AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ಮಕ್ಕಳನ್ನು ಮನೆಯಲ್ಲಿ ಬಿಟ್ಟು ತಾಯಿ ಪರಾರಿ; ಅಮ್ಮ ಬೇಕೆಂದು ಅಳುತ್ತಾ ಪೊಲೀಸ್ ಠಾಣೆಗೆ ಬಂದ ಮಕ್ಕಳು

ಉತ್ತರ ಪ್ರದೇಶದ ಕನೌಜ್​ನಲ್ಲಿ ತಾಯಿಯೊಬ್ಬಳು ತನ್ನ 7 ಮಕ್ಕಳನ್ನು ಬಿಟ್ಟು ಓಡಿ ಹೋಗಿದ್ದಾಳೆ. ಆಕೆಯ ಕೃತ್ಯಕ್ಕೆ ಗ್ರಾಮಸ್ಥರೂ ಬೆಚ್ಚಿಬಿದ್ದಿದ್ದಾರೆ. ಮಹಿಳೆಗೆ ಒಂದು ಹಾಲು ಕುಡಿಯುವ ಹೆಣ್ಣು ಮಗು ಕೂಡ ಇದ್ದು, ಎಲ್ಲಾ ಮಕ್ಕಳು ತಮ್ಮ ತಾಯಿಗಾಗಿ ಕಾಯುತ್ತಿದ್ದಾರೆ.

7 ಮಕ್ಕಳನ್ನು ಮನೆಯಲ್ಲಿ ಬಿಟ್ಟು ತಾಯಿ ಪರಾರಿ; ಅಮ್ಮ ಬೇಕೆಂದು ಅಳುತ್ತಾ ಪೊಲೀಸ್ ಠಾಣೆಗೆ ಬಂದ ಮಕ್ಕಳು
7 ಮಕ್ಕಳನ್ನು ಮನೆಯಲ್ಲಿ ಬಿಟ್ಟು ತಾಯಿ ಪರಾರಿ
ಸುಷ್ಮಾ ಚಕ್ರೆ
|

Updated on: Oct 23, 2024 | 8:55 PM

Share

ಕನೌಜ್: ಉತ್ತರ ಪ್ರದೇಶದ ಕನೌಜ್ ಜಿಲ್ಲೆಯಲ್ಲಿ ತಾಯಿಯೊಬ್ಬಳು ತನ್ನ 7 ಮಕ್ಕಳನ್ನು ದಿಢೀರನೆ ಬಿಟ್ಟು ದೂರ ಹೋಗಿದ್ದಾಳೆ. ಮಹಿಳೆಯ 7 ಮಕ್ಕಳಲ್ಲಿ ಒಂದು ಪುಟ್ಟ ಹೆಣ್ಣು ಮಗು ಕೂಡ ಸೇರಿದೆ. ಆ ಮಗು ತುಂಬಾ ಅಳುತ್ತಿದೆ. ಚಿಕ್ಕ ಮಗು ತನ್ನ ತಾಯಿಯಿಂದ ದೂರವಿರುವುದು ತುಂಬಾ ಕಷ್ಟ. ಅದೇ ಗ್ರಾಮದಲ್ಲಿ ವಾಸವಾಗಿರುವ ಇನ್ನೋರ್ವ ಮಹಿಳೆ ಆಕೆಯನ್ನು ವೇಶ್ಯಾವಾಟಿಕೆ ದಂಧೆಯಲ್ಲಿ ಸೇರಿಸಿಕೊಂಡಿದ್ದಾಳೆ ಎಂದು ಆ ಮಹಿಳೆಯ ಸೋದರ ಮಾವ ಆರೋಪಿಸಿದ್ದಾರೆ. ಈ ಬಗ್ಗೆ ಮಹಿಳೆಯ ಸೋದರ ಮಾವ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಪೊಲೀಸರು ಮಹಿಳೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಗುರ್ಸಹೈಗಂಜ್‌ನ ಹಳ್ಳಿಯಲ್ಲಿ ವಾಸವಾಗಿರುವ ವ್ಯಕ್ತಿಯೊಬ್ಬರು ಸುಮಾರು 15 ವರ್ಷಗಳ ಹಿಂದೆ ವಿವಾಹವಾಗಿದ್ದರು. ಕುಟುಂಬವನ್ನು ಸಾಕಲು ದುಡಿಯುವ ಸಲುವಾಗಿ ಅವರು ಆಗಾಗ ಮನೆಯಿಂದ ದೂರ ಉಳಿಯುತ್ತಿದ್ದರು. ಅವರ ಹೆಂಡತಿ ಮನೆಯಲ್ಲಿಯೇ ಇರುತ್ತಿದ್ದಳು. ಅವರಿಗೆ 7 ಮಕ್ಕಳಿದ್ದರು. ಆ ವ್ಯಕ್ತಿಯ ಕುಟುಂಬಸ್ಥರ ಪ್ರಕಾರ ಆತನ ಹೆಂಡತಿ ಬೇರೊಬ್ಬನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಈ ಕಾರಣದಿಂದ ಈ ಹಿಂದೆ ಹಲವು ಬಾರಿ ಮನೆ ಬಿಟ್ಟು ಓಡಿ ಹೋಗಿದ್ದಳು. ಈ ಬಾರಿ ಅವಳು ಮತ್ತೆ ಎರಡು ದಿನಗಳ ಹಿಂದೆ ಇದ್ದಕ್ಕಿದ್ದಂತೆ ಎಲ್ಲೋ ಹೋಗಿದ್ದಾಳೆ. ಇನ್ನೂ ಮನೆಗೆ ವಾಪಾಸ್ ಬಂದಿಲ್ಲ. ಇದರಿಂದ ಕಂಗಾಲಾಗಿ ಅಳುತ್ತಿರುವ ಆಕೆಯ 7 ಮಕ್ಕಳು ತಮ್ಮ ಅಮ್ಮನನ್ನು ಹುಡುಕಿಕೊಡಿ ಎಂದು ಪೊಲೀಸ್ ಠಾಣೆಗೆ ಹೋಗಿದ್ದಾರೆ.

ಇದನ್ನೂ ಓದಿ: ಈ ಗ್ರಾಮದಲ್ಲಿ ರಾತ್ರಿ ಮನೆಯಿಂದ ಹೊರಗೆ ಕಾಲಿಟ್ಟರೆ ನಿಗೂಢ ಹಾವಿನ ಕಾಟ!

ಮನೆಯಲ್ಲಿ ತಾಯಿ ಇಲ್ಲದಿರುವುದನ್ನು ಕಂಡು ಆಕೆಯ ಪುಟ್ಟ ಮಕ್ಕಳು ಅಳತೊಡಗಿದ್ದಾರೆ. ಚಿಕ್ಕ ಹುಡುಗಿ ನಿರಂತರವಾಗಿ ಅಳುತ್ತಿದ್ದಳು. ಇದನ್ನು ನೋಡಿದ ಸುತ್ತಮುತ್ತಲಿನವರು ತಾಯಿಯ ಕ್ರೌರ್ಯದ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದರು. ಆಕೆಯ ಬಗ್ಗೆ ಹುಡುಕಾಟ ನಡೆಸಿದ ನಂತರ ಕುಟುಂಬಸ್ಥರು ಆ ಮಹಿಳೆ ಪತ್ತೆಯಾಗದಿದ್ದಾಗ ಮಕ್ಕಳೊಂದಿಗೆ ಪೊಲೀಸರನ್ನು ಸಂಪರ್ಕಿಸಿದ್ದಾರೆ.

ಆ ಮಹಿಳೆಯನ್ನು ವೇಶ್ಯಾವಾಟಿಕೆಗೆ ತಳ್ಳಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಸಂಬಂಧ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಿಳೆಯ ಪತ್ತೆಗೆ ತಂಡವನ್ನು ರಚಿಸಲಾಗಿದೆ. ಆ ಮಹಿಳೆಯ ಮಕ್ಕಳು ಇನ್ನೂ ತಮ್ಮ ತಾಯಿಗಾಗಿ ಮನೆಯ ಬಾಗಿಲನ್ನು ದಿಟ್ಟಿಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ