AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ದೌರ್ಜನ್ಯ ವಿರೋಧಿಸಿದ್ದಕ್ಕೆ ಚಲಿಸುತ್ತಿದ್ದ ರೈಲಿನೆದುರು ಬಾಲಕಿಯನ್ನು ಎಸೆದ ಯುವಕ, ಕೈ-ಕಾಲುಗಳು ಕಟ್

ಲೈಂಗಿಕ ದೌರ್ಜನ್ಯವನ್ನು ವಿರೋಧಿಸಿದಕ್ಕಾಗಿ ಯುವಕನೊಬ್ಬ 17 ವರ್ಷದ ಬಾಲಕಿಯನ್ನು ಚಲಿಸುತ್ತಿದ್ದ ರೈಲಿನ ಎದುರು ಎಸೆದಿದ್ದಾನೆ ಪರಿಣಾಮ ಆಕೆಯ ಕೈ ಕಾಲುಗಳು ಕತ್ತರಿಸಿ ಹೋಗಿದ್ದು ಸ್ಥಿತಿ ಚಿಂತಾಜನಕವಾಗಿದೆ. ಮಂಗಳವಾರ ಬರೇಲಿ ನಗರದ ಸಿಬಿ ಗಂಜ್ ಪ್ರದೇಶದಲ್ಲಿ ನಡೆದ ಈ ಘಟನೆಯಲ್ಲಿ ಬಾಲಕಿಗೆ ಮೂಳೆಗಳು ಮುರಿದಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, ನಿರ್ಲಕ್ಷ್ಯಕ್ಕಾಗಿ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ತಿಳಿಸಿದ್ದಾರೆ.

ಲೈಂಗಿಕ ದೌರ್ಜನ್ಯ ವಿರೋಧಿಸಿದ್ದಕ್ಕೆ ಚಲಿಸುತ್ತಿದ್ದ ರೈಲಿನೆದುರು ಬಾಲಕಿಯನ್ನು ಎಸೆದ ಯುವಕ, ಕೈ-ಕಾಲುಗಳು ಕಟ್
ರೈಲು-ಸಾಂದರ್ಭಿಕ ಚಿತ್ರImage Credit source: India Today
ನಯನಾ ರಾಜೀವ್
|

Updated on: Oct 12, 2023 | 12:30 PM

Share

ಲೈಂಗಿಕ ದೌರ್ಜನ್ಯವನ್ನು ವಿರೋಧಿಸಿದಕ್ಕಾಗಿ ಯುವಕನೊಬ್ಬ 17 ವರ್ಷದ ಬಾಲಕಿಯನ್ನು ಚಲಿಸುತ್ತಿದ್ದ ರೈಲಿನ ಎದುರು ಎಸೆದಿದ್ದಾನೆ ಪರಿಣಾಮ ಆಕೆಯ ಕೈ ಕಾಲುಗಳು ಕತ್ತರಿಸಿ ಹೋಗಿದ್ದು ಸ್ಥಿತಿ ಚಿಂತಾಜನಕವಾಗಿದೆ. ಬರೇಲಿ ನಗರದ ಸಿಬಿ ಗಂಜ್ ಪ್ರದೇಶದಲ್ಲಿ ನಡೆದ ಈ ಘಟನೆಯಲ್ಲಿ ಬಾಲಕಿಗೆ ಮೂಳೆಗಳು ಮುರಿದಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, ನಿರ್ಲಕ್ಷ್ಯಕ್ಕಾಗಿ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ತಿಳಿಸಿದ್ದಾರೆ.

ಬಾಲಕಿಯ ತಂದೆಯ ಪ್ರಕಾರ, ಮಂಗಳವಾರ ಸಂಜೆ 4.30 ರ ಸುಮಾರಿಗೆ ತನ್ನ ಮಗಳು ತನ್ನ ಕೋಚಿಂಗ್ ಸೆಂಟರ್‌ನಿಂದ ಹಿಂತಿರುಗುತ್ತಿದ್ದಾಗ, ಅವರ ಗ್ರಾಮದ ವಿಜಯ್ ಮೌರ್ಯ ಎಂಬಾತ ಅವಳನ್ನು ತಡೆದು ಅಸಭ್ಯವಾಗಿ ಮಾತನಾಡಿ ಕಿರುಕುಳ ನೀಡಿದ್ದಾನೆ. ಮೌರ್ಯ ತನ್ನ ಮಗಳನ್ನು ಹಿಂಬಾಲಿಸುತ್ತಿರುವುದನ್ನು ಮತ್ತೊಬ್ಬ ಯುವಕ ನೋಡಿದ್ದಾನೆ ಎಂದು ತಂದೆ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ವಿಜಯ್ ಮೌರ್ಯ ಮತ್ತು ಅವರ ತಂದೆ ಕೃಷ್ಣ ಪಾಲ್ ಅವರನ್ನು ಬಂಧಿಸಲಾಗಿದೆ ಎಂದು ಸಿಬಿ ಗಂಜ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಾಧೇಶ್ಯಾಮ್ ಹೇಳಿದ್ದಾರೆ. ಬಾಲಕಿ ತಪ್ಪಿಸಿಕೊಳ್ಳಲು ಖಾದೌ ಕಡೆಗೆ ಓಡಿದ್ದಾಳೆ ಮೌರ್ಯ ಆಕೆಯನ್ನು ಹಿಂಬಾಲಿಸಿ ರೈಲಿನೆದುರು ತಳ್ಳಿದ್ದಾನೆ ಆಗ ಆತನ ಕಾಲುಗಳು ಮತ್ತು ಒಂದು ಕೈ ತುಂಡಾಯಿತು.

ಮತ್ತಷ್ಟು ಓದಿ: ಹೊಲದಲ್ಲಿ ಪತ್ತೆಯಾಯ್ತು ಮಹಿಳೆ ಶವ; ಅನೈತಿಕ ಸಂಬಂಧ ಹೊಂದಿದ್ದವನೇ ಮಾಡಿದನಾ ಕೊಲೆ?

ಖಾದೌ ರೈಲ್ವೇ ಕ್ರಾಸಿಂಗ್ ಬಳಿ ರಕ್ತಸಿಕ್ತವಾಗಿ ಕೈಕಾಲುಗಳಿಲ್ಲದ ಸ್ಥಿತಿಯಲ್ಲಿ ಬಾಲಕಿ ಪತ್ತೆಯಾಗಿದ್ದು, ಕೂಡಲೇ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಶಸ್ತ್ರಚಿಕಿತ್ಸೆ ನಡೆಸಲಾಯಿತು. ಕಿರುಕುಳದ ವಿಷಯವನ್ನು ಮೌರ್ಯ ಅವರ ಕುಟುಂಬಕ್ಕೆ ತಿಳಿಸಿದ್ದೆ ಆದರೆ ಅದರಿಂದ ಏನೂ ಪ್ರಯೋಜನವಾಗಿಲ್ಲ ಎಂದು ಹೇಳಿದರು.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ವಿಷಯವನ್ನು ಮನಗಂಡು ಬಾಲಕಿಯ ಕುಟುಂಬಕ್ಕೆ 5 ಲಕ್ಷ ರೂಪಾಯಿ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಬಾಲಕಿಯ ಎರಡೂ ಕಾಲುಗಳು ಮೊಣಕಾಲಿನ ಕೆಳಗೆ ತುಂಡಾಗಿದ್ದು, ಆಕೆಯ ಒಂದು ಕೈಯೂ ತುಂಡಾಗಿದೆ. ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ