AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರ್ಸ್ ಮೇಲೆ ಸಾಮೂಹಿಕ ಅತ್ಯಾಚಾರ; ಗುಪ್ತಾಂಗಕ್ಕೆ ಕೋಲು, ಮೆಣಸಿನ ಪುಡಿ ತುರುಕಿ ಚಿತ್ರಹಿಂಸೆ

ಉತ್ತರ ಪ್ರದೇಶದಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಜಲೌನ್‌ನಲ್ಲಿ ನರ್ಸ್ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಆಕೆ ಗುಪ್ತಾಂಗದಲ್ಲಿ ಕೋಲು ಮತ್ತು ಮೆಣಸಿನ ಪುಡಿಯನ್ನು ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇಂದು ಬೆಳಗ್ಗೆ ಚುರ್ಖಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಕೆಲಸಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.

ನರ್ಸ್ ಮೇಲೆ ಸಾಮೂಹಿಕ ಅತ್ಯಾಚಾರ; ಗುಪ್ತಾಂಗಕ್ಕೆ ಕೋಲು, ಮೆಣಸಿನ ಪುಡಿ ತುರುಕಿ ಚಿತ್ರಹಿಂಸೆ
ಅತ್ಯಾಚಾರ
ಸುಷ್ಮಾ ಚಕ್ರೆ
|

Updated on: Nov 28, 2024 | 10:29 PM

Share

ನೊಯ್ಡಾ: ಉತ್ತರ ಪ್ರದೇಶದ ಜಲೌನ್‌ನಲ್ಲಿ ನಡೆದ ಭೀಕರ ಘಟನೆಯೊಂದರಲ್ಲಿ ನರ್ಸ್‌ ಒಬ್ಬರು ತನ್ನ ಮೇಲೆ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆಂದು ಆರೋಪಿಸಿದ್ದಾರೆ. ಇತರ ನಾಲ್ವರು ತನ್ನನ್ನು ಹೊಡೆದಿದ್ದಾರೆ ಎಂದಿದ್ದಾರೆ. ಅತ್ಯಾಚಾರಕ್ಕೆ ಒಳಗಾದ ಮಹಿಳೆಯ ಕುಟುಂಬಸ್ಥರು ಈ ಬಗ್ಗೆ ವಿವರ ನೀಡಿದ್ದು, ಅತ್ಯಾಚಾರಿಗಳು ಆಕೆಯ ಖಾಸಗಿ ಭಾಗಗಳಿಗೆ ಕೋಲು ಮತ್ತು ಮೆಣಸಿನ ಪುಡಿಯನ್ನು ತುರುಕಿ ಹಿಂಸೆ ನೀಡಿದ್ದಾರೆ. ಇದಕ್ಕೂ ಮುಂಚೆ ಅತ್ಯಾಚಾರ ನಡೆಸಿದ್ದಾರೆ ಎಂದಿದ್ದಾರೆ.

ಇಂದು ಬೆಳಗ್ಗೆ ಚುರ್ಖಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಕೆಲಸಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ನರ್ಸ್​ ಅನ್ನು ಅಡ್ಡಗಟ್ಟಿ, ಆಕೆಯನ್ನು ಪೊದೆಗೆ ಎಳೆದೊಯ್ದು ಹಲ್ಲೆ ನಡೆಸಿದ್ದಾರೆ ಎಂದು ಆಕೆಯ ಪತಿ ವಿವರಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಹಿಂದೆ ಮಹಿಳಾ ಎಸ್‌ಪಿಜಿ ಕಮಾಂಡೋ ಇರುವ ಫೋಟೋ ವೈರಲ್; ಅಸಲಿ ಸಂಗತಿ ಇಲ್ಲಿದೆ

ಆದರೆ, ಪೊಲೀಸರು ಬೇರೆಯೇ ಹೇಳಿಕೆ ನೀಡಿದ್ದಾರೆ. ವರದಿಗಳ ಪ್ರಕಾರ, ಆ ಮಹಿಳೆಯು ತನ್ನ ಹಳ್ಳಿಯ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಳು. ವಿವಾದದ ಸಂದರ್ಭದಲ್ಲಿ ವ್ಯಕ್ತಿ ಮತ್ತು ಆತನ ಕುಟುಂಬದವರು ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಹಂತದಲ್ಲಿ ಸಾಮೂಹಿಕ ಅತ್ಯಾಚಾರ ನಡೆದ ಬಗ್ಗೆ ಯಾವುದೇ ಪುರಾವೆಗಳಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣವು ಸುತ್ತಮುತ್ತಲೂ ಆಕ್ರೋಶವನ್ನು ಹುಟ್ಟುಹಾಕಿದೆ. ಕಾರ್ಯಕರ್ತರು ಸತ್ಯವನ್ನು ಬಹಿರಂಗಪಡಿಸಲು ಸಂಪೂರ್ಣ ಮತ್ತು ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ