AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಆಸ್ತಿಗಾಗಿ ಅಪ್ಪ, ತಮ್ಮನನ್ನೇ ಶೂಟ್ ಮಾಡಿ ಕೊಂದ ನಿವೃತ್ತ ಸೇನಾಧಿಕಾರಿ!

ಶೂಟ್ ಮಾಡಿ ಕೊಂದ ಆರೋಪಿಯನ್ನು ನಿವೃತ್ತ ಸೇನಾಧಿಕಾರಿ ಮನೋಜ್ ಕುಮಾರ್ ಸಿಂಗ್ (45) ಎಂದು ಗುರುತಿಸಲಾಗಿದ್ದು, ಮೃತರನ್ನು ಶಿವನಾರಾಯಣ (70), ಮತ್ತು ಮನೀಶ್ ಸಿಂಗ್ (30) ಎಂದು ಗುರುತಿಸಲಾಗಿದೆ.

Murder: ಆಸ್ತಿಗಾಗಿ ಅಪ್ಪ, ತಮ್ಮನನ್ನೇ ಶೂಟ್ ಮಾಡಿ ಕೊಂದ ನಿವೃತ್ತ ಸೇನಾಧಿಕಾರಿ!
ಕೊಲೆImage Credit source: times now
TV9 Web
| Edited By: |

Updated on:Jun 23, 2022 | 9:51 AM

Share

ಲಕ್ನೋ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವಾದ ವಿವಾದ ಉಂಟಾಗಿ, ನಿವೃತ್ತ ಸೇನಾಧಿಕಾರಿಯೊಬ್ಬರು ತನ್ನ ತಂದೆ ಮತ್ತು ತಮ್ಮನನ್ನು ಶೂಟ್ ಮಾಡಿ (Murder) ಕೊಂದಿದ್ದಾರೆ. ತನ್ನ ಮನೆಯಲ್ಲಿ ಇಬ್ಬರನ್ನು ಕೊಂದ ಆರೋಪದ ಮೇಲೆ ನಿವೃತ್ತ ಸೇನಾ ಅಧಿಕಾರಿಯನ್ನು ಬಂಧಿಸಲಾಗಿದೆ. ಮಂಗಳವಾರ ರಾತ್ರಿ ಉತ್ತರ ಪ್ರದೇಶದ (Uttar Pradesh) ಅಜಂಗಢ ಜಿಲ್ಲೆಯ ಕಪ್ತಂಗಂಜ್ ಪ್ರದೇಶದ ಧಂಧರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಶೂಟ್ ಮಾಡಿ ಕೊಂದ ಆರೋಪಿಯನ್ನು ನಿವೃತ್ತ ಸೇನಾಧಿಕಾರಿ ಮನೋಜ್ ಕುಮಾರ್ ಸಿಂಗ್ (45) ಎಂದು ಗುರುತಿಸಲಾಗಿದ್ದು, ಮೃತರನ್ನು ಶಿವನಾರಾಯಣ (70), ಮತ್ತು ಮನೀಶ್ ಸಿಂಗ್ (30) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಮನೋಜ್ ಕುಮಾರ್ ಸಿಂಗ್ ಅವರ ತಂದೆ ಶಿವನಾರಾಯಣ ಅವರ ಆಸ್ತಿ ವಿವರ ಮತ್ತು ಕೃಷಿಯಿಂದ ಪಡೆದ ಹಣದ ಬಗ್ಗೆ ಕೇಳಿದ್ದರು. ಈ ವೇಳೆ ಚರ್ಚೆಯು ವಾದಕ್ಕೆ ತಿರುಗಿತು. ಆಗ ಕೋಪದಿಂದ ಮನೋಜ್ ಸಿಂಗ್ ತನ್ನ ಅಪ್ಪ ಮತ್ತು ತಮ್ಮನಿಗೆ ಗುಂಡು ಹಾರಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: Murder: ನಿಮ್ಮ ಗಂಡನನ್ನು ಕೊಲ್ಲುವುದು ಹೇಗೆ? ಕಾದಂಬರಿ ಬರೆದು ತನ್ನ ಪತಿಯನ್ನೇ ಕೊಂದ ಲೇಖಕಿಗೆ ಜೀವಾವಧಿ ಶಿಕ್ಷೆ

ಇದನ್ನೂ ಓದಿ
Image
ಅಪರಿಚಿತ ಮಹಿಳೆಯರಿಬ್ಬರ ಮೃತದೇಹ ಪತ್ತೆ ಪ್ರಕರಣ: ಸುಳಿವು ಕೊಟ್ಟವರಿಗೆ ಮಂಡ್ಯ ಪೊಲೀಸರಿಂದ 1 ಲಕ್ಷ ಬಹುಮಾನ
Image
ಕೇವಲ 50ರೂ.ಗಾಗಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ: ಸ್ನೇಹಿತನಿಂದಲೇ ಸ್ನೇಹಿತನಿಗೆ ಚಾಕುವಿನಿಂದ ಇರಿದು ಎಸ್ಕೇಪ್
Image
Crime News: ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಅತ್ಯಾಚಾರ ಪ್ರಕರಣ ಬೆಳಕಿಗೆ, ಸೋದರಮಾವ ಅರೆಸ್ಟ್

ಶಿವನಾರಾಯಣ ಮತ್ತು ಮನೋಜ್ ಸಿಂಗ್ ನಡುವೆ ವಾಗ್ವಾದ ನಡೆದಾಗ ಮನೀಶ್ ಕೂಡ ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು, ಕೆರಳಿದ ಮನೋಜ್ ಸಿಂಗ್ ಏಕಾಏಕಿ ತನ್ನ ಬಳಿ ಇದ್ದ ಲೈಸನ್ಸ್ ಪಡೆದ ಪಿಸ್ತೂಲ್ ತೆಗೆದು ತಂದೆ ಶಿವನಾರಾಯಣನಿಗೆ ಗುಂಡು ಹಾರಿಸಿದ್ದಾರೆ. ಶಿವನಾರಾಯಣ ನೆಲಕ್ಕೆ ಬಿದ್ದಾಗ ಮನೀಶ್ ತನ್ನ ಅಣ್ಣ ಮನೋಜ್​ನನ್ನು ಹಿಡಿಯಲು ಯತ್ನಿಸಿದ್ದಾರೆ. ಆಗ ಮನೋಜ್ ತನ್ನ ತಮ್ಮ ಮನೀಶ್ ಮೇಲೂ ಗುಂಡು ಹಾರಿಸಿದ್ದಾರೆ.

ಗುಂಡಿನ ಸದ್ದು ಕೇಳಿದ ಅವರ ಚಿಕ್ಕಮ್ಮ ಅವಧ್ರಾಜಿ (65) ಮನೋಜ್ ಅವರನ್ನು ಹಿಡಿಯಲು ಪ್ರಯತ್ನಿಸಿದರು. ಆದರೆ ಮನೋಜ್ ಅವರಿಗೆ ದೊಣ್ಣೆಯಿಂದ ಹೊಡೆದು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಘಟನೆಯ ನಂತರ, ಮನೋಜ್ ತಮ್ಮ ಲೈಸೆನ್ಸ್ ಪಡೆದ ಪಿಸ್ತೂಲ್‌ನೊಂದಿಗೆ ಕೆಲವು ಗಂಟೆಗಳ ನಂತರ ಕಪ್ತಂಗಂಜ್ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: Murder: ಗಂಡನ ಉಗುರಿನಲ್ಲಿದ್ದ ರಕ್ತದ ಕಲೆಯಿಂದ ಬಯಲಾಯ್ತು ಹೆಂಡತಿ ಕೊಲೆಯ ರಹಸ್ಯ!

ಮನೋಜ್‌ನನ್ನು ಬಂಧಿಸಲಾಗಿದ್ದು, ಈ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಜಂಗಢದ ಸರ್ಕಲ್ ಅಧಿಕಾರಿ ಲಲ್ತಾ ಪ್ರಸಾದ್ ತಿಳಿಸಿದ್ದಾರೆ. ಮನೀಷ್ 6 ವರ್ಷದವನಾಗಿದ್ದಾಗ ಅವಧ್ರಾಜಿ ದತ್ತು ಪಡೆದಿರುವುದು ಪ್ರಾಥಮಿಕ ವಿಚಾರಣೆ ವೇಳೆ ಪೊಲೀಸರಿಗೆ ತಿಳಿದು ಬಂದಿದೆ ಎಂದು ಕಪ್ತಂಗಂಜ್ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:49 am, Thu, 23 June 22

Follow Us
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು