Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ಕಿರುಕುಳ ಪ್ರತಿಭಟಿಸಿದ ದಲಿತ ಯುವತಿಯನ್ನು ಬಿಸಿ ಎಣ್ಣೆ ಕಡಾಯಿಗೆ ತಳ್ಳಿದ ಪಾಪಿಗಳು

ಆಯಿಲ್​ ಮಿಲ್​ನಲ್ಲಿ ಕೆಲಸ ಮಾಡುತ್ತಿದ್ದ ದಲಿತ ಯುವತಿ ಕೆಲಸದ ಸ್ಥಳದಲ್ಲಿ ನಿತ್ಯ ಲೈಂಗಿಕ ಕಿರುಕುಳ ಎದುರಿಸುತ್ತಿದ್ದಳು. ಅದನ್ನು ಪ್ರತಿಭಟಿಸಿದ್ದಕ್ಕೆ ಆರೋಪಿಗಳು ಆಕೆಯನ್ನು ಬಿಸಿ ಎಣ್ಣೆಯ ಕಡಾಯಿಗೆ ತಳ್ಳಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಆಕೆಗೆ ಗಂಭೀರ ಸುಟ್ಟ ಗಾಯಗಳಾಗಿದ್ದು, ದೆಹಲಿಗೆ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿದೆ. ಮಿಲ್​ ಮಾಲೀಕ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಲೈಂಗಿಕ ಕಿರುಕುಳ ಪ್ರತಿಭಟಿಸಿದ ದಲಿತ ಯುವತಿಯನ್ನು ಬಿಸಿ ಎಣ್ಣೆ ಕಡಾಯಿಗೆ ತಳ್ಳಿದ ಪಾಪಿಗಳು
ಕಿರುಕುಳImage Credit source: India TV
Follow us
ನಯನಾ ರಾಜೀವ್
|

Updated on: Dec 31, 2023 | 1:12 PM

ಆಯಿಲ್​ ಮಿಲ್​ನಲ್ಲಿ ಕೆಲಸ ಮಾಡುತ್ತಿದ್ದ ದಲಿತ ಯುವತಿ ಕೆಲಸದ ಸ್ಥಳದಲ್ಲಿ ನಿತ್ಯ ಲೈಂಗಿಕ ಕಿರುಕುಳ ಎದುರಿಸುತ್ತಿದ್ದಳು. ಅದನ್ನು ಪ್ರತಿಭಟಿಸಿದ್ದಕ್ಕೆ ಆರೋಪಿಗಳು ಆಕೆಯನ್ನು ಬಿಸಿ ಎಣ್ಣೆಯ ಕಡಾಯಿಗೆ ತಳ್ಳಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಆಕೆಗೆ ಗಂಭೀರ ಸುಟ್ಟ ಗಾಯಗಳಾಗಿದ್ದು, ದೆಹಲಿಗೆ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿದೆ. ಮಿಲ್​ ಮಾಲೀಕ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ನಿನ್ನೆ ಮಹಿಳೆಯ ಸಹೋದರ ನೀಡಿದ ದೂರಿನ ಪ್ರಕಾರ, ಆತನ ಕುಟುಂಬದ ಸದಸ್ಯರು ಧನೂರ ಸಿಲ್ವರ್‌ನಗರ ಗ್ರಾಮದ ಆಯಿಲ್ ಮಿಲ್‌ನಲ್ಲಿ ಕೆಲಸ ಮಾಡುತ್ತಿದ್ದರು.

ಆಕೆ ಮಿಲ್​ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಿಲ್ ಮಾಲೀಕ ಪ್ರಮೋದ್, ಮತ್ತು ಆತನ ಇಬ್ಬರು ಸಹಚರರಾದ ರಾಜು ಹಾಗೂ ಸಂದೀಪ್​ ಕಿರುಕುಳ ನೀಡಿದ್ದಾರೆ. ಆಕೆ ಆರೋಪಿಗಳ ವಿರುದ್ಧ ಪ್ರತಿಭಟಿಸಿದಾಗ ಜಾತಿ ನಿಂದನೆ ಮಾಡಿದ್ದಾರೆ. ಬಳಿ ಬಿಸಿ ಎಣ್ಣೆ ತುಂಬಿದ ಕಡಾಯಿಗೆ ಆಕೆಯನ್ನು ಎಸೆದಿದ್ದಾರೆ.

ಮತ್ತಷ್ಟು ಓದಿ: ನಮ್ಮ ಮೆಟ್ರೋದಲ್ಲಿ ಮತ್ತೊಂದು ಲೈಂಗಿಕ ಕಿರುಕುಳ: ವಿಕೃತ ಕಾಮಿಯ ಕೈ ಆಟ ಬಯಲು

ಆಕೆಯ ಕಾಲುಗಳು ಹಾಗೂ ಕೈಗಳು ಸೇರಿದಂತೆ ಯುವತಿಯ ದೇಹದ ಅರ್ಧಕ್ಕಿಂತಲೂ ಹೆಚ್ಚು ಭಾಗ ಸುಟ್ಟು ಹೋಗಿದೆ. ಆಕೆಯ ಸಹೋದರನ ದೂರಿನ ಆಧಾರದ ಮೇಲೆ ಪೊಲೀಸರು ಕೊಲೆ ಯತ್ನ, ಮಹಿಳೆಯ ಮೇಲೆ ಹಲ್ಲೆ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸರ್ಕಲ್ ಆಫೀಸರ್ ವಿಜಯ್ ಚೌಧರಿ ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್