AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ಮಕ್ಕಳನ್ನು ಮನೆಯಲ್ಲಿ ಬಿಟ್ಟು ತಾಯಿ ಪರಾರಿ; ಅಮ್ಮ ಬೇಕೆಂದು ಅಳುತ್ತಾ ಪೊಲೀಸ್ ಠಾಣೆಗೆ ಬಂದ ಮಕ್ಕಳು

ಉತ್ತರ ಪ್ರದೇಶದ ಕನೌಜ್​ನಲ್ಲಿ ತಾಯಿಯೊಬ್ಬಳು ತನ್ನ 7 ಮಕ್ಕಳನ್ನು ಬಿಟ್ಟು ಓಡಿ ಹೋಗಿದ್ದಾಳೆ. ಆಕೆಯ ಕೃತ್ಯಕ್ಕೆ ಗ್ರಾಮಸ್ಥರೂ ಬೆಚ್ಚಿಬಿದ್ದಿದ್ದಾರೆ. ಮಹಿಳೆಗೆ ಒಂದು ಹಾಲು ಕುಡಿಯುವ ಹೆಣ್ಣು ಮಗು ಕೂಡ ಇದ್ದು, ಎಲ್ಲಾ ಮಕ್ಕಳು ತಮ್ಮ ತಾಯಿಗಾಗಿ ಕಾಯುತ್ತಿದ್ದಾರೆ.

7 ಮಕ್ಕಳನ್ನು ಮನೆಯಲ್ಲಿ ಬಿಟ್ಟು ತಾಯಿ ಪರಾರಿ; ಅಮ್ಮ ಬೇಕೆಂದು ಅಳುತ್ತಾ ಪೊಲೀಸ್ ಠಾಣೆಗೆ ಬಂದ ಮಕ್ಕಳು
7 ಮಕ್ಕಳನ್ನು ಮನೆಯಲ್ಲಿ ಬಿಟ್ಟು ತಾಯಿ ಪರಾರಿ
ಸುಷ್ಮಾ ಚಕ್ರೆ
|

Updated on: Oct 23, 2024 | 8:55 PM

Share

ಕನೌಜ್: ಉತ್ತರ ಪ್ರದೇಶದ ಕನೌಜ್ ಜಿಲ್ಲೆಯಲ್ಲಿ ತಾಯಿಯೊಬ್ಬಳು ತನ್ನ 7 ಮಕ್ಕಳನ್ನು ದಿಢೀರನೆ ಬಿಟ್ಟು ದೂರ ಹೋಗಿದ್ದಾಳೆ. ಮಹಿಳೆಯ 7 ಮಕ್ಕಳಲ್ಲಿ ಒಂದು ಪುಟ್ಟ ಹೆಣ್ಣು ಮಗು ಕೂಡ ಸೇರಿದೆ. ಆ ಮಗು ತುಂಬಾ ಅಳುತ್ತಿದೆ. ಚಿಕ್ಕ ಮಗು ತನ್ನ ತಾಯಿಯಿಂದ ದೂರವಿರುವುದು ತುಂಬಾ ಕಷ್ಟ. ಅದೇ ಗ್ರಾಮದಲ್ಲಿ ವಾಸವಾಗಿರುವ ಇನ್ನೋರ್ವ ಮಹಿಳೆ ಆಕೆಯನ್ನು ವೇಶ್ಯಾವಾಟಿಕೆ ದಂಧೆಯಲ್ಲಿ ಸೇರಿಸಿಕೊಂಡಿದ್ದಾಳೆ ಎಂದು ಆ ಮಹಿಳೆಯ ಸೋದರ ಮಾವ ಆರೋಪಿಸಿದ್ದಾರೆ. ಈ ಬಗ್ಗೆ ಮಹಿಳೆಯ ಸೋದರ ಮಾವ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಪೊಲೀಸರು ಮಹಿಳೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಗುರ್ಸಹೈಗಂಜ್‌ನ ಹಳ್ಳಿಯಲ್ಲಿ ವಾಸವಾಗಿರುವ ವ್ಯಕ್ತಿಯೊಬ್ಬರು ಸುಮಾರು 15 ವರ್ಷಗಳ ಹಿಂದೆ ವಿವಾಹವಾಗಿದ್ದರು. ಕುಟುಂಬವನ್ನು ಸಾಕಲು ದುಡಿಯುವ ಸಲುವಾಗಿ ಅವರು ಆಗಾಗ ಮನೆಯಿಂದ ದೂರ ಉಳಿಯುತ್ತಿದ್ದರು. ಅವರ ಹೆಂಡತಿ ಮನೆಯಲ್ಲಿಯೇ ಇರುತ್ತಿದ್ದಳು. ಅವರಿಗೆ 7 ಮಕ್ಕಳಿದ್ದರು. ಆ ವ್ಯಕ್ತಿಯ ಕುಟುಂಬಸ್ಥರ ಪ್ರಕಾರ ಆತನ ಹೆಂಡತಿ ಬೇರೊಬ್ಬನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಈ ಕಾರಣದಿಂದ ಈ ಹಿಂದೆ ಹಲವು ಬಾರಿ ಮನೆ ಬಿಟ್ಟು ಓಡಿ ಹೋಗಿದ್ದಳು. ಈ ಬಾರಿ ಅವಳು ಮತ್ತೆ ಎರಡು ದಿನಗಳ ಹಿಂದೆ ಇದ್ದಕ್ಕಿದ್ದಂತೆ ಎಲ್ಲೋ ಹೋಗಿದ್ದಾಳೆ. ಇನ್ನೂ ಮನೆಗೆ ವಾಪಾಸ್ ಬಂದಿಲ್ಲ. ಇದರಿಂದ ಕಂಗಾಲಾಗಿ ಅಳುತ್ತಿರುವ ಆಕೆಯ 7 ಮಕ್ಕಳು ತಮ್ಮ ಅಮ್ಮನನ್ನು ಹುಡುಕಿಕೊಡಿ ಎಂದು ಪೊಲೀಸ್ ಠಾಣೆಗೆ ಹೋಗಿದ್ದಾರೆ.

ಇದನ್ನೂ ಓದಿ: ಈ ಗ್ರಾಮದಲ್ಲಿ ರಾತ್ರಿ ಮನೆಯಿಂದ ಹೊರಗೆ ಕಾಲಿಟ್ಟರೆ ನಿಗೂಢ ಹಾವಿನ ಕಾಟ!

ಮನೆಯಲ್ಲಿ ತಾಯಿ ಇಲ್ಲದಿರುವುದನ್ನು ಕಂಡು ಆಕೆಯ ಪುಟ್ಟ ಮಕ್ಕಳು ಅಳತೊಡಗಿದ್ದಾರೆ. ಚಿಕ್ಕ ಹುಡುಗಿ ನಿರಂತರವಾಗಿ ಅಳುತ್ತಿದ್ದಳು. ಇದನ್ನು ನೋಡಿದ ಸುತ್ತಮುತ್ತಲಿನವರು ತಾಯಿಯ ಕ್ರೌರ್ಯದ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದರು. ಆಕೆಯ ಬಗ್ಗೆ ಹುಡುಕಾಟ ನಡೆಸಿದ ನಂತರ ಕುಟುಂಬಸ್ಥರು ಆ ಮಹಿಳೆ ಪತ್ತೆಯಾಗದಿದ್ದಾಗ ಮಕ್ಕಳೊಂದಿಗೆ ಪೊಲೀಸರನ್ನು ಸಂಪರ್ಕಿಸಿದ್ದಾರೆ.

ಆ ಮಹಿಳೆಯನ್ನು ವೇಶ್ಯಾವಾಟಿಕೆಗೆ ತಳ್ಳಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಸಂಬಂಧ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಿಳೆಯ ಪತ್ತೆಗೆ ತಂಡವನ್ನು ರಚಿಸಲಾಗಿದೆ. ಆ ಮಹಿಳೆಯ ಮಕ್ಕಳು ಇನ್ನೂ ತಮ್ಮ ತಾಯಿಗಾಗಿ ಮನೆಯ ಬಾಗಿಲನ್ನು ದಿಟ್ಟಿಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು