AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪತ್ ​ರಾಜ್​ಗೆ ನಾಳೆ ಕೈದಿ ನಂಬರ್ ಅಲಾಟ್​ ಆಗಲಿದೆ

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಗಲಭೆ, ದೊಂಬಿ ಮತ್ತು ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಕಿಚ್ಚು ಹಚ್ಚಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬೆಂಗಳೂರಿನ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರೀಯ ಜೈಲಿಗೆ ಸ್ಥಳಾಂತರಿಸಲಾಗಿದ್ದು, ನಾಳೆ ಅವರಿಗೆ ವಿಚಾರಣಾಧೀನ ಕೈದಿ ನಂಬರ್ ಸಿಗಲಿದೆಯೆಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರಕರಣದಲ್ಲಿ ತಮ್ಮ ಹೆಸರು ತೇಲಿ ಬಂದ ನಂತರ ನಾನಾ ಕಾರಣಗಳನ್ನು ನೀಡಿ ಪೊಲೀಸರ ವಿಚಾರಣೆಯನ್ನು ತಪ್ಪಿಸಿಕೊಳ್ಳುತ್ತಿದ್ದ ಸಂಪತ್​ ರಾಜ್ ಕೊನೆಗೆ, ಕೊವಿಡ್-19 ಸೋಂಕು […]

ಸಂಪತ್ ​ರಾಜ್​ಗೆ ನಾಳೆ ಕೈದಿ ನಂಬರ್ ಅಲಾಟ್​ ಆಗಲಿದೆ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ| Edited By: ಸಾಧು ಶ್ರೀನಾಥ್​|

Updated on:Nov 24, 2020 | 1:13 PM

Share

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಗಲಭೆ, ದೊಂಬಿ ಮತ್ತು ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಕಿಚ್ಚು ಹಚ್ಚಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬೆಂಗಳೂರಿನ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರೀಯ ಜೈಲಿಗೆ ಸ್ಥಳಾಂತರಿಸಲಾಗಿದ್ದು, ನಾಳೆ ಅವರಿಗೆ ವಿಚಾರಣಾಧೀನ ಕೈದಿ ನಂಬರ್ ಸಿಗಲಿದೆಯೆಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಕರಣದಲ್ಲಿ ತಮ್ಮ ಹೆಸರು ತೇಲಿ ಬಂದ ನಂತರ ನಾನಾ ಕಾರಣಗಳನ್ನು ನೀಡಿ ಪೊಲೀಸರ ವಿಚಾರಣೆಯನ್ನು ತಪ್ಪಿಸಿಕೊಳ್ಳುತ್ತಿದ್ದ ಸಂಪತ್​ ರಾಜ್ ಕೊನೆಗೆ, ಕೊವಿಡ್-19 ಸೋಂಕು ತಗುಲಿಸಿಕೋಡಿರುವ ನೆಪ ಹೇಳಿ ಬೆಂಗಳೂರಿನ ಪ್ರಮುಖ ಆಸ್ಪತ್ರೆಯೋದರಲ್ಲಿ ದಾಖಲಾಗಿದ್ದರು. ಆದರೆ, ಪೊಲೀಸರ ಗಮನಕ್ಕೆ ಬಾರದಂತೆ ಅಲ್ಲಿಂದ ತಪ್ಪಿಸಿಕೊಂಡಿದ್ದರು.

ಆದರೆ, ಅವರ ಆಪ್ತನೊಬ್ಬನನ್ನು ಬಂಧಿಸಿದ ಪೊಲೀಸರು ಕಾಂಗ್ರೆಸ್ ಧುರೀಣನ ಪತ್ತೆ ಹಚ್ಚಿ ನವೆಂಬರ್ 17ರಂದು ಬಂಧಿಸುವಲ್ಲಿ ಸಫಲರಾಗಿದ್ದರು. ನ್ಯಾಯಾಲಯ ಅವರನ್ನು 14 ದಿನಗಳ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಿದೆ.

ಸಂಪತ್​ ರಾಜ್​ರನ್ನು ಇಂದು ಜೈಲಿಗೆ ಕರೆತರುವಷ್ಟರಲ್ಲಿ ಜೈಲಿನ ಅಧಿಕಾರಿಗಳು ತಮ್ಮ ಡ್ಯೂಟಿ ಮುಗಿಸಿಕೊಂಡು ಮನೆಗಳಿಗೆ ತೆರಳಿದ್ದರಿಂದ ಕೈದಿ ಸಂಖ್ಯೆಯನ್ನು ನೀಡಲಾಗಲಿಲ್ಲ. ಶನಿವಾರದಂದು ಬೆಳಗ್ಗೆ ಅದು ಅವರಿಗೆ ಸಿಗಲಿದೆಯೆಂದು ಪೊಲೀಸ್ ಮೂಲಗಳು ತಿಳಿಸಿವೆ.

Published On - 10:06 pm, Fri, 20 November 20

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ