AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ ಅತ್ಯಾಚಾರ ಆರೋಪಿಯ ಬೆತ್ತಲೆ ಮೆರವಣಿಗೆ, ಎತ್ತಿನ ಗಾಡಿಗೆ ಕಟ್ಟಿ ಹಲ್ಲೆ

ಉತ್ತರ ಪ್ರದೇಶದ ಬಹ್ರೈಚ್​​​ನಲ್ಲಿ ಅತ್ಯಾಚಾರ ಆರೋಪಿಗೆ ಊರಿನವರೇ ಸೇರಿ ಬುದ್ಧಿ ಕಲಿಸಿದ್ದಾರೆ. 22 ವರ್ಷದ ಯುವಕನ ದೇಹವನ್ನು ಬೆತ್ತಲೆಯಾಗಿಸಿ ಎತ್ತಿನ ಗಾಡಿಗೆ ಕಟ್ಟಿ ಹಾಕಲಾಗಿದೆ. ಹಲವಾರು ಪುರುಷರು ಮತ್ತು ಮಹಿಳೆಯರು ಛೂ ಬಿಟ್ಟಿರುವುದನ್ನು ಮತ್ತು ಇತರರು ಥಳಿಸಲು ಹೇಳುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ. ಈ ವಿಡಿಯೋ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಉತ್ತರ ಪ್ರದೇಶದಲ್ಲಿ ಅತ್ಯಾಚಾರ ಆರೋಪಿಯ ಬೆತ್ತಲೆ ಮೆರವಣಿಗೆ, ಎತ್ತಿನ ಗಾಡಿಗೆ ಕಟ್ಟಿ ಹಲ್ಲೆ
Arrest
Follow us
ಸುಷ್ಮಾ ಚಕ್ರೆ
|

Updated on: Apr 18, 2025 | 3:56 PM

ಬಹ್ರೈಚ್, ಏಪ್ರಿಲ್ 18: ಉತ್ತರ ಪ್ರದೇಶದ ಬಹ್ರೈಚ್​​ನ (Bahraich) ವಿಶೇಷ್‌ಗಂಜ್ ಪ್ರದೇಶದಲ್ಲಿ ಅತ್ಯಾಚಾರ ನಡೆಸಿದ ಆರೋಪಿಯನ್ನು ಎತ್ತಿನ ಗಾಡಿಗೆ ಕಟ್ಟಿ, ಸ್ಥಳೀಯರು ಆತನ ಮೇಲೆ ಹಲ್ಲೆ ಮಾಡಿ ಬೆತ್ತಲೆಯಾಗಿ ಮೆರವಣಿಗೆ ಮಾಡಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡಿದ ನಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ವಿಡಿಯೋದಲ್ಲಿ 22 ವರ್ಷದ ಯುವಕನ ದೇಹವನ್ನು ಬೆತ್ತಲೆಯಾಗಿಸಿ, ಎತ್ತಿನ ಗಾಡಿಗೆ ಕಟ್ಟಿ ಹಾಕಲಾಗಿದೆ. ಕೆಲವರು ನಾಯಿಯನ್ನು ಅವನ ಮೇಲೆ ದಾಳಿ ಮಾಡಲು ಪ್ರಚೋದಿಸುತ್ತಿರುವುದನ್ನು ಕೂಡ ವಿಡಿಯೋದಲ್ಲಿ ನೋಡಬಹುದು.

ಗುರುವಾರ ಈ ವೀಡಿಯೊ ವೈರಲ್ ಆದ ನಂತರ ಆತನ ಕುಟುಂಬವು ಸ್ಥಳೀಯ ಪೊಲೀಸರಿಗೆ ದೂರು ನೀಡಿತು. “ಮಹಿಳೆಯೊಬ್ಬರ ಲಿಖಿತ ದೂರಿನ ಆಧಾರದ ಮೇಲೆ, ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್‌ಗಳ ಅಡಿಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಹಲ್ಲೆ ಮತ್ತು ಹಾನಿಗಾಗಿ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ರಮೇಶ್ ಪಾಂಡೆ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಯುವತಿ ಮೇಲೆ ಸಮೂಹಿಕ ಅತ್ಯಾಚಾರ: 24 ಗಂಟೆಗಳಲ್ಲಿ ಮೂವರ ಬಂಧನ

ಇದನ್ನೂ ಓದಿ
Image
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
Image
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
Image
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು
Image
ಮದುವೆ ಮನೆಗಳಲ್ಲಿ ಇನ್ಮುಂದೆ ನೀರಿನ ಪ್ಲಾಸ್ಟಿಕ್ ಬಾಟಲಿ ಬಳಕೆ ಮಾಡುವಂತಿಲ್ಲ

ಏಪ್ರಿಲ್ 3ರಂದು ಹಳ್ಳಿಯ ಬಳಿ ತನ್ನ ಸೋದರ ಮಾವನನ್ನು ಹಗ್ಗದಿಂದ ಕಟ್ಟಿ ಥಳಿಸಲಾಯಿತು ಎಂದು ದೂರುದಾರರು ಆರೋಪಿಸಿದ್ದಾರೆ ಎಂದು ರಮೇಶ್ ಪಾಂಡೆ ಹೇಳಿದ್ದಾರೆ.

“ಈ ಘಟನೆಯಲ್ಲಿ ಎರಡು ವಿಭಿನ್ನ ಸಮುದಾಯಗಳ ವ್ಯಕ್ತಿಗಳು ಭಾಗಿಯಾಗಿದ್ದರೂ, ಕೋಮು ಉದ್ವಿಗ್ನತೆಗೆ ಯಾವುದೇ ಪುರಾವೆಗಳಿಲ್ಲ. “ಆದರೂ, ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ” ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಪಿಲಿಭಿತ್ ಅಭಯಾರಣ್ಯದಲ್ಲಿ ಹೆಬ್ಬಾವನ್ನು ತಿಂದ ಹುಲಿ; ವಿಡಿಯೋ ವೈರಲ್

“ಹಲ್ಲೆಗೆ ಸಂಬಂಧಿಸಿದಂತೆ ಈಗ ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ಅತ್ಯಾಚಾರ ಪ್ರಕರಣ ಮತ್ತು ಗುಂಪು ಹಿಂಸಾಚಾರದ ಎರಡು ವಿಷಯದಲ್ಲೂ ತನಿಖೆ ನಡೆಯುತ್ತಿದೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು