AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕೆಗಳು ಹೊಲವನ್ನು ಹಾಳು ಮಾಡಿದ್ದಕ್ಕೆ, ಪಕ್ಕದ ಮನೆಯವನ ಗುಪ್ತಾಂಗವನ್ನು ಕಚ್ಚಿದ ವ್ಯಕ್ತಿ

ಮೇಕೆಗಳು ಹೊಲವನ್ನು ಹಾಳು ಮಾಡಿದ್ದಕ್ಕಾಗಿ ವ್ಯಕ್ತಿಯೊಬ್ಬ ಪಕ್ಕದ ಮನೆಯವನ ಗುಪ್ತಾಂಗವನ್ನು ಕಚ್ಚಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಷಹಜಹಾನ್​ಪುರದ ರೋಜಾದಲ್ಲಿ 28 ವರ್ಷದ ವ್ಯಕ್ತಿಯೊಬ್ಬ ಪಕ್ಕದ ಮನೆಯವನ ಖಾಸಗಿ ಅಂಗವನ್ನು ಕಚ್ಚಿದ್ದಾನೆ. ರಾತ್ರಿ ಹೊತ್ತು ಪಕ್ಕದ ಮನೆಯವರ ಮೇಕೆಗಳು ಈತನ ಹೊಲದಲ್ಲಿ ಓಡಾಡಿ ಬೆಳೆಯನ್ನು ನಾಶಪಡಿಸಿದ್ದವು.

ಮೇಕೆಗಳು ಹೊಲವನ್ನು ಹಾಳು ಮಾಡಿದ್ದಕ್ಕೆ, ಪಕ್ಕದ ಮನೆಯವನ ಗುಪ್ತಾಂಗವನ್ನು ಕಚ್ಚಿದ ವ್ಯಕ್ತಿ
ಮೇಕೆಗಳು
ನಯನಾ ರಾಜೀವ್
|

Updated on: Aug 29, 2023 | 12:02 PM

Share

ಮೇಕೆಗಳು ಹೊಲವನ್ನು ಹಾಳು ಮಾಡಿದ್ದಕ್ಕಾಗಿ ವ್ಯಕ್ತಿಯೊಬ್ಬ ಪಕ್ಕದ ಮನೆಯವನ ಗುಪ್ತಾಂಗವನ್ನು ಕಚ್ಚಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಷಹಜಹಾನ್​ಪುರದ ರೋಜಾದಲ್ಲಿ 28 ವರ್ಷದ ವ್ಯಕ್ತಿಯೊಬ್ಬ ಪಕ್ಕದ ಮನೆಯವನ ಖಾಸಗಿ ಅಂಗವನ್ನು ಕಚ್ಚಿದ್ದಾನೆ. ರಾತ್ರಿ ಹೊತ್ತು ಪಕ್ಕದ ಮನೆಯವರ ಮೇಕೆಗಳು ಈತನ ಹೊಲದಲ್ಲಿ ಓಡಾಡಿ ಬೆಳೆಯನ್ನು ನಾಶಪಡಿಸಿದ್ದವು. ಗಾಯಗೊಂಡಿರುವ ಕುರಿ ಮಾಲೀಕನಿಗೆ ನಾಲ್ಕು ಹೊಲಿಗೆಗಳನ್ನು ಹಾಕಲಾಗಿದೆ. ರೋಜಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅವರನ್ನು ಶಹಜಹಾನ್​ಪುರ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅವರ ಸ್ಥಿತಿ ಸ್ಥಿರವಾಗಿದೆ.

ಮೇಕೆಗಳ ವಿಚಾರವಾಗಿ ಗಂಗಾರಾಮ್ ಸಿಂಗ್ ಜತೆಗೆ ಪದೇ ಪದೇ ಜಗಳವಾಗುತ್ತಿತ್ತು, ಈ ಬಾರಿ ಕೋಪ ತಾರಕಕ್ಕೇರಿತ್ತು, ಕೋಪದಲ್ಲಿ ತನ್ನನ್ನು ಕೆಳಗೆ ಒದ್ದು ಬೀಳಿಸಿ ಗುಪ್ತಾಂಗವನ್ನು ಕಚ್ಚಿದ್ದಾನೆ ಎಂದಿದ್ದಾರೆ. ಪೊಲೀಸರು ಮೊದಲು ಅವರನ್ನು ಸಂಪರ್ಕಿಸಿದಾಗ ಎಫ್​ಐಆರ್ ದಾಖಲಿಸಲು ಒಪ್ಪಿಗೆ ನೀಡಿರಲಿಲ್ಲ, ಬಳಿಕ ಒಪ್ಪಿಗೆ ಸೂಚಿಸಿದ್ದಾರೆ.

ಮತ್ತಷ್ಟು ಓದಿ: ಕೇರಳ ಬಸ್​ನಲ್ಲಿ ನಟಿಗೆ ಗುಪ್ತಾಂಗ ತೋರಿಸಿ ಜೈಲು ಪಾಲಾದ ಯುವಕ ಜಾಮೀನಿನ ಮೇಲೆ ಬಿಡುಗಡೆ, ಹೂವಿನ ಮಾಲೆ ಹಾಕಿ ಸ್ವಾಗತ

ವೈದ್ಯರ ಪ್ರಕಾರ ಮೇಲ್ಮೈ ಗಾಯಗಳಷ್ಟೇ ಆಗಿದೆ, ಆಂತರಿಕ ನಾಳಗಳಿಗೆ ಯಾವುದೇ ಹಾನಿಯಾಗಿಲ್ಲ, ಕಾಲಾನಂತರದಲ್ಲಿ ರೋಗಿ ಗುಣಮುಖರಾಗುತ್ತಾರೆ ಎಂದು ತಿಳಿಸಿದ್ದಾರೆ. ಗಂಗಾರಾಮ್​ಗೆ ಕಠಿಣ ಶಿಕ್ಷೆಯಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2017ರಲ್ಲಿ ಕೂಡ ಇಂಥದ್ದೇ ಘಟನೆ ನಡೆದಿತ್ತು, ಶಹಜಹಾನ್​ ಪುರದಲ್ಲಿ ವ್ಯಕ್ತಿಯೊಬ್ಬ ಗೋಡೆಯೊಂದನ್ನು ನಿರ್ಮಿಸುತ್ತಿದ್ದ ಅದಕ್ಕೆ ಪಕ್ಕದ ಮನೆಯಲ್ಲೇ ವಾಸವಿದ್ದ ದಂಪತಿ ವಿರೋಧಿಸಿದ್ದರು, ಮಾತಿಗೆ ಮಾತು ಬೆಳದು ಕೊನೆಗೆ ಮಹಿಳೆ ಪಕ್ಕದ ಮನೆಯ ವ್ಯಕ್ತಿಯ ಗುಪ್ತಾಂಗವನ್ನು ಕಚ್ಚಿದ್ದ ನಾಚಿಕೆಗೇಡಿನ ಘಟನೆ ನಡೆದಿತ್ತು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ