ಕಣ್ಮರೆಯಾಗಿದ್ದ ರವಿ ಪೂಜಾರಿಯ ಸಹಚರ ಉತ್ತರ ಪ್ರದೇಶದಲ್ಲಿ ಸಿಕ್ಕ!

ಕುಖ್ಯಾತ ಭೂಗತ ದೊರೆ ರವಿ ಪೂಜಾರಿಯ ಸಹಚರ ಇಖ್ಲಾಕ್ ಖುರೇಶಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 2007ರಲ್ಲಿ ಜೈಲಿನಿಂದ ಬಿಡುಗಡೆಯಾದ ನಂತರ ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಖುರೇಶಿಯನ್ನು ಕಳೆದ ರಾತ್ರಿ ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ. ಸಿ ಸಿ ಬಿ ಮೂಲಗಳ ಪ್ರಕಾರ, ರವಿ ಪೂಜಾರಿ ಅಣತಿಯ ಮೇರೆಗೆ ನಡೆದ ಬೆಂಗಳೂರಿನ ಶಬ್​ನಮ್ ಡೆವಲಪರ್ ಶೂಟ್ಔಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖುರೇಶಿ ಪೊಲೀಸರಿಗೆ ಬೇಕಾಗಿದ್ದ. ಕೊಲೆಗೆ ಬಳಸಿದ ಆಯುಧವನ್ನು ಖುರೇಶಿಯೇ ಸರಬರಾಜು ಮಾಡಿದ್ದನೆನ್ನಲಾಗಿದೆ. ಉತ್ತರ ಪ್ರದೇಶ ಮೂಲದ ಖುರೇಶಿಯನ್ನು ಪೊಲೀಸರು 2007ರಲ್ಲೇ ಬಂಧಿಸಿದ್ದರೂ […]

ಕಣ್ಮರೆಯಾಗಿದ್ದ ರವಿ ಪೂಜಾರಿಯ ಸಹಚರ ಉತ್ತರ ಪ್ರದೇಶದಲ್ಲಿ ಸಿಕ್ಕ!
ಅರುಣ್​ ಕುಮಾರ್​ ಬೆಳ್ಳಿ

Updated on: Aug 07, 2020 | 2:13 PM

ಕುಖ್ಯಾತ ಭೂಗತ ದೊರೆ ರವಿ ಪೂಜಾರಿಯ ಸಹಚರ ಇಖ್ಲಾಕ್ ಖುರೇಶಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 2007ರಲ್ಲಿ ಜೈಲಿನಿಂದ ಬಿಡುಗಡೆಯಾದ ನಂತರ ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಖುರೇಶಿಯನ್ನು ಕಳೆದ ರಾತ್ರಿ ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ.

ಸಿ ಸಿ ಬಿ ಮೂಲಗಳ ಪ್ರಕಾರ, ರವಿ ಪೂಜಾರಿ ಅಣತಿಯ ಮೇರೆಗೆ ನಡೆದ ಬೆಂಗಳೂರಿನ ಶಬ್​ನಮ್ ಡೆವಲಪರ್ ಶೂಟ್ಔಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖುರೇಶಿ ಪೊಲೀಸರಿಗೆ ಬೇಕಾಗಿದ್ದ. ಕೊಲೆಗೆ ಬಳಸಿದ ಆಯುಧವನ್ನು ಖುರೇಶಿಯೇ ಸರಬರಾಜು ಮಾಡಿದ್ದನೆನ್ನಲಾಗಿದೆ.

ಉತ್ತರ ಪ್ರದೇಶ ಮೂಲದ ಖುರೇಶಿಯನ್ನು ಪೊಲೀಸರು 2007ರಲ್ಲೇ ಬಂಧಿಸಿದ್ದರೂ ಅವನು ಜಾಮೀನು ಪಡೆದು ನಗರದಿಂದ ಕಣ್ಮರೆಯಾಗಿದ್ದ. ಅವನನ್ನುಈಗ ಸೆರೆಹಿಡಿದು ಬೆಂಗಳೂರಿಗೆ ಕರೆತಂದಿರುವ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us