯನ್ನು ಬಂಧಿಸುವುದಾಗಿ ಪೊಲೀಸರು ಪೀಪಲ್ ಫಾರ್ ಅನಿಮಲ್ಸ್ ಸಂಸ್ಥೆಗೆ ಭರವಸೆ ನೀಡಿದ್ದಾರೆ. ಒಟ್ಟಿನಲ್ಲಿ ಮೂಕ ಪ್ರಾಣಿಗಳ ಮೇಲಿನ ಅನುಮಾಷ ಕೃತ್ಯದ ಬಗ್ಗೆ ಎಲ್ಲೆಡೆಯಿಂದಲೂ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ದುಷ್ಕರ್ಮಿಗಳಿಗೆ ಸರಿಯಾದ ಶಿಕ್ಷೆಯಾಗಬೇಕೆಂದು ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ: T20 World Cup 2021: ನಮಗಲ್ಲ, ಭಾರತಕ್ಕೆ ಟೆನ್ಶನ್ ಜಾಸ್ತಿ ಎಂದ ಪಾಕ್ ನಾಯಕ

ಇದನ್ನೂ ಓದಿ: ಮೊಬೈಲ್ ಬಳಕೆದಾರರ ಗಮನಕ್ಕೆ: ಇನ್ಮುಂದೆ ಈ ಫೋನ್​ಗಳಲ್ಲಿ ವಾಟ್ಸ್​ಆ್ಯಪ್ ಕಾರ್ಯ ನಿರ್ವಹಿಸುವುದಿಲ್ಲ

ಇದನ್ನೂ ಓದಿ: KBC 13: ಧೋನಿ ಕುರಿತಾದ ಪ್ರಶ್ನೆಗೆ ತಬ್ಬಿಬ್ಬಾದ ಗಂಗೂಲಿ, ಸೆಹ್ವಾಗ್..!

(Ujjain police case file against unknown person in case of 5 dogs death by acid)

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?