Shocking News: 2 ವರ್ಷದ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಚರಂಡಿಗೆ ಎಸೆದು ಕೊಂದ ಯುವಕ

ಎರಡು ವರ್ಷದ ಹೆಣ್ಣುಮಗುವನ್ನು ಅಪಹರಣ ಮಾಡಿ, ಅತ್ಯಾಚಾರ ನಡೆಸಲು ಪ್ರಯತ್ನಿಸಿದ ವ್ಯಕ್ತಿಯೊಬ್ಬ ಬಳಿಕ ಆ ಮಗುವನ್ನು ಚರಂಡಿಗೆ ಎಸೆದಿದ್ದಾನೆ. ಉತ್ತರ ಪ್ರದೇಶದಲ್ಲಿ ಈ ಹೇಯಕೃತ್ಯ ನಡೆದಿದೆ. ಆರೋಪಿ ರಾತ್ರಿ ವೇಳೆ ಆ ಬಾಲಕಿಯನ್ನು ಆಕೆಯ ಮನೆಯ ಹೊರಗಿನಿಂದ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮನೆಯವರು ಎಚ್ಚೆತ್ತುಕೊಂಡು ಆತನನ್ನು ಹಿಂಬಾಲಿಸಿದಾಗ, ಆ ಮಗುವನ್ನು ಚರಂಡಿಗೆ ಎಸೆದು ಓಡಿಹೋಗಿದ್ದಾನೆ.

Shocking News: 2 ವರ್ಷದ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಚರಂಡಿಗೆ ಎಸೆದು ಕೊಂದ ಯುವಕ
ಸಾಂದರ್ಭಿಕ ಚಿತ್ರ

Updated on: Aug 17, 2024 | 6:00 PM

ಮೀರತ್: ಭೀಕರ ಘಟನೆಯೊಂದರಲ್ಲಿ ಉತ್ತರ ಪ್ರದೇಶದ ಮೀರತ್‌ನಲ್ಲಿ ವ್ಯಕ್ತಿಯೊಬ್ಬ 2 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ. ಬಾಲಕಿಯ ಮನೆಯವರು ಆತನನ್ನು ಹಿಂಬಾಲಿಸಿಕೊಂಡು ಹೋದಾಗ ಆತ ಹೆದರಿಕೊಂಡು ಆ ಮಗುವನ್ನು ಚರಂಡಿಗೆ ಎಸೆದು ಓಡಿಹೋಗಿದ್ದಾನೆ. ತೀವ್ರವಾದ ಗಾಯದಿಂದಾಗಿ ಆ ಬಾಲಕಿ ಮೃತಪಟ್ಟಿದ್ದು, ಆಕೆಯ ಶವ ಚರಂಡಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯ ಕುರಿತು ವಿವರಗಳನ್ನು ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಆಯುಷ್ ವಿಕ್ರಮ್ ಸಿಂಗ್, ಶುಕ್ರವಾರ ತಡರಾತ್ರಿ 20 ವರ್ಷದ ಮೋಯಿಶ್ ಎಂಬಾತ ಮೀರತ್‌ನ ಸದರ್ ಪ್ರದೇಶದಲ್ಲಿ ಮನೆಯಿಂದ ಹೊರಗೆ ತನ್ನ ಕುಟುಂಬದ ಸದಸ್ಯರೊಂದಿಗೆ ಮಲಗಿದ್ದ 2 ವರ್ಷದ ಬಾಲಕಿಯನ್ನು ತನ್ನ ಮನೆಯ ಹೊರಗಿನಿಂದ ಅಪಹರಿಸಿದ ಘಟನೆ ನಡೆದಿದೆ. ಕುಟುಂಬದ ಸದಸ್ಯರು ಎಚ್ಚರಗೊಂಡ ನಂತರ, ತಮ್ಮ ಮನೆಯ ಮಗು ಇಲ್ಲವೆಂದು ಗೊತ್ತಾಗಿದೆ. ತಕ್ಷಣ ಆರೋಪಿಯನ್ನು ಹಿಂಬಾಲಿಸಿ ಹೋಗಿದ್ದಾರೆ. ಆದರೆ, ಆತ ಆ ಬಾಲಕಿಯನ್ನು ಚರಂಡಿಗೆ ಎಸೆದು ಸ್ಥಳದಿಂದ ಪರಾರಿಯಾಗಿದ್ದಾನೆ. ಇದರಿಂದ ಮಗು ಸಾವನ್ನಪ್ಪಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೊಲ್ಕತ್ತಾ ವೈದ್ಯೆಯ ಅತ್ಯಾಚಾರ, ಕೊಲೆ ಕೇಸ್; ಮಮತಾ ಬ್ಯಾನರ್ಜಿ ರಾಜೀನಾಮೆಗೆ ಬಿಜೆಪಿ ಆಗ್ರಹ

ಇದಲ್ಲದೆ, ಆರೋಪಿಯನ್ನು ಬಂಧಿಸಲಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ಎಸ್ಪಿ ಆಯುಷ್ ಸಿಂಗ್ ಹೇಳಿದ್ದಾರೆ. ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಉತ್ತರ ಪ್ರದೇಶವನ್ನು ಬೆಚ್ಚಿ ಬೀಳಿಸಿದ 2 ಅತ್ಯಾಚಾರ ಪ್ರಕರಣಗಳ ಬೆನ್ನಲ್ಲೇ ಈ ಪ್ರಕರಣ ಬೆಳಕಿಗೆ ಬಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us