AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಉಡುಪಿ ಸಬ್​ಜೈಲಿನಲ್ಲಿ ವಿಚಾರಣಾಧೀನ ಕೈದಿ ನೇಣುಬಿಗಿದುಕೊಂಡು ಆತ್ಮಹತ್ಯೆ

ವಿಚಾರಣಾಧೀನ ಕೈದಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಸಬ್​ಜೈಲಿನಲ್ಲಿ ನಡೆದಿದೆ.

Crime News: ಉಡುಪಿ ಸಬ್​ಜೈಲಿನಲ್ಲಿ ವಿಚಾರಣಾಧೀನ ಕೈದಿ ನೇಣುಬಿಗಿದುಕೊಂಡು ಆತ್ಮಹತ್ಯೆ
ವಿಚಾರಣಾಧೀನ ಕೈದಿ ಸದಾನಂದ ಸೇರಿಗಾರ್
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Dec 11, 2022 | 2:49 PM

Share

ಉಡುಪಿ: ವಿಚಾರಣಾಧೀನ ಕೈದಿ ನೇಣುಬಿಗಿದುಕೊಂಡು ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಸಬ್​ಜೈಲಿನಲ್ಲಿ ನಡೆದಿದೆ. ಕಾರ್ಕಳ ಮೂಲದ ಸದಾನಂದ ಸೇರಿಗಾರ್ ಆತ್ಮಹತ್ಯೆ ಮಾಡಿಕೊಂಡ ವಿಚಾರಣಾಧೀನ ಕೈದಿ. ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಸದಾನಂದ ಸೇರಿಗಾರ್, ಬೆಳಗ್ಗೆ 5 ಗಂಟೆಗೆ 20 ಕೈದಿಗಳಿದ್ದ ಕೊಠಡಿಯಲ್ಲಿ ಪಂಚೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಸಹ ಕೈದಿಗಳು ಗಮನಿಸಿ ನೇಣಿನ ಕುಣಿಕೆಯಿಂದ ಬಿಡಿಸಿದ್ದರು. ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲಿ ಕೈದಿ ಕೊನೆಯುಸಿರೆಳೆದಿದ್ದಾರೆ. ಕುರುಪ್ ಸಿನಿಮಾ ಮಾದರಿಯಲ್ಲಿ ಕೊಲೆ ಮಾಡಿ ಗಮನಸೆಳೆದಿದ್ದ ಪ್ರಕರಣದ ಪ್ರಮುಖ ಆರೋಪಿ ಸದಾನಂದ ಸೆರೆಗಾರ್. ಸುಟ್ಟ ಕಾರಿನಲ್ಲಿ ತಾನೇ ಸತ್ತಿರುವುದಾಗಿ ಬಿಂಬಿಸಲು ಹೊರಟು ಆರೋಪಿ ಬಂಧಿಯಾಗಿದ್ದ. ಉಡುಪಿ ಜಿಲ್ಲೆಯ ಗಡಿ ಭಾಗವಾದ ಶಿರೂರು ಒತ್ತಿನೆಣೆ ಹೇನ್ಬೇರ್​ನಲ್ಲಿ ಪ್ರಕರಣ ನಡೆದಿತ್ತು.

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಧಾರವಾಡ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಬಸವರಾಜ ಸುಳ್ಳದ (35) ಆತ್ಮಹತ್ಯೆ ಮಾಡಿಕೊಂಡ ರೈತ. ಮನೆಯಲ್ಲಿ ನೇಣುಬಿಗಿದುಕೊಂಡ ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ. ವಿವಿಧ ಬ್ಯಾಂಕ್‌ಗಳಲ್ಲಿ ಮೃತ ಬಸವರಾಜ 3 ಲಕ್ಷ ರೂ. ಸಾಲ ಮಾಡಿದ್ದ ಎನ್ನಲಾಗುತ್ತಿದೆ. ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ ಹೊಯ್ಸಳ ಪೊಲೀಸರ ವಿರುದ್ಧ ಸುಲಿಗೆ ಆರೋಪ: ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು

ಕಲಬುರ್ಗಿ: ಮಾರಕಾಸ್ತ್ರಗಳಿಂದ ದಾಳಿ ಮಾಡಿ ಯುವಕನ ಕೊಲೆ

ಮಾರಕಾಸ್ತ್ರಗಳಿಂದ ದಾಳಿ ಮಾಡಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರ್ಗಿ ತಾಲ್ಲೂಕಿನ ಮಾಲಗತ್ತಿ ಗ್ರಾಮದ ಬಳಿ ನಡೆದಿದೆ. ಫೈನಾನ್ಸ್​ ಲೋನ್​ ರಿಕವರಿ ಏಜೆಂಟ್ ಸಚಿನ್ ಅಂಬಲಗಿ (25) ಕೊಲೆಯಾದ ಯುವಕ. ಶನಿವಾರ (ಡಿ 10) ರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನನ್ನು ಕೊಲೆ ಮಾಡಲಾಗಿದೆ. ಕಲಬುರ್ಗಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೋಯಾಬಿನ್ ಬಣವೆಗೆ ಬೆಂಕಿ

ಆಳಂದ ತಾಲ್ಲೂಕಿನ ಸಾಲೆಗಾಂವ ಗ್ರಾಮದಲ್ಲಿ ಸೋಯಾಬಿನ್​ ಬಣವೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ರೈತ ಮಹಿಳೆ ಜಯಶ್ರೀ ಕುಪನೂರೆ ಎಂಬುವರಿಗೆ ಸೇರಿದ ಅಪಾರ ಮೌಲ್ಯದ ಸೋಯಾಬಿನ್ ಬಣವೆ ಬೆಂಕಿಗಾಹುತಿಯಾಗಿದೆ. ಸಾವಿರಾರು ರೂಪಾಯಿ ನಷ್ಟವಾಗಿದೆ. ಕಿಡಿಗೇಡಿಗಳ ಕೃತ್ಯಕ್ಕೆ ರೈತ ಕುಟುಂಬ ಕಂಗಾಲಾಗಿದೆ.

ಇದನ್ನೂ ಓದಿ: ಮಂಗಳೂರು: ಸುಲ್ತಾನ್​ ಜ್ಯುವೆಲರಿ ಶಾಪ್​ನಲ್ಲಿ ನೈತಿಕ ಪೊಲೀಸ್​ಗಿರಿ ನಡೆಸಿದ ಬಜರಂಗದಳದ ನಾಲ್ವರು ಕಾರ್ಯಕರ್ತರ ಬಂಧನ

ಇಂದಿರಾನಗರ ಕ್ಯಾಸಿನೊ ಮೇಲೆ ಸಿಸಿಬಿ ದಾಳಿ

ಇಂದಿರಾನಗರದಲ್ಲಿ ಇನ್ನೂ ನಿರ್ಮಾಣ ಹಂತದಲ್ಲಿರುವ ಕ್ಯಾಸಿನೊ ಮೇಲೆ‌ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಇನ್ನೂ ನಿರ್ಮಾಣ ಹಂತದಲ್ಲಿರುವ ಕ್ಯಾಸಿನೊ ಅದಾಗಲೇ ಜೂಜುಕೋರರ ಅಡ್ಡೆಯಾಗಿತ್ತು. ಗೋಲ್ಡನ್ ಚಿಪ್ಸ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಅಸೋಸಿಯೇಷನ್ ಹೆಸರಲ್ಲಿ ಪರವಾನಗಿ ಪಡೆದು ಅಕ್ರಮವಾಗಿ ಕ್ಯಾಸಿನೊ ನಡೆಸಲಾಗುತ್ತಿತ್ತು. ಪ್ರತಿ ಟೇಬಲ್ ಮೇಲೆಯೂ ಸಿಸಿಟಿವಿ ಕಣ್ಗಾವಲು ಇರಿಸಲಾಗಿದ್ದು, 20ಕ್ಕೂ ಹೆಚ್ಚು ಜನರ ವಿಚಾರಣೆ ನಡೆಸಲಾಗುತ್ತಿದೆ.

ಜಗಳೂರು: ಬಕೆಟ್​ಗೆ ಬಿದ್ದು 10 ತಿಂಗಳ ಮಗು ಸಾವು

ದಾವಣಗೆರೆ: ನೀರು ತುಂಬಿದ್ದ ಬಕೆಟ್​ಗೆ ಬಿದ್ದು 10 ತಿಂಗಳ ಮಗು ಮೃತಪಟ್ಟಿರುವ ಘಟನೆ ಜಗಳೂರು ತಾಲ್ಲೂಕಿನ ಬಿಸ್ತುವಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್​​, ತಾರಾ ದಂಪತಿ ಪುತ್ರಿ ಅನುಶ್ರಾವ್ಯ ಮೃತ ಬಾಲಕಿ. ಮನೆ ಬಳಿ ಆಟವಾಡುತ್ತಿದ್ದಾಗ ಮಗು ಬಕೆಟ್​ಗೆ ಮುಗುಚಿದೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಿಲ್ಲ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 2:42 pm, Sun, 11 December 22

ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ