Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಅಶ್ಲೀಲ ವಿಡಿಯೋ ನೋಡಿ ಬಾಲಕನ ಮೇಲೆ ಅತ್ಯಾಚಾರವೆಸಗಿ ಕೊಂದ ಮದರಸಾ ಶಿಕ್ಷಕ

ಉತ್ತರ ಪ್ರದೇಶದಲ್ಲಿ ಮದರಸಾದ ಶಿಕ್ಷಕನು ಅಶ್ಲೀಲ ವಿಡಿಯೋ ನೋಡಿದ ನಂತರ ಹುಡುಗನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಸೌರಾ ಗ್ರಾಮದ ಮದರಸಾದಲ್ಲಿ ಹಫೀಜ್ ಎಂಬ ಶಿಕ್ಷಕ 9 ವರ್ಷದ ಬಾಲಕನನ್ನು ಸೊಡೊಮೈಸ್ ಮಾಡಿ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Crime News: ಅಶ್ಲೀಲ ವಿಡಿಯೋ ನೋಡಿ ಬಾಲಕನ ಮೇಲೆ ಅತ್ಯಾಚಾರವೆಸಗಿ ಕೊಂದ ಮದರಸಾ ಶಿಕ್ಷಕ
ಸಾಂದರ್ಭಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on: Jul 08, 2024 | 9:44 PM

ಸೌರಾ: ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯ ಸೌರಾ ಗ್ರಾಮದ ಮದರಸಾವೊಂದರ ಇತರ ಮಕ್ಕಳು ಆಟವಾಡಲು ಹೊರಗೆ ಹೋಗಿದ್ದಾಗ, 9 ವರ್ಷದ ಬಾಲಕನೊಬ್ಬ ಮೆಟ್ಟಿಲುಗಳ ಮೂಲಕ ಬೇರೆ ರೂಂಗೆ ಹೋಗಿದ್ದನ್ನು ಶಿಕ್ಷಕ ಹಫೀಜ್ ದಿಲ್ನವಾಜ್ ನೋಡಿದ್ದಾರೆ. ದಿನವೂ ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋ ನೋಡುತ್ತಿದ್ದ ಶಿಕ್ಷಕ ಆ ವಿದ್ಯಾರ್ಥಿಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರ ನಡೆಸಿ, ಕೊಲೆ ಮಾಡಿದ್ದಾನೆ.

ಆ ಶಿಕ್ಷಕ ಆ ಬಾಲಕನಿಗೆ ಸೊಡೊಮೈಸ್ ಮಾಡಿದ್ದಾನೆ ಎಂದು ಆರೋಪಿಸಲಾಗಿದ್ದು, ಆತನ ಮೇಲೆ ಅತ್ಯಾಚಾರ ನಡೆಸಲಾಗಿದೆ. ಆತ ಕಿರುಚುವುದನ್ನು ತಡೆಯಲು ಬಾಯಿ ಮುಚ್ಚಿ, ಉಸಿರುಗಟ್ಟಿಸಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಆ ಹುಡುಗ ಮೂರ್ಛೆ ಹೋಗಿದ್ದಾನೆ. ಹಫೀಜ್ ದಿಲ್ನವಾಜ್ ನಂತರ ಹುಡುಗನ ಕೈಗಳನ್ನು ಒಟ್ಟಿಗೆ ಕಟ್ಟಿ, ನಂತರ ಅವನ ಪಾದಗಳನ್ನು ಕಟ್ಟಿದನು. ಅವನು ಆತನ ಬಾಯಿಗೆ ಟೇಪ್ ಹಾಕಿದನು. ಇದರಿಂದ ಆ ಹುಡುಗನಿಗೆ ಕಿರುಚಾಡಲು ಸಾಧ್ಯವಾಗಲಿಲ್ಲ. ಈ ವೇಳೆ ಉಸಿರಾಡಲಾಗದೆ ಆ ಬಾಲಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಮರ್ಯಾದಾ ಹತ್ಯೆ; ಅಂತರ್ಜಾತಿ ವಿವಾಹವಾದ ಮಗಳಿಗೆ ಬೆಂಕಿ ಹಚ್ಚಿ ಕೊಂದ ತಂದೆ

ಆಗ ಹಫೀಜ್ ದಿಲ್ನವಾಜ್ ತನ್ನ ಸೋದರ ಮಾವ ಮೌಲ್ವಿ ರಖಿಯುದ್ದೀನ್​ಗೆ ತಾನು ಮಾಡಿದ ಕೃತ್ಯವನ್ನು ತಿಳಿಸಿದ್ದಾನೆ. ಇಬ್ಬರೂ ಒಟ್ಟಾಗಿ ಶವವನ್ನು ಬಾವಿಗೆ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕನ ಮೇಲೆ ಅತ್ಯಾಚಾರ ಮತ್ತು ಕೊಲೆ ಎರಡನ್ನೂ ಮಾಡಿರುವುದಾಗಿ ಹಫೀಜ್ ದಿಲ್ನವಾಜ್ ಒಪ್ಪಿಕೊಂಡಿದ್ದಾನೆ ಎಂದು ಮಾಲ್ವಾನ್ ಪೊಲೀಸ್ ಠಾಣೆಯ ಹಿರಿಯ ಸಬ್ ಇನ್ಸ್‌ಪೆಕ್ಟರ್ ಉಮೇಶ್ ಚಂದ್ರ ಹೇಳಿದ್ದಾರೆ.

ಮರುದಿನ ಅವರ ಕುಟುಂಬ ಮತ್ತು ಇತರ ಗ್ರಾಮಸ್ಥರ ನೇತೃತ್ವದಲ್ಲಿ ಶೋಧ ತಂಡವು ತಪಾಸಣೆ ನಡೆಸಿದಾಗ ಸಿಮೆಂಟ್ ಸಂಗ್ರಹಿಸಲು ಬಳಸಿದ ಚೀಲದಲ್ಲಿ ಶವ ಪತ್ತೆಯಾಗಿದೆ. ಜುಲೈ 3ರಂದು ಇಬ್ಬರನ್ನು ಬಂಧಿಸಲಾಗಿತ್ತು. ಆ ಬಾಲಕನನ್ನು ಅತ್ಯಾಚಾರ ಮಾಡಿ ಕೊಂದಿರುವುದಾಗಿ ದಿಲ್ನವಾಜ್ ಒಪ್ಪಿಕೊಂಡಿದ್ದಾನೆ. ತಾನು ನಿಯಮಿತವಾಗಿ ಅಶ್ಲೀಲ ವೀಡಿಯೊಗಳನ್ನು ನೋಡುತ್ತೇನೆ ಎಂದು ಆ ಶಿಕ್ಷಕ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Crime News: ಪ್ರೇಮಿಯ ಮೇಲಿನ ಕೋಪಕ್ಕೆ 7 ವರ್ಷದ ಮಗುವನ್ನು ಗೋಡೆಗೆ ಬಡಿದು ಕೊಲೆ

9 ವರ್ಷದ ಬಾಲಕನ ಮೇಲೆ ಅತ್ಯಾಚಾರ ಮಾಡಲು ತಾನು ನೋಡುತ್ತಿದ್ದ ವೀಡಿಯೋಗಳು ಪ್ರೇರೇಪಿಸಿತು ಎಂದು ಅವರು ಪೊಲೀಸರಿಗೆ ತಿಳಿಸಿದ್ದಾರೆ. ಹುಡುಗನ ಪೋಷಕರು ಮೌಲ್ವಿಗೆ ಫೋನ್ ಮಾಡಿ ಅವರ ಮಗ ಕಾಣೆಯಾಗಿದ್ದಾನೆ ಎಂದು ದೂರು ನೀಡಿದ್ದರು. ತಮ್ಮ ಮಗನು ಗೇಟ್ ಬಳಿ ಕೊನೆಯದಾಗಿ ಕಾಣಿಸಿಕೊಂಡಿದ್ದಾನೆ. ಆತ ಬಹುಶಃ ಹೊರಗೆ ಹೋಗಿದ್ದಾನೆ ಎಂದು ಭಾವಿಸಿರುವುದಾಗಿ ಅವರು ಹೇಳಿದರು. ಬಳಿಕ ನಾಪತ್ತೆ ಪ್ರಕರಣ ದಾಖಲಿಸಲಾಯಿತು. ಅದಾಗಿ, 24 ಗಂಟೆಗಳ ಹುಡುಕಾಟದ ನಂತರ ದೇಹವನ್ನು ಪತ್ತೆಹಚ್ಚಲಾಯಿತು. ಆ ದಂಪತಿಗೆ ವಿವಿಧ ವಯಸ್ಸಿನ 3 ಹೆಣ್ಣು ಮಕ್ಕಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು