Uttar Pradesh Crime: ನಿನ್ನ ಲಿಂಗ ಬದಲಿಸುತ್ತೇನೆ ಎಂದು ಹೇಳಿ ಮಹಿಳೆಯ ಪ್ರಾಣವನ್ನೇ ತೆಗೆದ ಮಂತ್ರವಾದಿ

ಮಂತ್ರವಾದಿಯೊಬ್ಬ ಲಿಂಗ ಬದಲಿಸುವುದಾಗಿ ನಂಬಿಸಿ ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ಘಟನೆಯು ಆರ್​ಸಿ ಮಿಷನ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ನಿವಾಸಿ ಪ್ರಿಯಾ (30) ಪುವಾಯನ್ ನಿವಾಸಿ ಪ್ರೀತಿ(24) ಅವರೊಂದಿಗೆ ಸ್ನೇಹ ಬೆಳೆಸಿದ್ದರು.

Uttar Pradesh Crime: ನಿನ್ನ ಲಿಂಗ ಬದಲಿಸುತ್ತೇನೆ ಎಂದು ಹೇಳಿ ಮಹಿಳೆಯ ಪ್ರಾಣವನ್ನೇ ತೆಗೆದ ಮಂತ್ರವಾದಿ
ತಾಂತ್ರಿಕImage Credit source: Odishabhaskar
Follow us
|

Updated on: Jun 21, 2023 | 12:49 PM

ಮಂತ್ರವಾದಿಯೊಬ್ಬ ಲಿಂಗ ಬದಲಿಸುವುದಾಗಿ ನಂಬಿಸಿ ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ಘಟನೆಯು ಆರ್​ಸಿ ಮಿಷನ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ನಿವಾಸಿ ಪ್ರಿಯಾ (30) ಪುವಾಯನ್ ನಿವಾಸಿ ಪ್ರೀತಿ(24) ಅವರೊಂದಿಗೆ ಸ್ನೇಹ ಬೆಳೆಸಿದ್ದರು. ನಂತರ ಇಬ್ಬರೂ ಸಲಿಂಗ ಸಂಬಂಧ ಹೊಂದಿದ್ದರು ಎಂದು ಎಸ್ಪಿ ತಿಳಿಸಿದ್ದಾರೆ.

ಪ್ರಿಯಾ ಜೊತೆಗಿನ ಸಂಬಂಧ ಬೆಳಕಿಗೆ ಬಂದ ನಂತರ ಪ್ರೀತಿಯನ್ನು ಮದುವೆಯಾಗಲೂ ಯಾವೊಬ್ಬ ಯುವಕನೂ ಮುಂದೆ ಬರುತ್ತಿರಲಿಲ್ಲ. ಹಾಗಾಗಿ ಪ್ರೀತಿ ಹಾಗೂ ತಾಯಿ ಊರ್ಮಿಳಾ ಅವರು ಮೊಹಮ್ಮದಿ ಪ್ರದೇಶದ ನಿವಾಸಿ ತಂತ್ರಿ ರಾಮ್ನಿವಾಸ್ ಅವರನ್ನು ಭೇಟಿಯಾಗಿ ಪ್ರಿಯಾಳನ್ನು ಕೊಲ್ಲಲು ಯೋಜನೆ ರೂಪಿಸಿದ್ದರು.

ಪ್ರಿಯಾ ಪುರುಷನಾಗಲು ಬಯಸಿದ್ದಾಳೆ ಎಂದು ಪ್ರೀತಿ ತಂತ್ರಿಗೆ ತಿಳಿಸಿದ್ದಳು, ಇದರ ಲಾಭ ಪಡೆದ ಪ್ರೀತಿಯ ತಾಯಿ, ಪ್ರಿಯಾಳನ್ನು ಕೊಲ್ಲಲು 1.5 ಲಕ್ಷ ರೂಪಾಯಿ ನೀಡುವುದಾಗಿ ತಂತ್ರಿಗಳಿಗೆ ಭರವಸೆ ನೀಡಿದ್ದರು ಎನ್ನಲಾಗಿದೆ. ಯೋಜನೆಯ ಪ್ರಕಾರ, ಪ್ರೀತಿ ಪ್ರಿಯಾಗೆ ಕರೆ ಮಾಡಿ ತಂತ್ರಿ ನಿನ್ನ ಲಿಂಗವನ್ನು ಬದಲಾಯಿಸುತ್ತಾನೆ ಎಂದು ಹೇಳಿದ್ದಳು.

ಮತ್ತಷ್ಟು ಓದಿ: Davanagere News: ಕಾಲೇಜು ಸೇರಿದ ನಾಲ್ಕೇ ದಿನಕ್ಕೆ ಕಾಂಪೌಂಡ್ ಮೇಲಿಂದ ಬಿದ್ದು ವಿದ್ಯಾರ್ಥಿನಿ ಸಾವು

ಪ್ರಿಯಾ ಏಪ್ರಿಲ್ 13 ರಂದು ಮನೆಯಿಂದ ಹೊರಟು ನಾಪತ್ತೆಯಾಗಿದ್ದರು. ಆಕೆಯ ಕುಟುಂಬದವರು ಏಪ್ರಿಲ್ 18 ರಂದು ನಾಪತ್ತೆ ಪ್ರಕರಣವನ್ನು ದಾಖಲಿಸಿದ್ದಾರೆ. ಪ್ರಿಯಾ ಪ್ರೀತಿ ಮತ್ತು ರಾಮನಿವಾಸ್ ಜೊತೆ ಮಾತನಾಡಿರುವುದು ಗೊತ್ತಾಗಿತ್ತು ಎಂದು ಎಸ್ಪಿ ತಿಳಿಸಿದ್ದಾರೆ.

ಮಾಹಿತಿ ಆಧರಿಸಿ ಪೊಲೀಸರು ರಾಮನಿವಾಸ್‌ನನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಆತ ತಪ್ಪೊಪ್ಪಿಕೊಂಡಿದ್ದಾನೆ. ಪುರುಷನನ್ನಾಗಿ ಪರಿವರ್ತಿಸುವ ನೆಪದಲ್ಲಿ ಪ್ರಿಯಾಳನ್ನು ಕಾಡಿಗೆ ಕರೆದೊಯ್ದು ನದಿಯ ದಡದಲ್ಲಿ ಕಣ್ಣು ಮುಚ್ಚಿ ಮಲಗುವಂತೆ ಹೇಳಿದ್ದಾಗಿ ಪೊಲೀಸರಿಗೆ ತಿಳಿಸಿದ್ದಾರೆ.

ಇದೇ ವೇಳೆ ಚಾಕುವಿನಿಂದ ಪ್ರಿಯಾಳ ಕುತ್ತಿಗೆ ಸೀಳಿದ್ದಾನೆ. ಆರೋಪಿ ತಂತ್ರಿ ಮತ್ತು ಪ್ರಿಯಾಳ ಸ್ನೇಹಿತೆ ಪ್ರೀತಿಯನ್ನು ಮಂಗಳವಾರ ಬಂಧಿಸಲಾಗಿದ್ದು, ಇಬ್ಬರನ್ನೂ ಜೈಲಿಗೆ ಕಳುಹಿಸಲಾಗಿದೆ ಎಂದು ಎಸ್ಪಿ ಆನಂದ್ ತಿಳಿಸಿದ್ದಾರೆ. ಹತ್ಯೆಗೆ ಬಳಸಿದ ಸುತ್ತಿಗೆಯನ್ನು ಕೂಡ ಪೊಲೀಸರು ತಂತ್ರಿ ಮನೆಯಿಂದ ವಶಪಡಿಸಿಕೊಂಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ