Sign In

By signing in or creating an account, you agree with Associated Broadcasting Company's Terms & Conditions and Privacy Policy.

Gauribidanur Crime: ಶುಕ್ರವಾರ ಮಧ್ಯ ರಾತ್ರಿ ಆತ ಯಾರದೋ ಮನೆಯ ಬಾಗಿಲು ಬಡಿದಿದ್ದೇಕೆ? ಸ್ಥಳೀಯರು ಆತನನ್ನು ಬಡಿದು ಕೊಂದಿದ್ದೇಕೆ? ಮೂವರು ಆರೆಸ್ಟ್

ಇನ್ನು ಹತ್ಯೆಗೀಡಾದ ಮಂಜುನಾಥ ಮಧ್ಯರಾತ್ರಿ ಮನೆಗಳ ಬಳಿ ಏಕೆ ಹೋದ? ಊಟ, ತಿಂಡಿ, ನೀರು ಹುಡುಕಿಕೊಂಡು ಹೋದನಾ? ಇಲ್ಲವೇ ಕಳ್ಳತನಕ್ಕೆಂದು ಮನೆ ಬಳಿ ಹೋದನಾ? ಇಲ್ಲ ಕುಡಿತದ ನಶೆ ಹೆಚ್ಚಾಗಿ ಮನೆ ಬಾಗಿಲು ತಟ್ಟಿದನಾ ಗೊತ್ತಿಲ್ಲ? ಆದರೆ ಮನೆಬಾಗಿಲು ತಟ್ಟಿದ ಕಾರಣ ನಿವಾಸಿ ಅಂಬರೀಶ ಅಕ್ಕಪಕ್ಕದ ಮನೆಗಳಿಗೆ ಫೋನ್ ಮಾಡಿ ತಿಳಿಸಿದ್ದಾನೆ.

Gauribidanur Crime: ಶುಕ್ರವಾರ ಮಧ್ಯ ರಾತ್ರಿ ಆತ ಯಾರದೋ ಮನೆಯ ಬಾಗಿಲು ಬಡಿದಿದ್ದೇಕೆ? ಸ್ಥಳೀಯರು ಆತನನ್ನು ಬಡಿದು ಕೊಂದಿದ್ದೇಕೆ? ಮೂವರು ಆರೆಸ್ಟ್
ಶುಕ್ರವಾರ ಮಧ್ಯರಾತ್ರಿ ಗೌರಿಬಿದನೂರಿನಲ್ಲಿ ಮನೆಗಳ ಬಾಗಿಲು ಬಡಿದು ಹತ್ಯೆಗೀಡಾದ ಬೆಂಗಳೂರಿನ ವ್ಯಕ್ತಿ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಸಾಧು ಶ್ರೀನಾಥ್​

Updated on: Dec 16, 2023 | 12:45 PM

ಚಿಕ್ಕಬಳ್ಳಾಪುರ, ಡಿಸೆಂಬರ್​ 16 : ಶುಕ್ರವಾರ ಮಧ್ಯ ರಾತ್ರಿ ಸುಮಾರು 2 ಗಂಟೆ ಸಮಯದಲ್ಲಿ ಮನೆಗಳ ಬಾಗಿಲು ಬಡಿಯುತ್ತಿದ್ದ ವ್ಯಕ್ತಿಯನ್ನು ಹಿಡಿದ ಅಕ್ಕಪಕ್ಕದ ನಿವಾಸಿಗಳು (neighbours) ಥಳಿಸಿದ ಕಾರಣ ಬಾಗಿಲು ಬಡೆದ ವ್ಯಕ್ತಿ ಮೃತಪಟ್ಟ (Murder) ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ, ಗೌರಿಬಿದನೂರು ಟೌನ್‍ನ ಕರೇಕಲ್ಲಹಳ್ಳಿಯ ಸ್ವಾಗತ್ ಬಡಾವಣೆಯಲ್ಲಿ (Gauribidanur Murder) ನಡೆದಿದೆ.

ಮಧ್ಯ ರಾತ್ರಿ ಬಾಗಿಲು ಬಡಿದಿದ್ದ ವ್ಯಕ್ತಿ ಯಾರು? ಮೂಲತಃ ಬೆಂಗಳೂರಿನ ಆರ್.ಟಿ.ನಗರದ ನಿವಾಸಿ ಮಂಜುನಾಥ್ ಎನ್ನುವವರು ಮದ್ಯವಸನಿಯಾಗಿದ್ದನಂತೆ. ಇದರಿಂದ ಪತ್ನಿ ಹಾಗೂ ಮಕ್ಕಳು ಕಳೆದ 7 ತಿಂಗಳ ಹಿಂದೆಯೇ ಮನೆಯಿಂದ ಆಚೆ ಹಾಕಿದ್ದರಂತೆ. ಮಂಜುನಾಥ ಗೌರಿಬಿದನೂರು ನಗರದಲ್ಲಿ ಕೂಲಿ-ನಾಲಿ ಮಾಡಿಕೊಂಡು ಮದ್ಯ ವ್ಯಸನಿಯಾಗಿದ್ದನಂತೆ. ರಾತ್ರಿ ಮೃತಪಟ್ಟ ವ್ಯಕ್ತಿಯೇ ಮಂಜುನಾಥ ಎಂಬುದು ದೃಢವಾಗಿದೆ.

ಅಸಲಿಗೆ ಆಗಿದ್ದೇನು ? ಇನ್ನು ಮಂಜುನಾಥ ಮಧ್ಯರಾತ್ರಿ ಜನವಸತಿ ಪ್ರದೇಶಗಳ ಮನೆಗಳ ಬಳಿ ಏಕೆ ಹೋದ? ಊಟ, ತಿಂಡಿ, ನೀರು ಹುಡುಕಿಕೊಂಡು ಹೋದನಾ…? ಇಲ್ಲವೇ ಕಳ್ಳತನಕ್ಕೆಂದು ಮನೆ ಬಳಿ ಹೋದನಾ…? ಇಲ್ಲ ಕುಡಿತದ ನಶೆ ಹೆಚ್ಚಾಗಿ ಮನೆ ಬಾಗಿಲು ತಟ್ಟಿದನಾ ಗೊತ್ತಿಲ್ಲ? ಆದರೆ ಮನೆಬಾಗಿಲು ತಟ್ಟಿದ ಕಾರಣ ನಿವಾಸಿ ಅಂಬರೀಶ ಅಕ್ಕಪಕ್ಕದ ಮನೆಗಳಿಗೆ ಫೋನ್ ಮಾಡಿ ತಿಳಿಸಿದ್ದಾನೆ.

Also Read: ಚಿಕ್ಕಬಳ್ಳಾಪುರ ಅಂಚೆ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಪರದಾಟ, ತಿಂಗಳುಗಳೇ ಕಳೆದರೂ ವಿತರಣೆಯಾಗದ ದಾಖಲೆಗಳು

ಆಗ ಅಕ್ಕಪಕ್ಕದ ಮನೆಯ ನಿವಾಸಿಗಳಾದ ಸುನಿಲ್, ಕೈಲಾಶ್ ಆಗಮಿಸಿ ಪ್ರಶ್ನಿಸಿದ್ದಾರೆ. ಸಮರ್ಪಕ ಉತ್ತರ ನೀಡದೇ ಅನುಮಾನಸ್ಪದವಾಗಿ ವರ್ತಿಸಿದ ಕಾರಣ ಮೂವರು ಕೈಗೆ ಸಿಕ್ಕ ಪೈಪ್, ದೊಣ್ಣೆಗಳಿಂದ ಮಂಜುನಾಥನಿಗೆ ಹೊಡೆದಿದ್ದಾರೆ. ಆಗ ಮಂಜುನಾಥ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಆಸ್ಪತ್ರೆಗೆ ಸೇರಿಸಿದರಾದರೂ ಮಂಜುನಾಥ ಬದುಕಲಿಲ್ಲ.

ಪೊಲೀಸರಿಂದ ಕೊಲೆ ಪ್ರಕರಣ ದಾಖಲು? ಇನ್ನು ಮಂಜುನಾಥನ ಸಂಬಂಧಿಗಳು ನೀಡಿದ ದೂರಿನ ಮೇರೆಗೆ ಗೌರಿಬಿದನೂರು ವೃತ್ತ ನಿರೀಕ್ಷಕರಾದ ಕೆ.ಪಿ. ಸತ್ಯನಾರಾಯಣ, ಗೌರಿಬಿದನೂರು ನಗರಠಾಣೆ ಪಿಎಸ್‍ಐ ಗೋಪಾಲ್ ಸೇರಿದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಂಬರೀಶ, ಸುನಿಲ್, ಕೈಲಾಶ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ. 3 ಜನ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

112ಗೆ ಕರೆ ಮಾಡಬಹುದಿತ್ತು: ಮಧ್ಯರಾತ್ರಿ ಬಂದು ಮನೆ ಬಾಗಿಲು ತಟ್ಟಿದ್ದ ವ್ಯಕ್ತಿ ಮಂಜುನಾಥನನ್ನು ಹೊಡೆದು ಕೊಲ್ಲುವುದರ ಬದಲು ಪೊಲೀಸ್ ತುರ್ತು ಸಹಾಯವಾಣಿ 112ಗೆ ಕರೆ ಮಾಡಿದ್ದರೆ ಕ್ಷಣಾರ್ಧದಲ್ಲಿ 112 ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆಯುತ್ತಿದ್ದರು. ಆದರೆ ಮನೆ ಬಳಿ ಅನ್ನ, ನೀರು, ಕೇಳಲೋ ಇಲ್ಲವೋ, ಕಳ್ಳತನಕ್ಕೆ ಬಂದಿದ್ದ ವ್ಯಕ್ತಿಯನ್ನು ಪೊಲೀಸರಿಗೆ ಹಿಡಿದುಕೊಡುವುದರ ಬದಲು ಹೊಡೆದು ಕೊಂದಿದ್ದಕ್ಕೆ 3 ಜನರ ಮೇಲೆ ಕೊಲೆ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್