AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: 2 ವರ್ಷದ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಚರಂಡಿಗೆ ಎಸೆದು ಕೊಂದ ಯುವಕ

ಎರಡು ವರ್ಷದ ಹೆಣ್ಣುಮಗುವನ್ನು ಅಪಹರಣ ಮಾಡಿ, ಅತ್ಯಾಚಾರ ನಡೆಸಲು ಪ್ರಯತ್ನಿಸಿದ ವ್ಯಕ್ತಿಯೊಬ್ಬ ಬಳಿಕ ಆ ಮಗುವನ್ನು ಚರಂಡಿಗೆ ಎಸೆದಿದ್ದಾನೆ. ಉತ್ತರ ಪ್ರದೇಶದಲ್ಲಿ ಈ ಹೇಯಕೃತ್ಯ ನಡೆದಿದೆ. ಆರೋಪಿ ರಾತ್ರಿ ವೇಳೆ ಆ ಬಾಲಕಿಯನ್ನು ಆಕೆಯ ಮನೆಯ ಹೊರಗಿನಿಂದ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮನೆಯವರು ಎಚ್ಚೆತ್ತುಕೊಂಡು ಆತನನ್ನು ಹಿಂಬಾಲಿಸಿದಾಗ, ಆ ಮಗುವನ್ನು ಚರಂಡಿಗೆ ಎಸೆದು ಓಡಿಹೋಗಿದ್ದಾನೆ.

Shocking News: 2 ವರ್ಷದ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಚರಂಡಿಗೆ ಎಸೆದು ಕೊಂದ ಯುವಕ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Aug 17, 2024 | 6:00 PM

Share

ಮೀರತ್: ಭೀಕರ ಘಟನೆಯೊಂದರಲ್ಲಿ ಉತ್ತರ ಪ್ರದೇಶದ ಮೀರತ್‌ನಲ್ಲಿ ವ್ಯಕ್ತಿಯೊಬ್ಬ 2 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ. ಬಾಲಕಿಯ ಮನೆಯವರು ಆತನನ್ನು ಹಿಂಬಾಲಿಸಿಕೊಂಡು ಹೋದಾಗ ಆತ ಹೆದರಿಕೊಂಡು ಆ ಮಗುವನ್ನು ಚರಂಡಿಗೆ ಎಸೆದು ಓಡಿಹೋಗಿದ್ದಾನೆ. ತೀವ್ರವಾದ ಗಾಯದಿಂದಾಗಿ ಆ ಬಾಲಕಿ ಮೃತಪಟ್ಟಿದ್ದು, ಆಕೆಯ ಶವ ಚರಂಡಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯ ಕುರಿತು ವಿವರಗಳನ್ನು ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಆಯುಷ್ ವಿಕ್ರಮ್ ಸಿಂಗ್, ಶುಕ್ರವಾರ ತಡರಾತ್ರಿ 20 ವರ್ಷದ ಮೋಯಿಶ್ ಎಂಬಾತ ಮೀರತ್‌ನ ಸದರ್ ಪ್ರದೇಶದಲ್ಲಿ ಮನೆಯಿಂದ ಹೊರಗೆ ತನ್ನ ಕುಟುಂಬದ ಸದಸ್ಯರೊಂದಿಗೆ ಮಲಗಿದ್ದ 2 ವರ್ಷದ ಬಾಲಕಿಯನ್ನು ತನ್ನ ಮನೆಯ ಹೊರಗಿನಿಂದ ಅಪಹರಿಸಿದ ಘಟನೆ ನಡೆದಿದೆ. ಕುಟುಂಬದ ಸದಸ್ಯರು ಎಚ್ಚರಗೊಂಡ ನಂತರ, ತಮ್ಮ ಮನೆಯ ಮಗು ಇಲ್ಲವೆಂದು ಗೊತ್ತಾಗಿದೆ. ತಕ್ಷಣ ಆರೋಪಿಯನ್ನು ಹಿಂಬಾಲಿಸಿ ಹೋಗಿದ್ದಾರೆ. ಆದರೆ, ಆತ ಆ ಬಾಲಕಿಯನ್ನು ಚರಂಡಿಗೆ ಎಸೆದು ಸ್ಥಳದಿಂದ ಪರಾರಿಯಾಗಿದ್ದಾನೆ. ಇದರಿಂದ ಮಗು ಸಾವನ್ನಪ್ಪಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೊಲ್ಕತ್ತಾ ವೈದ್ಯೆಯ ಅತ್ಯಾಚಾರ, ಕೊಲೆ ಕೇಸ್; ಮಮತಾ ಬ್ಯಾನರ್ಜಿ ರಾಜೀನಾಮೆಗೆ ಬಿಜೆಪಿ ಆಗ್ರಹ

ಇದಲ್ಲದೆ, ಆರೋಪಿಯನ್ನು ಬಂಧಿಸಲಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ಎಸ್ಪಿ ಆಯುಷ್ ಸಿಂಗ್ ಹೇಳಿದ್ದಾರೆ. ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಉತ್ತರ ಪ್ರದೇಶವನ್ನು ಬೆಚ್ಚಿ ಬೀಳಿಸಿದ 2 ಅತ್ಯಾಚಾರ ಪ್ರಕರಣಗಳ ಬೆನ್ನಲ್ಲೇ ಈ ಪ್ರಕರಣ ಬೆಳಕಿಗೆ ಬಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು