AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಚ್ಚನಕೆರೆ ಏರಿ ಮೇಲೆ ಚಲಿಸುತ್ತಿದ್ದ ಶಾಲಾ ಬಸ್ಸಿನಿಂದ ಚಕ್ರದಡಿಗೆ ಬಿದ್ದು ಯುಕೆಜಿ ವಿದ್ಯಾರ್ಥಿನಿ ಸಾವು

ವಿದ್ಯಾರ್ಥಿನಿ ರಕ್ಷಿತಾ ಬಸ್​​ ಬಾಗಿಲ ಬಳಿಯ ಸೀಟ್​​ನಲ್ಲಿ ಕುಳಿತಿದ್ದಳು. ಇತರೆ ವಿದ್ಯಾರ್ಥಿಗಳನ್ನು ಇಳಿಸಿ ಮುಂದೆ ಸಾಗಬೇಕಾದರೆ ಶಾಲಾ ಸಿಬ್ಬಂದಿ ಬಸ್ ನ ಬಾಗಿಲು ಹಾಕಿರಲಿಲ್ಲ. ತಿರುವಿನಲ್ಲಿ ಬ್ರೇಕ್ ಹಾಕಿದ ಸಂದರ್ಭದಲ್ಲಿ ಸೀಟಿನ ಮೇಲೆ ಕುಳಿತಿದ್ದ ವಿದ್ಯಾರ್ಥಿನಿ ಕೆಳಗಿ ಬಿದ್ದಿದ್ದಾಳೆ.

ಪಿಚ್ಚನಕೆರೆ ಏರಿ ಮೇಲೆ ಚಲಿಸುತ್ತಿದ್ದ ಶಾಲಾ ಬಸ್ಸಿನಿಂದ ಚಕ್ರದಡಿಗೆ ಬಿದ್ದು ಯುಕೆಜಿ ವಿದ್ಯಾರ್ಥಿನಿ ಸಾವು
ರಕ್ಷಿತಾ
TV9 Web
| Edited By: |

Updated on:Jan 10, 2023 | 10:39 AM

Share

ರಾಮನಗರ: ಶಾಲಾ ಬಸ್(School Bus)​​ ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿನಿ ರಕ್ಷಿತಾ(6) ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ‌ತಾಲೂಕಿನ ಪಿಚ್ಚನಕೆರೆ ಬಳಿ ನಡೆದಿದೆ. ಚಾಲಕ ಮತ್ತು ಸಿಬ್ಬಂದಿ ನಿರ್ಲಕ್ಷ್ಯದಿಂದ ಶಾಲಾ ಬಸ್​ನಿಂದ ವಿದ್ಯಾರ್ಥಿನಿ ಕೆಳಗೆ ಬಿದ್ದಿದ್ದು ನಂತರ ಶಾಲಾ ಬಸ್ ನ ಚಕ್ರದಡಿ ಸಿಲುಕಿ ಮೃತಪಟ್ಟಿದ್ದಾಳೆ(Student Death).

ಸಿದ್ದೇನಹಳ್ಳಿ ಗ್ರಾಮದ ನಿವಾಸಿ ಸ್ವಾಮಿ ಎಂಬುವವರ ಪುತ್ರಿ ರಕ್ಷಿತಾ ಶ್ರೀಸಾಯಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಯುಕೆಜಿ ಓದುತ್ತಿದ್ದಳು. ನಿನ್ನೆ ಶಾಲೆ ಮುಗಿಸಿ ಶಾಲಾ ಬಸ್​​​ನಲ್ಲಿ ಬರುವ ವೇಳೆ ಘಟನೆ ನಡೆದಿದೆ. ವಿದ್ಯಾರ್ಥಿನಿ ರಕ್ಷಿತಾ ಬಸ್​​ ಬಾಗಿಲ ಬಳಿಯ ಸೀಟ್​​ನಲ್ಲಿ ಕುಳಿತಿದ್ದಳು. ಇತರೆ ವಿದ್ಯಾರ್ಥಿಗಳನ್ನು ಇಳಿಸಿ ಮುಂದೆ ಸಾಗಬೇಕಾದರೆ ಶಾಲಾ ಸಿಬ್ಬಂದಿ ಬಸ್ ನ ಬಾಗಿಲು ಹಾಕಿರಲಿಲ್ಲ. ಚಾಲಕ ತಿರುವಿನಲ್ಲಿ ಬ್ರೇಕ್ ಹಾಕಿದ ಸಂದರ್ಭದಲ್ಲಿ ಸೀಟಿನ ಮೇಲೆ ಕುಳಿತಿದ್ದ ವಿದ್ಯಾರ್ಥಿನಿ ಕೆಳಗಿ ಬಿದ್ದಿದ್ದಾಳೆ. ಬಿದ್ದಾಗ ಬಸ್ ಹಿಂದಿನ ಚಕ್ರ ತಲೆಯ ಮೇಲೆ ಹತ್ತಿದೆ. ಘಟನೆ ನಂತರ ಚಾಲಕ ಹಾಗೂ ಅಯಾ ಪರಾರಿಯಾಗಿದ್ದಾರೆ. ಕನಕಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರಿಂದ ಪುಟ್ಟ ಮಕ್ಕಳಿಗೆ ಶಾಲಾ ವಾಹನ ಎಷ್ಟು ಸೇಫ್ ಎಂಬ ಆತಂಕ ಪೋಷಕರಲ್ಲಿ ಕಾಡುತ್ತಿದೆ.

ಇದನ್ನೂ ಓದಿ: ಸಾಗರ ಬಜರಂಗದಳ ಕಾರ್ಯಕರ್ತ ಸುನೀಲ್ ಹತ್ಯೆಗೆ ಯತ್ನಿಸಿದ ಆರೋಪಿ ಸಮೀರ್ ಪೊಲೀಸ್​​ ವಶಕ್ಕೆ ​

ಲಕ್ಷಾಂತರ ರೂ ನಗದು, ಕೆಜಿಗಟ್ಟಲೆ ಚಿನ್ನ ಎಗರಿಸಿದ ಕಿರಾತಕ

ಆಗುಂತಕನೊಬ್ಬ ವಾಣಿಜ್ಯ ನಗರಿಯನ್ನ ಬೆಚ್ಚಿಬೀಳುವಂತೆ ಮಾಡಿದ್ದಾನೆ. ಕಳೆದ ಹತ್ತು ದಿನಗಳಿಂದ ಸರಣಿ ಕಳ್ಳತನ ನಡೆಸಿದ ಖದೀಮ ಲಕ್ಷಾಂತರ ರೂಪಾಯಿ ನಗದು ಕೆಜಿಗಟ್ಟಲೆ ಬಂಗಾರ ಎಗರಿಸಿದ್ದಾನೆ. ಹತ್ತಾರು ಮನೆಗಳಿಗೆ ಕನ್ನ ಹಾಕಿ ಪರಾರಿ ಆಗುತ್ತಿದ್ದಾನೆ. ರಾತ್ರಿ ಆಗುತ್ತಿದ್ದಂತೆ ಫೀಲ್ಡ್ ಗೆ ಇಳಿದು ರಾಬರಿ ಮಾಡುತ್ತಿದ್ದಾನೆ. ಈ ಖದೀಮನಿಂದ ಹುಬ್ಬಳ್ಳಿ ಜನರ ನಿದ್ದೆಗೆಟ್ಟಿದೆ.

ಈ ಖದೀಮನ ವಿರುದ್ಧ ವಿದ್ಯಾನಗರ, ಅಶೋಕ ನಗರ ಮತ್ತು ಕೇಶ್ವಾಪೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹುಬ್ಬಳ್ಳಿಯ ಮೂರು ಪೊಲೀಸ್ ಠಾಣೆಯ ಪೊಲೀಸರು ನಿರಂತರ ಶೋಧ ನಡೆಸುತ್ತಿದ್ದಾರೆ. ಹುಬ್ಬಳ್ಳಿಯ ಪೊಲೀಸರಿಗೆ ಈ ಚಾಣಾಕ್ಷ ಕಳ್ಳನ ಬಂಧನ ಸವಾಲಾಗಿದೆ. ಮಾಸ್ಕ್ ಧರಿಸಿ ಜರ್ಕಿನ್ ಧರಿಸಿ ಕೈಯಲ್ಲಿ ಬ್ಯಾಗ್ ಹಿಡಿದು ಸಿಸಿ ಕ್ಯಾಮೆರಾ ಕಣ್ತಪ್ಪಿಸಿ ಓಡಾಡುವ ಈ ಆಗಂತುಕನ ದೃಶ್ಯಗಳು ಸೆರೆಯಾಗಿವೆ. ಹೆಚ್ಚಾಗಿ ಅಪಾರ್ಟ್ಮೆಂಟ್​ಗಳನ್ನೆ ಟಾರ್ಗೆಟ್ ಮಾಡಿ ದೋಚುತ್ತಿದ್ದಾನೆ. ಮನೆಗೆ ಬೀಗ ಹಾಕಿ, ಊರಿಗೆ ಹೋದವರ ಮನೆಯನ್ನೇ ಗುರಿಯಾಗಿಸಿ ದರೋಡೆ ಮಾಡುತ್ತಿದ್ದಾನೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:33 am, Tue, 10 January 23

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್