AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ಆಗ್ರಾದ ಖಾಸಗಿ ಆಸ್ಪತ್ರೆಗೆ ಬೆಂಕಿ, ಮೂವರು ಸಾವು

ಆಗ್ರಾ ಖಾಸಗಿ ಆಸ್ಪತ್ರೆಯ ಕಟ್ಟಡದಲ್ಲಿ ಬುಧವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡು ಮೂವರು ಸಾವನ್ನಪ್ಪಿದ್ದಾರೆ. ರಾಜ್ಯದ ರಾಜಧಾನಿ ಲಕ್ನೋದಿಂದ ಸುಮಾರು 330 ಕಿಮೀ ದೂರದಲ್ಲಿರುವ ನಗರದ ಶಾಹಗಂಜ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

Uttar Pradesh: ಆಗ್ರಾದ ಖಾಸಗಿ ಆಸ್ಪತ್ರೆಗೆ ಬೆಂಕಿ, ಮೂವರು ಸಾವು
Uttar Pradesh
TV9 Web
| Edited By: |

Updated on:Oct 05, 2022 | 12:39 PM

Share

ಲಕ್ನೋ: ರಾಜ್ಯದ ಆಗ್ರಾ ಖಾಸಗಿ ಆಸ್ಪತ್ರೆಯ ಕಟ್ಟಡದಲ್ಲಿ ಬುಧವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡು ಮೂವರು ಸಾವನ್ನಪ್ಪಿದ್ದಾರೆ. ರಾಜ್ಯದ ರಾಜಧಾನಿ ಲಕ್ನೋದಿಂದ ಸುಮಾರು 330 ಕಿಮೀ ದೂರದಲ್ಲಿರುವ ನಗರದ ಶಾಹಗಂಜ್ ಪ್ರದೇಶದಲ್ಲಿ ಮನೆಯೊಂದರ ಕೆಳಗೆ ಆಸ್ಪತ್ರೆಯು ಕಾರ್ಯನಿರ್ವಹಿಸುತ್ತಿತ್ತು.

ಬೆಂಕಿ ನಂದಿಸಲಾಗಿದೆ. ಅಪಘಾತ ಸಂಭವಿಸಿದ ಕೂಡಲೇ ಪೊಲೀಸರು ಮತ್ತು ಸರ್ಕಾರಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಮನೆಯಲ್ಲಿ ಇರಿಸಲಾಗಿದ್ದ ಫೋಮ್ ಮೆಟ್ರೆಸ್‌ಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಮತ್ತು ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಹೇಳಲಾಗುತ್ತಿದೆ. ಬೆಂಕಿ ಕಾಣಿಸಿಕೊಂಡಿದೆ ಎಂಬ ಮಾಹಿತಿಯನ್ನು ನಮಗೆ ಬಂದಿತ್ತು. ಕಟ್ಟಡದ ಮೊದಲ ಮಹಡಿಯಲ್ಲಿ ಕುಟುಂಬವೊಂದು ವಾಸವಾಗಿದ್ದರು, ನಮ್ಮ ಪ್ರೋಟೋಕಾಲ್ ಮೂಲಕ ಎಲ್ಲ ಮಾಹಿತಿಯನ್ನು ಪಡೆದಿದ್ದೇವು ಎಂದು ಆಗ್ರಾ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ. ಬೆಂಕಿ ಹೊತ್ತಿಕೊಂಡಾಗ ಮನೆಯಲ್ಲಿದ್ದ ಕೆಲವರು ಹೊರಗೆ ಬಂದರು, ಕುಟುಂಬದ ಮೂವರು ಸದಸ್ಯರು ಬೆಂಕಿಯಲ್ಲಿ ಸಿಲುಕಿಕೊಂಡರು ಎಂದು ಅವರು ಹೇಳಿದರು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆಗ್ರಾ ಆಸ್ಪತ್ರೆಯಲ್ಲಿ ಮೃತಪಟ್ಟವರ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯ ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದರು.

ಇದನ್ನು ಓದಿ: ಕಾಶ್ಮೀರದ ಶೋಪಿಯಾನ್​ನಲ್ಲಿ ಸರಣಿ ಎನ್​ಕೌಂಟರ್; ಭದ್ರತಾ ಪಡೆಯಿಂದ ನಾಲ್ವರು ಉಗ್ರರ ಹತ್ಯೆ

ಬೆಂಕಿಯಲ್ಲಿ ವೈದ್ಯರೊಬ್ಬರು ಸಾವನ್ನಪ್ಪಿದ್ದಾರೆ, ಮುಖ್ಯ ವೈದ್ಯಾಧಿಕಾರಿ ಡಾ ಎಕೆ ಶ್ರೀವಾಸ್ತವ, ಆಸ್ಪತ್ರೆಗೆ ಭೇಟಿ ನೀಡಿದ ನಂತರ, ಮೃತ – ರಾಜನ್ – ವೈದ್ಯರಲ್ಲ, ಆದರೆ ಆವರಣದ ಮಾಲೀಕ ಎಂದು ಸ್ಪಷ್ಟಪಡಿಸಿದರು. ಕೆಳ ಮಹಡಿಯನ್ನು ಡಾ ಇಶು ವರ್ಮಾ ಅವರ ಹೆಸರಿನಲ್ಲಿ ನೋಂದಾಯಿಸಿದ ಆಸ್ಪತ್ರೆಗೆ ಬಾಡಿಗೆಗೆ ಪಡೆದಿದ್ದರು.

Published On - 12:33 pm, Wed, 5 October 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ