AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ಅಕ್ರಮವಾಗಿ ನೆಲೆಸಿದ ನಾಲ್ವರು ಚೀನಾ ಪ್ರಜೆಗಳನ್ನು ಬಂಧಿಸಿದ ಉತ್ತರ ಪ್ರದೇಶದ ಪೊಲೀಸರು!

ಉತ್ತರ ಪ್ರದೇಶ ಪೊಲೀಸರದ ವಿಶೇಷ ಕಾರ್ಯಪಡೆ ಹವಾಲಾ ದಂಧೆ ಕುರಿತು ತನಿಖೆ ನಡೆಸುತ್ತಿದ್ದು ಭಾರತದಲ್ಲಿ ಅಕ್ರಮವಾಗಿ ತಂಗಿದ್ದ ನಾಲ್ವರು ಚೀನಾ ಪ್ರಜೆಗಳನ್ನು ಬಂಧಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

Uttar Pradesh: ಅಕ್ರಮವಾಗಿ ನೆಲೆಸಿದ ನಾಲ್ವರು ಚೀನಾ ಪ್ರಜೆಗಳನ್ನು ಬಂಧಿಸಿದ ಉತ್ತರ ಪ್ರದೇಶದ ಪೊಲೀಸರು!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 14, 2022 | 3:05 PM

Share

ನೋಯ್ಡಾ: ಚೀನಾದೊಂದಿಗೆ ನಂಟು ಹೊಂದಿರುವ ನಾಲ್ವರು ಚೀನಾ ಪ್ರಜೆಗಳನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ.  ಉತ್ತರ ಪ್ರದೇಶ ಪೊಲೀಸರದ ವಿಶೇಷ ಕಾರ್ಯಪಡೆ ಹವಾಲಾ ದಂಧೆ ಕುರಿತು ತನಿಖೆ ನಡೆಸುತ್ತಿದ್ದು ಭಾರತದಲ್ಲಿ ಅಕ್ರಮವಾಗಿ ತಂಗಿದ್ದ ನಾಲ್ವರು ಚೀನಾ ಪ್ರಜೆಗಳನ್ನು ಬಂಧಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಬಂಧಿತರನ್ನು ಜಾನ್ಸನ್ ಅಲಿಯಾಸ್ ಹಿ ಜುವಾಂಗ್, ರೈನ್ ಅಲಿಯಾಸ್ ರೆನ್ ಚಾವೊ, ಝೆಂಗ್ ಹಾವೋಝೆ ಅಲಿಯಾಸ್ ಜಾನ್ ಮತ್ತು ಜೆಂಗ್ ಡೈ ಎಂದು ಗುರುತಿಸಲಾಗಿದೆ.  ನಾಲ್ವರು ಆರೋಪಿಗಳು 2020 ರಿಂದ ಮಾನ್ಯವಿಲ್ಲದ ವೀಸಾದಿಂದ ಗ್ರೇಟರ್ ನೋಯ್ಡಾದಲ್ಲಿ ನೆಲೆಸಿದ್ದಾರೆ ಮತ್ತು ಚೀನಾದ ಪ್ರಜೆ ಕ್ಸು ಫೀ ಅಲಿಯಾಸ್ ಕೆಲಯ್ (36) ನೊಂದಿಗೆ ಸಂಪರ್ಕ ಹೊಂದಿದ್ದಾರೆ, ಜೂನ್ 13 ರಂದು ಇದೇ ಆರೋಪದ ಮೇಲೆ ಆತನ ಭಾರತೀಯ ಗೆಳತಿ ಪೆಟೆಕ್ರಿನುವೊ (22) ಜೊತೆಗೆ ಬಂಧಿಸಲಾಯಿತು.

ಮಾನ್ಯ ಇಲ್ಲದ ವೀಸಾ  ಹೊಂದಿರುವ  ಈ ನಾಲ್ಕು ಚೀನೀ ಪ್ರಜೆಗಳನ್ನು ಎಸ್‌ಟಿಎಫ್ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಇವರಿಗೂ ಈ  ಹವಾಲಾ ಪ್ರಕರಣಕ್ಕೂ ಲಿಂಕ್ ಇದೆ ಎನ್ನಲಾಗುತ್ತಿದೆ.  ವೀಸಾ ಅವಧಿ ಮುಗಿದಿದ್ದರೂ ಭಾರತದಲ್ಲಿ ತಂಗಿದ್ದ ಆರೋಪದ ಮೇಲೆ ಮಹಿಳೆ ಸೇರಿದಂತೆ 14 ಚೀನಾದ ಪ್ರಜೆಗಳನ್ನು ನೋಯ್ಡಾ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಈ ಆರೋಪಿಗಳು ಮೊಬೈಲ್ ಫೋನ್ ಕಂಪನಿಯಲ್ಲಿ ಕೆಲಸ ಮಾಡುತ್ತುದ್ದರು ಆದರೆ ಅವರ ವೀಸಾಗಳು 2020 ರಲ್ಲಿ ಮುಕ್ತಾಯಗೊಂಡಿದೆ. 14 ಚೀನೀ ಪ್ರಜೆಗಳನ್ನು ದೆಹಲಿಯ ಕರಾಗೃಹಕ್ಕೆ  ಕಳುಹಿಸಲಾಗಿದೆ. ಅಲ್ಲಿಂದ ಅವರನ್ನು  ಗಡೀಪಾರು ಮಾಡುವ ಪ್ರಕ್ರಿಯೆ ನಡೆಯುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ
Image
International Yoga Day 2022: ಮಾನವೀಯತೆಗೆ ಭಾರತ ನೀಡಿದ ಕೊಡುಗೆಯೇ ಯೋಗ; ರಾಷ್ಟ್ರಪತಿ ರಾಮನಾಥ ಕೋವಿಂದ್ ಬಣ್ಣನೆ
Image
International Yoga Day 2022: ಗಾರ್ಡಿಯನ್ ರಿಂಗ್ ಮೂಲಕ ವಿವಿಧ ದೇಶಗಳ ಯೋಗ ಪ್ರಸಾರ; 5 ಪ್ರಮುಖ ಅಂಶಗಳು ಇಲ್ಲಿವೆ
Image
Thyroid Disease and Yoga: ಈ ಯೋಗಾಸನಗಳನ್ನು ಮಾಡಿದರೆ ಥೈರಾಯ್ಡ್ ಸಮಸ್ಯೆಗೆ ಪರಿಹಾರ ಸಿಗುತ್ತದೆ
Image
International Yoga Day 2022: ಯಾವ ರಾಶಿಯವರು ಯಾವ ಯೋಗಾಸನಗಳನ್ನು ಮಾಡಬೇಕು? ಇಲ್ಲಿದೆ ಮಾಹಿತಿ
ಬಿಹಾರದ ಮೂಲಕ ನೇಪಾಳಕ್ಕೆ ಹೋಗಲು ಪ್ರಯತ್ನಿಸುತ್ತಿದ್ದ ಇನ್ನಿಬ್ಬರು ಚೀನೀಯರನ್ನು  ಬಂಧಿಸಲಾಯಿತು. ಇವರು  ನಕಲಿ ಮೊಬೈಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು ಮತ್ತು ಗ್ರೇಟರ್ ನೋಯ್ಡಾ ಗ್ರಾಮದಲ್ಲಿ ಅಕ್ರಮ ಐಷಾರಾಮಿ ರೆಸ್ಟ್ರೋ-ಬಾರ್ ಅನ್ನು ನಡೆಸುತ್ತಿದ್ದರು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

Published On - 3:03 pm, Thu, 14 July 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ