Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನ ಬೀಚ್ ಬಳಿ 7 ತುಂಡುಗಳಾಗಿ ವ್ಯಕ್ತಿಯ ದೇಹ ಕತ್ತರಿಸಿ ಪ್ಲಾಸ್ಟಿಕ್ ಬಾಕ್ಸ್‌ನಲ್ಲಿ ಎಸೆದ ಹಂತಕರು

ಮಹಾರಾಷ್ಟ್ರದ ಮುಂಬೈನ ಗೊರೈ ಬೀಚ್‌ಗೆ ಹೋಗುವ ಪಕ್ಕದ ರಸ್ತೆಯಲ್ಲಿ 25ರಿಂದ 40 ವರ್ಷ ವಯಸ್ಸಿನ ವ್ಯಕ್ತಿಯ ಛಿದ್ರಗೊಂಡ ದೇಹವು ಪ್ಲಾಸ್ಟಿಕ್ ಬಾಕ್ಸ್‌ಗಳಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಅದನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಮುಂಬೈನ ಬೀಚ್ ಬಳಿ 7 ತುಂಡುಗಳಾಗಿ ವ್ಯಕ್ತಿಯ ದೇಹ ಕತ್ತರಿಸಿ ಪ್ಲಾಸ್ಟಿಕ್ ಬಾಕ್ಸ್‌ನಲ್ಲಿ ಎಸೆದ ಹಂತಕರು
ಸಾಂದರ್ಭಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on: Nov 11, 2024 | 8:28 PM

ಮುಂಬೈ: ಮಹಾರಾಷ್ಟ್ರದ ಮುಂಬೈನ ಗೊರೈ ಬೀಚ್‌ಗೆ ಹೋಗುವ ರಸ್ತೆಯಲ್ಲಿ 25ರಿಂದ 40 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರ ಛಿದ್ರಗೊಂಡ ದೇಹದ 7 ತುಂಡುಗಳು ಪ್ಲಾಸ್ಟಿಕ್ ಬಾಕ್ಸ್​ಗಳಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹದ ಭಾಗಗಳನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಅದನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಪೊಲೀಸರ ಪ್ರಕಾರ, ಭಾನುವಾರದಂದು ಬೊರಿವಲಿ ಪಶ್ಚಿಮದ ಬಾಬರ್ ಪಾಡಾ, ಪಿಕ್ಸಿ ಹೋಟೆಲ್ ಬಳಿ ಪುರುಷನ ಶವ ಪತ್ತೆಯಾಗಿದೆ. ದೇಹವನ್ನು ಏಳು ಭಾಗಗಳಾಗಿ ಕತ್ತರಿಸಿ ನಾಲ್ಕು ಪ್ಲಾಸ್ಟಿಕ್ ಬಾಕ್ಸ್ ಗಳಲ್ಲಿ ಪ್ಯಾಕ್ ಮಾಡಲಾಗಿತ್ತು. ಮೃತರು 25 ರಿಂದ 40 ವರ್ಷ ವಯಸ್ಸಿನವರಾಗಿದ್ದು, ಕಡು ನೀಲಿ ಬಣ್ಣದ ಜೀನ್ಸ್ ಮತ್ತು ಕಪ್ಪು ಬೂಟುಗಳನ್ನು ಧರಿಸಿದ್ದರು. ಅವರ ಬಲಗೈಯಲ್ಲಿ ಹಚ್ಚೆ ಹಾಕಿಸಿಕೊಂಡಿದ್ದರು.

ಇದನ್ನೂ ಓದಿ: ಮಣಿಪುರ ಹಿಂಸಾಚಾರ, 48 ಗಂಟೆಗಳಲ್ಲಿ ಇಬ್ಬರು ಮಹಿಳೆಯರ ಹತ್ಯೆ

ಮೀರಾ ರಸ್ತೆಯ ನಿವಾಸಿ ಸಂತೋಷ್ ಶಿಂಧೆ ಎಂಬುವವರು ಘಟನೆಯ ಬಗ್ಗೆ ತಿಳಿದು ಗೊರೈ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗೊರೈ ಪೊಲೀಸರು ಬಾಬರ್‌ಪದ ಪ್ರದೇಶದ ಶೆಫಾಲಿ ಗ್ರಾಮದಿಂದ ಮೃತದೇಹವನ್ನು ವಶಪಡಿಸಿಕೊಂಡಿದ್ದಾರೆ. ಪ್ರಸ್ತುತ ಫೋರೆನ್ಸಿಕ್ ತಂಡವು ಪ್ರಕರಣದ ತನಿಖೆ ನಡೆಸುತ್ತಿದ್ದು, ಘಟನಾ ಸ್ಥಳದ ಸುತ್ತಮುತ್ತಲ ಪ್ರದೇಶದಲ್ಲಿ ವಿಚಾರಣೆ ನಡೆಯುತ್ತಿದೆ. ಪತ್ತೆಯಾಗಿರುವ ಮೃತದೇಹ ಇನ್ನೂ ಅಪರಿಚಿತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗೊರೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಯುವಕನ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹತ್ಯೆಗೆ ಕಾರಣವಾಯ್ತಾ ವಿಧವೆಯೊಂದಿಗಿನ ಲವ್​?

ಈ ಬಗ್ಗೆ ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದ್ದು, ಮೃತದೇಹವನ್ನು ಗುರುತಿಸಲು ಸಹಾಯ ಮಾಡಲು ಸಿಸಿಟಿವಿ ದೃಶ್ಯಗಳು ಮತ್ತು ಹತ್ತಿರದ ಪೊಲೀಸ್ ಠಾಣೆಗಳಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಭಗವತಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ