ತಲೆ ಮೇಲೆ ಕಲ್ಲು ಎತ್ತಿಹಾಕಿ ಮೂವರ ಬರ್ಬರ ಕೊಲೆ.. ಯಾಕೆ, ಎಲ್ಲಿ?

ಚಿತ್ರದುರ್ಗ: ತಲೆ ಮೇಲೆ ಕಲ್ಲು ಎತ್ತಿಹಾಕಿ ಮೂವರ ಬರ್ಬರ ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದ ಬಳಿ ನಡೆದಿದೆ. ಮಾರೇಶ(50), ಯಲ್ಲೇಶ(30), ಸೀನಪ್ಪ(30) ಕೊಲೆಯಾದವರು. ಹಂದಿ‌ ಸಾಕಣೆ ಮಾಡಿಕೊಂಡಿದ್ದ ಮೂವರನ್ನು ದುಷ್ಕರ್ಮಿಗಳು ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ. ಹಂದಿ ಕಳ್ಳತನಕ್ಕೆ ಬಂದಿದ್ದ ಕಳ್ಳರಿಂದಲೇ ಈ ಕೃತ್ಯ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ನಾಯಕನಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ತಲೆ ಮೇಲೆ ಕಲ್ಲು ಎತ್ತಿಹಾಕಿ ಮೂವರ ಬರ್ಬರ ಕೊಲೆ.. ಯಾಕೆ, ಎಲ್ಲಿ?

Updated on: Aug 17, 2020 | 9:08 AM

ಚಿತ್ರದುರ್ಗ: ತಲೆ ಮೇಲೆ ಕಲ್ಲು ಎತ್ತಿಹಾಕಿ ಮೂವರ ಬರ್ಬರ ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದ ಬಳಿ ನಡೆದಿದೆ. ಮಾರೇಶ(50), ಯಲ್ಲೇಶ(30), ಸೀನಪ್ಪ(30) ಕೊಲೆಯಾದವರು.

ಹಂದಿ‌ ಸಾಕಣೆ ಮಾಡಿಕೊಂಡಿದ್ದ ಮೂವರನ್ನು ದುಷ್ಕರ್ಮಿಗಳು ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ. ಹಂದಿ ಕಳ್ಳತನಕ್ಕೆ ಬಂದಿದ್ದ ಕಳ್ಳರಿಂದಲೇ ಈ ಕೃತ್ಯ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ನಾಯಕನಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 9:05 am, Mon, 17 August 20