AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕೆಗಳು ಹೊಲವನ್ನು ಹಾಳು ಮಾಡಿದ್ದಕ್ಕೆ, ಪಕ್ಕದ ಮನೆಯವನ ಗುಪ್ತಾಂಗವನ್ನು ಕಚ್ಚಿದ ವ್ಯಕ್ತಿ

ಮೇಕೆಗಳು ಹೊಲವನ್ನು ಹಾಳು ಮಾಡಿದ್ದಕ್ಕಾಗಿ ವ್ಯಕ್ತಿಯೊಬ್ಬ ಪಕ್ಕದ ಮನೆಯವನ ಗುಪ್ತಾಂಗವನ್ನು ಕಚ್ಚಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಷಹಜಹಾನ್​ಪುರದ ರೋಜಾದಲ್ಲಿ 28 ವರ್ಷದ ವ್ಯಕ್ತಿಯೊಬ್ಬ ಪಕ್ಕದ ಮನೆಯವನ ಖಾಸಗಿ ಅಂಗವನ್ನು ಕಚ್ಚಿದ್ದಾನೆ. ರಾತ್ರಿ ಹೊತ್ತು ಪಕ್ಕದ ಮನೆಯವರ ಮೇಕೆಗಳು ಈತನ ಹೊಲದಲ್ಲಿ ಓಡಾಡಿ ಬೆಳೆಯನ್ನು ನಾಶಪಡಿಸಿದ್ದವು.

ಮೇಕೆಗಳು ಹೊಲವನ್ನು ಹಾಳು ಮಾಡಿದ್ದಕ್ಕೆ, ಪಕ್ಕದ ಮನೆಯವನ ಗುಪ್ತಾಂಗವನ್ನು ಕಚ್ಚಿದ ವ್ಯಕ್ತಿ
ಮೇಕೆಗಳು
ನಯನಾ ರಾಜೀವ್
|

Updated on: Aug 29, 2023 | 12:02 PM

Share

ಮೇಕೆಗಳು ಹೊಲವನ್ನು ಹಾಳು ಮಾಡಿದ್ದಕ್ಕಾಗಿ ವ್ಯಕ್ತಿಯೊಬ್ಬ ಪಕ್ಕದ ಮನೆಯವನ ಗುಪ್ತಾಂಗವನ್ನು ಕಚ್ಚಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಷಹಜಹಾನ್​ಪುರದ ರೋಜಾದಲ್ಲಿ 28 ವರ್ಷದ ವ್ಯಕ್ತಿಯೊಬ್ಬ ಪಕ್ಕದ ಮನೆಯವನ ಖಾಸಗಿ ಅಂಗವನ್ನು ಕಚ್ಚಿದ್ದಾನೆ. ರಾತ್ರಿ ಹೊತ್ತು ಪಕ್ಕದ ಮನೆಯವರ ಮೇಕೆಗಳು ಈತನ ಹೊಲದಲ್ಲಿ ಓಡಾಡಿ ಬೆಳೆಯನ್ನು ನಾಶಪಡಿಸಿದ್ದವು. ಗಾಯಗೊಂಡಿರುವ ಕುರಿ ಮಾಲೀಕನಿಗೆ ನಾಲ್ಕು ಹೊಲಿಗೆಗಳನ್ನು ಹಾಕಲಾಗಿದೆ. ರೋಜಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅವರನ್ನು ಶಹಜಹಾನ್​ಪುರ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅವರ ಸ್ಥಿತಿ ಸ್ಥಿರವಾಗಿದೆ.

ಮೇಕೆಗಳ ವಿಚಾರವಾಗಿ ಗಂಗಾರಾಮ್ ಸಿಂಗ್ ಜತೆಗೆ ಪದೇ ಪದೇ ಜಗಳವಾಗುತ್ತಿತ್ತು, ಈ ಬಾರಿ ಕೋಪ ತಾರಕಕ್ಕೇರಿತ್ತು, ಕೋಪದಲ್ಲಿ ತನ್ನನ್ನು ಕೆಳಗೆ ಒದ್ದು ಬೀಳಿಸಿ ಗುಪ್ತಾಂಗವನ್ನು ಕಚ್ಚಿದ್ದಾನೆ ಎಂದಿದ್ದಾರೆ. ಪೊಲೀಸರು ಮೊದಲು ಅವರನ್ನು ಸಂಪರ್ಕಿಸಿದಾಗ ಎಫ್​ಐಆರ್ ದಾಖಲಿಸಲು ಒಪ್ಪಿಗೆ ನೀಡಿರಲಿಲ್ಲ, ಬಳಿಕ ಒಪ್ಪಿಗೆ ಸೂಚಿಸಿದ್ದಾರೆ.

ಮತ್ತಷ್ಟು ಓದಿ: ಕೇರಳ ಬಸ್​ನಲ್ಲಿ ನಟಿಗೆ ಗುಪ್ತಾಂಗ ತೋರಿಸಿ ಜೈಲು ಪಾಲಾದ ಯುವಕ ಜಾಮೀನಿನ ಮೇಲೆ ಬಿಡುಗಡೆ, ಹೂವಿನ ಮಾಲೆ ಹಾಕಿ ಸ್ವಾಗತ

ವೈದ್ಯರ ಪ್ರಕಾರ ಮೇಲ್ಮೈ ಗಾಯಗಳಷ್ಟೇ ಆಗಿದೆ, ಆಂತರಿಕ ನಾಳಗಳಿಗೆ ಯಾವುದೇ ಹಾನಿಯಾಗಿಲ್ಲ, ಕಾಲಾನಂತರದಲ್ಲಿ ರೋಗಿ ಗುಣಮುಖರಾಗುತ್ತಾರೆ ಎಂದು ತಿಳಿಸಿದ್ದಾರೆ. ಗಂಗಾರಾಮ್​ಗೆ ಕಠಿಣ ಶಿಕ್ಷೆಯಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2017ರಲ್ಲಿ ಕೂಡ ಇಂಥದ್ದೇ ಘಟನೆ ನಡೆದಿತ್ತು, ಶಹಜಹಾನ್​ ಪುರದಲ್ಲಿ ವ್ಯಕ್ತಿಯೊಬ್ಬ ಗೋಡೆಯೊಂದನ್ನು ನಿರ್ಮಿಸುತ್ತಿದ್ದ ಅದಕ್ಕೆ ಪಕ್ಕದ ಮನೆಯಲ್ಲೇ ವಾಸವಿದ್ದ ದಂಪತಿ ವಿರೋಧಿಸಿದ್ದರು, ಮಾತಿಗೆ ಮಾತು ಬೆಳದು ಕೊನೆಗೆ ಮಹಿಳೆ ಪಕ್ಕದ ಮನೆಯ ವ್ಯಕ್ತಿಯ ಗುಪ್ತಾಂಗವನ್ನು ಕಚ್ಚಿದ್ದ ನಾಚಿಕೆಗೇಡಿನ ಘಟನೆ ನಡೆದಿತ್ತು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ