AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh Crime: ನಿನ್ನ ಲಿಂಗ ಬದಲಿಸುತ್ತೇನೆ ಎಂದು ಹೇಳಿ ಮಹಿಳೆಯ ಪ್ರಾಣವನ್ನೇ ತೆಗೆದ ಮಂತ್ರವಾದಿ

ಮಂತ್ರವಾದಿಯೊಬ್ಬ ಲಿಂಗ ಬದಲಿಸುವುದಾಗಿ ನಂಬಿಸಿ ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ಘಟನೆಯು ಆರ್​ಸಿ ಮಿಷನ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ನಿವಾಸಿ ಪ್ರಿಯಾ (30) ಪುವಾಯನ್ ನಿವಾಸಿ ಪ್ರೀತಿ(24) ಅವರೊಂದಿಗೆ ಸ್ನೇಹ ಬೆಳೆಸಿದ್ದರು.

Uttar Pradesh Crime: ನಿನ್ನ ಲಿಂಗ ಬದಲಿಸುತ್ತೇನೆ ಎಂದು ಹೇಳಿ ಮಹಿಳೆಯ ಪ್ರಾಣವನ್ನೇ ತೆಗೆದ ಮಂತ್ರವಾದಿ
ತಾಂತ್ರಿಕImage Credit source: Odishabhaskar
ನಯನಾ ರಾಜೀವ್
|

Updated on: Jun 21, 2023 | 12:49 PM

Share

ಮಂತ್ರವಾದಿಯೊಬ್ಬ ಲಿಂಗ ಬದಲಿಸುವುದಾಗಿ ನಂಬಿಸಿ ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ಘಟನೆಯು ಆರ್​ಸಿ ಮಿಷನ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ನಿವಾಸಿ ಪ್ರಿಯಾ (30) ಪುವಾಯನ್ ನಿವಾಸಿ ಪ್ರೀತಿ(24) ಅವರೊಂದಿಗೆ ಸ್ನೇಹ ಬೆಳೆಸಿದ್ದರು. ನಂತರ ಇಬ್ಬರೂ ಸಲಿಂಗ ಸಂಬಂಧ ಹೊಂದಿದ್ದರು ಎಂದು ಎಸ್ಪಿ ತಿಳಿಸಿದ್ದಾರೆ.

ಪ್ರಿಯಾ ಜೊತೆಗಿನ ಸಂಬಂಧ ಬೆಳಕಿಗೆ ಬಂದ ನಂತರ ಪ್ರೀತಿಯನ್ನು ಮದುವೆಯಾಗಲೂ ಯಾವೊಬ್ಬ ಯುವಕನೂ ಮುಂದೆ ಬರುತ್ತಿರಲಿಲ್ಲ. ಹಾಗಾಗಿ ಪ್ರೀತಿ ಹಾಗೂ ತಾಯಿ ಊರ್ಮಿಳಾ ಅವರು ಮೊಹಮ್ಮದಿ ಪ್ರದೇಶದ ನಿವಾಸಿ ತಂತ್ರಿ ರಾಮ್ನಿವಾಸ್ ಅವರನ್ನು ಭೇಟಿಯಾಗಿ ಪ್ರಿಯಾಳನ್ನು ಕೊಲ್ಲಲು ಯೋಜನೆ ರೂಪಿಸಿದ್ದರು.

ಪ್ರಿಯಾ ಪುರುಷನಾಗಲು ಬಯಸಿದ್ದಾಳೆ ಎಂದು ಪ್ರೀತಿ ತಂತ್ರಿಗೆ ತಿಳಿಸಿದ್ದಳು, ಇದರ ಲಾಭ ಪಡೆದ ಪ್ರೀತಿಯ ತಾಯಿ, ಪ್ರಿಯಾಳನ್ನು ಕೊಲ್ಲಲು 1.5 ಲಕ್ಷ ರೂಪಾಯಿ ನೀಡುವುದಾಗಿ ತಂತ್ರಿಗಳಿಗೆ ಭರವಸೆ ನೀಡಿದ್ದರು ಎನ್ನಲಾಗಿದೆ. ಯೋಜನೆಯ ಪ್ರಕಾರ, ಪ್ರೀತಿ ಪ್ರಿಯಾಗೆ ಕರೆ ಮಾಡಿ ತಂತ್ರಿ ನಿನ್ನ ಲಿಂಗವನ್ನು ಬದಲಾಯಿಸುತ್ತಾನೆ ಎಂದು ಹೇಳಿದ್ದಳು.

ಮತ್ತಷ್ಟು ಓದಿ: Davanagere News: ಕಾಲೇಜು ಸೇರಿದ ನಾಲ್ಕೇ ದಿನಕ್ಕೆ ಕಾಂಪೌಂಡ್ ಮೇಲಿಂದ ಬಿದ್ದು ವಿದ್ಯಾರ್ಥಿನಿ ಸಾವು

ಪ್ರಿಯಾ ಏಪ್ರಿಲ್ 13 ರಂದು ಮನೆಯಿಂದ ಹೊರಟು ನಾಪತ್ತೆಯಾಗಿದ್ದರು. ಆಕೆಯ ಕುಟುಂಬದವರು ಏಪ್ರಿಲ್ 18 ರಂದು ನಾಪತ್ತೆ ಪ್ರಕರಣವನ್ನು ದಾಖಲಿಸಿದ್ದಾರೆ. ಪ್ರಿಯಾ ಪ್ರೀತಿ ಮತ್ತು ರಾಮನಿವಾಸ್ ಜೊತೆ ಮಾತನಾಡಿರುವುದು ಗೊತ್ತಾಗಿತ್ತು ಎಂದು ಎಸ್ಪಿ ತಿಳಿಸಿದ್ದಾರೆ.

ಮಾಹಿತಿ ಆಧರಿಸಿ ಪೊಲೀಸರು ರಾಮನಿವಾಸ್‌ನನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಆತ ತಪ್ಪೊಪ್ಪಿಕೊಂಡಿದ್ದಾನೆ. ಪುರುಷನನ್ನಾಗಿ ಪರಿವರ್ತಿಸುವ ನೆಪದಲ್ಲಿ ಪ್ರಿಯಾಳನ್ನು ಕಾಡಿಗೆ ಕರೆದೊಯ್ದು ನದಿಯ ದಡದಲ್ಲಿ ಕಣ್ಣು ಮುಚ್ಚಿ ಮಲಗುವಂತೆ ಹೇಳಿದ್ದಾಗಿ ಪೊಲೀಸರಿಗೆ ತಿಳಿಸಿದ್ದಾರೆ.

ಇದೇ ವೇಳೆ ಚಾಕುವಿನಿಂದ ಪ್ರಿಯಾಳ ಕುತ್ತಿಗೆ ಸೀಳಿದ್ದಾನೆ. ಆರೋಪಿ ತಂತ್ರಿ ಮತ್ತು ಪ್ರಿಯಾಳ ಸ್ನೇಹಿತೆ ಪ್ರೀತಿಯನ್ನು ಮಂಗಳವಾರ ಬಂಧಿಸಲಾಗಿದ್ದು, ಇಬ್ಬರನ್ನೂ ಜೈಲಿಗೆ ಕಳುಹಿಸಲಾಗಿದೆ ಎಂದು ಎಸ್ಪಿ ಆನಂದ್ ತಿಳಿಸಿದ್ದಾರೆ. ಹತ್ಯೆಗೆ ಬಳಸಿದ ಸುತ್ತಿಗೆಯನ್ನು ಕೂಡ ಪೊಲೀಸರು ತಂತ್ರಿ ಮನೆಯಿಂದ ವಶಪಡಿಸಿಕೊಂಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​