AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: 2 ವರ್ಷದ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಚರಂಡಿಗೆ ಎಸೆದು ಕೊಂದ ಯುವಕ

ಎರಡು ವರ್ಷದ ಹೆಣ್ಣುಮಗುವನ್ನು ಅಪಹರಣ ಮಾಡಿ, ಅತ್ಯಾಚಾರ ನಡೆಸಲು ಪ್ರಯತ್ನಿಸಿದ ವ್ಯಕ್ತಿಯೊಬ್ಬ ಬಳಿಕ ಆ ಮಗುವನ್ನು ಚರಂಡಿಗೆ ಎಸೆದಿದ್ದಾನೆ. ಉತ್ತರ ಪ್ರದೇಶದಲ್ಲಿ ಈ ಹೇಯಕೃತ್ಯ ನಡೆದಿದೆ. ಆರೋಪಿ ರಾತ್ರಿ ವೇಳೆ ಆ ಬಾಲಕಿಯನ್ನು ಆಕೆಯ ಮನೆಯ ಹೊರಗಿನಿಂದ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮನೆಯವರು ಎಚ್ಚೆತ್ತುಕೊಂಡು ಆತನನ್ನು ಹಿಂಬಾಲಿಸಿದಾಗ, ಆ ಮಗುವನ್ನು ಚರಂಡಿಗೆ ಎಸೆದು ಓಡಿಹೋಗಿದ್ದಾನೆ.

Shocking News: 2 ವರ್ಷದ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಚರಂಡಿಗೆ ಎಸೆದು ಕೊಂದ ಯುವಕ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Aug 17, 2024 | 6:00 PM

Share

ಮೀರತ್: ಭೀಕರ ಘಟನೆಯೊಂದರಲ್ಲಿ ಉತ್ತರ ಪ್ರದೇಶದ ಮೀರತ್‌ನಲ್ಲಿ ವ್ಯಕ್ತಿಯೊಬ್ಬ 2 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ. ಬಾಲಕಿಯ ಮನೆಯವರು ಆತನನ್ನು ಹಿಂಬಾಲಿಸಿಕೊಂಡು ಹೋದಾಗ ಆತ ಹೆದರಿಕೊಂಡು ಆ ಮಗುವನ್ನು ಚರಂಡಿಗೆ ಎಸೆದು ಓಡಿಹೋಗಿದ್ದಾನೆ. ತೀವ್ರವಾದ ಗಾಯದಿಂದಾಗಿ ಆ ಬಾಲಕಿ ಮೃತಪಟ್ಟಿದ್ದು, ಆಕೆಯ ಶವ ಚರಂಡಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯ ಕುರಿತು ವಿವರಗಳನ್ನು ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಆಯುಷ್ ವಿಕ್ರಮ್ ಸಿಂಗ್, ಶುಕ್ರವಾರ ತಡರಾತ್ರಿ 20 ವರ್ಷದ ಮೋಯಿಶ್ ಎಂಬಾತ ಮೀರತ್‌ನ ಸದರ್ ಪ್ರದೇಶದಲ್ಲಿ ಮನೆಯಿಂದ ಹೊರಗೆ ತನ್ನ ಕುಟುಂಬದ ಸದಸ್ಯರೊಂದಿಗೆ ಮಲಗಿದ್ದ 2 ವರ್ಷದ ಬಾಲಕಿಯನ್ನು ತನ್ನ ಮನೆಯ ಹೊರಗಿನಿಂದ ಅಪಹರಿಸಿದ ಘಟನೆ ನಡೆದಿದೆ. ಕುಟುಂಬದ ಸದಸ್ಯರು ಎಚ್ಚರಗೊಂಡ ನಂತರ, ತಮ್ಮ ಮನೆಯ ಮಗು ಇಲ್ಲವೆಂದು ಗೊತ್ತಾಗಿದೆ. ತಕ್ಷಣ ಆರೋಪಿಯನ್ನು ಹಿಂಬಾಲಿಸಿ ಹೋಗಿದ್ದಾರೆ. ಆದರೆ, ಆತ ಆ ಬಾಲಕಿಯನ್ನು ಚರಂಡಿಗೆ ಎಸೆದು ಸ್ಥಳದಿಂದ ಪರಾರಿಯಾಗಿದ್ದಾನೆ. ಇದರಿಂದ ಮಗು ಸಾವನ್ನಪ್ಪಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೊಲ್ಕತ್ತಾ ವೈದ್ಯೆಯ ಅತ್ಯಾಚಾರ, ಕೊಲೆ ಕೇಸ್; ಮಮತಾ ಬ್ಯಾನರ್ಜಿ ರಾಜೀನಾಮೆಗೆ ಬಿಜೆಪಿ ಆಗ್ರಹ

ಇದಲ್ಲದೆ, ಆರೋಪಿಯನ್ನು ಬಂಧಿಸಲಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ಎಸ್ಪಿ ಆಯುಷ್ ಸಿಂಗ್ ಹೇಳಿದ್ದಾರೆ. ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಉತ್ತರ ಪ್ರದೇಶವನ್ನು ಬೆಚ್ಚಿ ಬೀಳಿಸಿದ 2 ಅತ್ಯಾಚಾರ ಪ್ರಕರಣಗಳ ಬೆನ್ನಲ್ಲೇ ಈ ಪ್ರಕರಣ ಬೆಳಕಿಗೆ ಬಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ